AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಓ ದೇವರೇ ಗೆಲ್ಸಪ್ಪಾ ಸಾಕು… ದೇವರ ಮೊರೆ ಹೋದ RCB ಅಭಿಮಾನಿ..!

IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 147 ರನ್​ ಗಳಿಸಿ ಆಲೌಟ್ ಆಯಿತು. 148 ರನ್​ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ನಾಲ್ಕು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 05, 2024 | 10:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ RCB ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ (GT) ತಂಡವು 19.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ RCB ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ (GT) ತಂಡವು 19.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಗಿತ್ತು.

1 / 6
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಆರ್​ಸಿಬಿ ತಂಡವು ಮೊದಲ 6 ಓವರ್​ಗಳಲ್ಲೇ 92 ರನ್​ ಬಾರಿಸಿ ಗೆಲುವು ಖಚಿತಪಡಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಆರ್​ಸಿಬಿ ತಂಡವು ಮೊದಲ 6 ಓವರ್​ಗಳಲ್ಲೇ 92 ರನ್​ ಬಾರಿಸಿ ಗೆಲುವು ಖಚಿತಪಡಿಸಿದ್ದರು.

2 / 6
ಆದರೆ 7ನೇ ಓವರ್​ನಿಂದ ಪಂದ್ಯವು ನಾಟಕೀಯ ತಿರುವು ಪಡೆದುಕೊಂಡಿತು. ವಿಕೆಟ್ ನಷ್ಟವಿಲ್ಲದೆ 92 ರನ್ ಕಲೆಹಾಕಿದ್ದ ಆರ್​ಸಿಬಿ ತಂಡವು 117 ರನ್​ಗಳಿಸುವಷ್ಟರಲ್ಲಿ 6 ವಿಕೆಟ್​ ಕಳೆದುಕೊಂಡಿತು. ಒಂದಾರ್ಥದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು.

ಆದರೆ 7ನೇ ಓವರ್​ನಿಂದ ಪಂದ್ಯವು ನಾಟಕೀಯ ತಿರುವು ಪಡೆದುಕೊಂಡಿತು. ವಿಕೆಟ್ ನಷ್ಟವಿಲ್ಲದೆ 92 ರನ್ ಕಲೆಹಾಕಿದ್ದ ಆರ್​ಸಿಬಿ ತಂಡವು 117 ರನ್​ಗಳಿಸುವಷ್ಟರಲ್ಲಿ 6 ವಿಕೆಟ್​ ಕಳೆದುಕೊಂಡಿತು. ಒಂದಾರ್ಥದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು.

3 / 6
ಇತ್ತ ಆರ್​ಸಿಬಿ ತಂಡದ ದಿಢೀರ್ ಕುಸಿತದಿಂದ ಅಭಿಮಾನಿಗಳು ಕೂಡ ದಂಗಾದರು. ಮೊದಲ 6 ಓವರ್​ಗಳ ವೇಳೆ ಸಖತ್ ಜೋಶ್​​ನೊಂದಿಗೆ ಘೋಷವಾಕ್ಯ ಮೊಳಗಿಸಿದ್ದ ರಾಯಲ್ ಫ್ಯಾನ್ಸ್​ ಆ ಬಳಿಕ ಫುಲ್ ಸೈಲೆಂಟ್ ಆದರು. ಎಲ್ಲಿ ಪಂದ್ಯ ಕೈ ತಪ್ಪಿ ಹೋಗಲಿದೆಯೆಂಬ ಭೀತಿ ಎದುರಿಸಿದರು.

ಇತ್ತ ಆರ್​ಸಿಬಿ ತಂಡದ ದಿಢೀರ್ ಕುಸಿತದಿಂದ ಅಭಿಮಾನಿಗಳು ಕೂಡ ದಂಗಾದರು. ಮೊದಲ 6 ಓವರ್​ಗಳ ವೇಳೆ ಸಖತ್ ಜೋಶ್​​ನೊಂದಿಗೆ ಘೋಷವಾಕ್ಯ ಮೊಳಗಿಸಿದ್ದ ರಾಯಲ್ ಫ್ಯಾನ್ಸ್​ ಆ ಬಳಿಕ ಫುಲ್ ಸೈಲೆಂಟ್ ಆದರು. ಎಲ್ಲಿ ಪಂದ್ಯ ಕೈ ತಪ್ಪಿ ಹೋಗಲಿದೆಯೆಂಬ ಭೀತಿ ಎದುರಿಸಿದರು.

4 / 6
ಇದರ ನಡುವೆ ಆರ್​ಸಿಬಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದರು. ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್​ಸಿಬಿ ದಿಢೀರ್ ಕುಸಿತಕ್ಕೊಳಗಾಗುತ್ತಿದ್ದಂತೆ ಅಭಿಮಾನಿಯೊಬ್ಬರು ದೇವರಲ್ಲಿ ಪ್ರಾರ್ಥಿಸುತ್ತಿರುವುದು ಕಂಡು ಬಂತು. ಇದೀಗ ಆರ್​ಸಿಬಿ ಲೇಡಿ ಫ್ಯಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದರ ನಡುವೆ ಆರ್​ಸಿಬಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿರುವುದನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದರು. ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್​ಸಿಬಿ ದಿಢೀರ್ ಕುಸಿತಕ್ಕೊಳಗಾಗುತ್ತಿದ್ದಂತೆ ಅಭಿಮಾನಿಯೊಬ್ಬರು ದೇವರಲ್ಲಿ ಪ್ರಾರ್ಥಿಸುತ್ತಿರುವುದು ಕಂಡು ಬಂತು. ಇದೀಗ ಆರ್​ಸಿಬಿ ಲೇಡಿ ಫ್ಯಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
6 ಓವರ್​ಗಳಲ್ಲಿ 92 ರನ್ ಬಾರಿಸಿದರೂ ಆರ್​ಸಿಬಿ ಬ್ಯಾಟಿಂಗ್​ ಬಗ್ಗೆ ಅಭಿಮಾನಿಗೆ ನಂಬಿಕೆಯೇ ಇರಲಿಲ್ಲ. ಹೀಗಾಗಿಯೇ ಆರ್​ಸಿಬಿ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಆರ್​ಸಿಬಿ ಗೆಲುವಿಗೆ ಈಕೆಯ ಪ್ರಾರ್ಥನೆ ಕೂಡ ಕಾರಣ ಎಂದು ಕಿಚಾಯಿಸಿದ್ದಾರೆ.

6 ಓವರ್​ಗಳಲ್ಲಿ 92 ರನ್ ಬಾರಿಸಿದರೂ ಆರ್​ಸಿಬಿ ಬ್ಯಾಟಿಂಗ್​ ಬಗ್ಗೆ ಅಭಿಮಾನಿಗೆ ನಂಬಿಕೆಯೇ ಇರಲಿಲ್ಲ. ಹೀಗಾಗಿಯೇ ಆರ್​ಸಿಬಿ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಆರ್​ಸಿಬಿ ಗೆಲುವಿಗೆ ಈಕೆಯ ಪ್ರಾರ್ಥನೆ ಕೂಡ ಕಾರಣ ಎಂದು ಕಿಚಾಯಿಸಿದ್ದಾರೆ.

6 / 6
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!