AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 5785 ದಿನಗಳ ಬಳಿಕವೂ ಹಳೆಯ ಅಧ್ಯಾಯ ಮುಂದುವರೆಸಿದ RCB

IPL 2024: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಉದ್ಘಾಟನಾ ಪಂದ್ಯದಲ್ಲಿ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಿಎಸ್​ಕೆ ಆಘಾತ ನೀಡಿದೆ. ಮೊದಲ ಪಂದ್ಯದಲ್ಲೇ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಸೂಪರ್​ ಆಗಿಯೇ ಐಪಿಎಲ್ ಅಭಿಯಾನ ಆರಂಭಿಸಿದೆ.

TV9 Web
| Edited By: |

Updated on:Mar 23, 2024 | 6:29 AM

Share
ಇದು RCBಯ ಹೊಸ ಅಧ್ಯಾಯ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ (IPL 2024) ಅಭಿಯಾನ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5785 ದಿನಗಳ ಬಳಿಕವೂ ಹಳೆಯ ಅಧ್ಯಾಯವನ್ನು ಮುಂದುವರೆಸಿದೆ. ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಮತ್ತೊಮ್ಮೆ ಆರ್​ಸಿಬಿ ಮುಗ್ಗರಿಸಿದೆ.

ಇದು RCBಯ ಹೊಸ ಅಧ್ಯಾಯ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ (IPL 2024) ಅಭಿಯಾನ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5785 ದಿನಗಳ ಬಳಿಕವೂ ಹಳೆಯ ಅಧ್ಯಾಯವನ್ನು ಮುಂದುವರೆಸಿದೆ. ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಮತ್ತೊಮ್ಮೆ ಆರ್​ಸಿಬಿ ಮುಗ್ಗರಿಸಿದೆ.

1 / 6
ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

2 / 6
174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

3 / 6
ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಸಿಎಸ್​ಕೆ ವಿರುದ್ಧ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಮೈದಾನದಲ್ಲಿ ಗೆಲುವು ಕಂಡಿಲ್ಲ.

ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಸಿಎಸ್​ಕೆ ವಿರುದ್ಧ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಮೈದಾನದಲ್ಲಿ ಗೆಲುವು ಕಂಡಿಲ್ಲ.

4 / 6
2008 ರಲ್ಲಿ ನಡೆದ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ 112 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಆರ್​ಸಿಬಿ 14 ರನ್​ಗಳ ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ ಆರ್​ಸಿಬಿ ತಂಡವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಗೆಲುವು ದಾಖಲಿಸಿಲ್ಲ.

2008 ರಲ್ಲಿ ನಡೆದ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ 112 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಆರ್​ಸಿಬಿ 14 ರನ್​ಗಳ ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ ಆರ್​ಸಿಬಿ ತಂಡವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಗೆಲುವು ದಾಖಲಿಸಿಲ್ಲ.

5 / 6
ಇಂಟ್ರೆಸ್ಟಿಂಗ್ ವಿಷಯ ಎಂದರೆ, ಆರ್​ಸಿಬಿ ಚೆಪಾಕ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದಾಗ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರಲಿಲ್ಲ. ಸಿಎಸ್​ಕೆ ತಂಡದ ಈಗಿನ ಕೋಚ್ ಸ್ಟೀಫನ್ ಫ್ಲೆಮಿಂಗ್ ಅಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರಾಗಿದ್ದರು. ಇದೀಗ ಕಾಲವೇ ಉರುಳಿದಿದೆ. ಆದರೆ ಹೊಸ ಅಧ್ಯಾಯದೊಂದಿಗೆ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ಆರ್​ಸಿಬಿ 16 ವರ್ಷಗಳ ಹಳೆಯ ಅಧ್ಯಾಯವನ್ನೇ ಮುಂದುವರೆಸಿದೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ, ಆರ್​ಸಿಬಿ ಚೆಪಾಕ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದಾಗ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರಲಿಲ್ಲ. ಸಿಎಸ್​ಕೆ ತಂಡದ ಈಗಿನ ಕೋಚ್ ಸ್ಟೀಫನ್ ಫ್ಲೆಮಿಂಗ್ ಅಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರಾಗಿದ್ದರು. ಇದೀಗ ಕಾಲವೇ ಉರುಳಿದಿದೆ. ಆದರೆ ಹೊಸ ಅಧ್ಯಾಯದೊಂದಿಗೆ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ಆರ್​ಸಿಬಿ 16 ವರ್ಷಗಳ ಹಳೆಯ ಅಧ್ಯಾಯವನ್ನೇ ಮುಂದುವರೆಸಿದೆ.

6 / 6

Published On - 6:28 am, Sat, 23 March 24

Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ