AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನಮ್ಮ ಟಾರ್ಗೆಟ್ 300 ರನ್ಸ್: RCB ಮುಂದಿನ ಎದುರಾಳಿ SRH

IPL 2024: ಐಪಿಎಲ್ 2024 ರಲ್ಲಿ ಈವರೆಗೆ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದನ್ನು ಬಿಟ್ಟರೆ, ಉಳಿದ 7 ಪಂದ್ಯಗಳಲ್ಲೂ ಆರ್​ಸಿಬಿ ಮುಗ್ಗರಿಸಿದೆ. ಇದೀಗ ತನ್ನ 9ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

TV9 Web
| Edited By: |

Updated on: Apr 22, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಮೂರು 250 ಸ್ಕೋರ್ ​ಗಳಿಸಿರುವ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಮುಂದಿನ ಗುರಿ 300 ರನ್​ಗಳು. ಇದನ್ನು ಹೇಳಿದ್ದು ಮತ್ಯಾರೂ ಅಲ್ಲ, ಎಸ್​ಆರ್​ಹೆಚ್ ತಂಡದ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್. ಅದರಂತೆ ಮುಂದಿನ ಪಂದ್ಯದಲ್ಲಿ 300 ರನ್ ಕಲೆಹಾಕುವ ವಿಶ್ವಾಸದಲ್ಲಿದೆ ಸನ್​ರೈಸರ್ಸ್ ಹೈದರಾಬಾದ್ ತಂಡ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಮೂರು 250 ಸ್ಕೋರ್ ​ಗಳಿಸಿರುವ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಮುಂದಿನ ಗುರಿ 300 ರನ್​ಗಳು. ಇದನ್ನು ಹೇಳಿದ್ದು ಮತ್ಯಾರೂ ಅಲ್ಲ, ಎಸ್​ಆರ್​ಹೆಚ್ ತಂಡದ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್. ಅದರಂತೆ ಮುಂದಿನ ಪಂದ್ಯದಲ್ಲಿ 300 ರನ್ ಕಲೆಹಾಕುವ ವಿಶ್ವಾಸದಲ್ಲಿದೆ ಸನ್​ರೈಸರ್ಸ್ ಹೈದರಾಬಾದ್ ತಂಡ.

1 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡದ ಮುಂದಿನ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ಎಸ್​ಆರ್​ಹೆಚ್ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿದೆ.

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡದ ಮುಂದಿನ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ಎಸ್​ಆರ್​ಹೆಚ್ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿದೆ.

2 / 5
ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು 287 ರನ್​ ಬಾರಿಸಿ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿತ್ತು. ಇದೀಗ ಎಸ್​ಆರ್​ಹೆಚ್ ತಂಡವು 300 ರನ್​ಗಳ ಗುರಿಯೊಂದಿಗೆ ಮತ್ತೆ ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದೆ.

ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವು 287 ರನ್​ ಬಾರಿಸಿ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿತ್ತು. ಇದೀಗ ಎಸ್​ಆರ್​ಹೆಚ್ ತಂಡವು 300 ರನ್​ಗಳ ಗುರಿಯೊಂದಿಗೆ ಮತ್ತೆ ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದೆ.

3 / 5
ಈಗಾಗಲೇ ಆರ್​ಸಿಬಿ ವಿರುದ್ಧ 287, ಮುಂಬೈ ಇಂಡಿಯನ್ಸ್ ವಿರುದ್ಧ 277 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್ ಬಾರಿಸಿರುವ ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು 300 ರನ್​ ಕಲೆಹಾಕುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದಾರೆ.

ಈಗಾಗಲೇ ಆರ್​ಸಿಬಿ ವಿರುದ್ಧ 287, ಮುಂಬೈ ಇಂಡಿಯನ್ಸ್ ವಿರುದ್ಧ 277 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 266 ರನ್ ಬಾರಿಸಿರುವ ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು 300 ರನ್​ ಕಲೆಹಾಕುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯುವ ಹುಮ್ಮಸ್ಸಿನಲ್ಲಿದ್ದಾರೆ.

4 / 5
ಇತ್ತ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಪಂದ್ಯ ನಿರ್ಣಾಯಕ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್​ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಎಸ್​ಆರ್​ಹೆಚ್ ಪಾಲಿಗೆ 300 ರನ್​ಗಳ ಗುರಿಯ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ರನ್​ ಮಳೆಯನ್ನಂತು ನಿರೀಕ್ಷಿಸಬಹುದು.

ಇತ್ತ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಪಂದ್ಯ ನಿರ್ಣಾಯಕ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್​ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಎಸ್​ಆರ್​ಹೆಚ್ ಪಾಲಿಗೆ 300 ರನ್​ಗಳ ಗುರಿಯ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ರನ್​ ಮಳೆಯನ್ನಂತು ನಿರೀಕ್ಷಿಸಬಹುದು.

5 / 5
Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ