IPL 2024: RCB ಪರ ಒಂದೇ ಒಂದು ಪಂದ್ಯವಾಡದ ಆಟಗಾರರು ಯಾರು ಗೊತ್ತಾ?
IPL 2024 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಒಟ್ಟು 15 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 7 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, 8 ರಲ್ಲಿ ಸೋಲನುಭವಿಸಿದೆ. ಅದರಲ್ಲೂ ಪ್ಲೇಆಫ್ ಹಂತಕ್ಕೇರಿದ್ದ ಆರ್ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಐಪಿಎಲ್ ಅಭಿಯಾನ ಅಂತ್ಯಗೊಳಿಸಿತ್ತು.
Updated on: May 28, 2024 | 8:08 AM

ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಒಟ್ಟು 25 ಆಟಗಾರರ ಬಳಗದೊಂದಿಗೆ ಕಾಣಿಸಿಕೊಂಡಿತ್ತು. ಈ ಇಪ್ಪತ್ತೈದು ಆಟಗಾರರಲ್ಲಿ 22 ಮಂದಿ ಈ ಬಾರಿ ಕಣಕ್ಕಿಳಿದಿದ್ದಾರೆ. ಆದರೆ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಸೌಭಾಗ್ಯ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ...

1- ರಜನ್ ಕುಮಾರ್ (ಬೌಲರ್): ಐಪಿಎಲ್ 2023 ರಲ್ಲಿ ಆರ್ಸಿಬಿ 70 ಲಕ್ಷ ರೂ.ಗೆ ಖರೀದಿಸಿದ್ದ ರಜನ್ ಕುಮಾರ್ ಕಳೆದ ಸೀಸನ್ನಲ್ಲಿ ಒಂದೇ ಒಂದು ಪಂದ್ಯವಾಡಿರಲಿಲ್ಲ. ಇದಾಗ್ಯೂ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಬಾರಿ ಕೂಡ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ನೀಡಿಲ್ಲ.

2- ಟಾಮ್ ಕರನ್ (ಆಲ್ರೌಂಡರ್): ಇಂಗ್ಲೆಂಡ್ನ ಆಲ್ರೌಂಡರ್ ಟಾಮ್ ಕರನ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಆರ್ಸಿಬಿ ಬರೋಬ್ಬರಿ 1.5 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 15 ಪಂದ್ಯಗಳಲ್ಲಿ ಒಮ್ಮೆಯೂ ಕರನ್ ಅವರನ್ನು ಕಣಕ್ಕಿಳಿಸಿರಲಿಲ್ಲ.

3- ಮನೋಜ್ ಭಾಂಡಗೆ (ಆಲ್ರೌಂಡರ್): ಐಪಿಎಲ್ 2023 ರಿಂದ ಆರ್ಸಿಬಿ ತಂಡದಲ್ಲಿರುವ ಕನ್ನಡಿಗ ಮನೋಜ್ ಭಾಂಡಗೆಗೆ ಕಳೆದ ಸೀಸನ್ನಲ್ಲಿ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡಿರಲಿಲ್ಲ. ಇದಾಗ್ಯೂ ಈ ಬಾರಿ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದ ಭಾಂಡಗೆ ಅವರಿಗೂ ಒಂದೇ ಒಂದು ಚಾನ್ಸ್ ನೀಡಲಾಗಿಲ್ಲ. ಇನ್ನು ಈ ಬಾರಿ ಆರ್ಸಿಬಿ ಪರ ಕೇವಲ 1 ಪಂದ್ಯವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1- ಸುಯಶ್ ಪ್ರಭುದೇಸಾಯಿ (ಬ್ಯಾಟರ್): ಈ ಬಾರಿಯ ಐಪಿಎಲ್ನಲ್ಲಿ ಸುಯಶ್ ಪ್ರಭುದೇಸಾಯಿ ಕೇವಲ ಒಂದು ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ 24 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

2- ಹಿಮಾಂಶು ಶರ್ಮಾ (ಬೌಲರ್): ಕಳೆದ ಸೀಸನ್ನಿಂದ ಆರ್ಸಿಬಿ ತಂಡದಲ್ಲಿರುವ ಸ್ಪಿನ್ನರ್ ಹಿಮಾಂಶು ಶರ್ಮಾ ಈ ಬಾರಿ ಆಡಿದ್ದು ಕೇವಲ 1 ಮ್ಯಾಚ್ ಮಾತ್ರ. ಈ ಪಂದ್ಯದಲ್ಲಿ 2 ಓವರ್ಗಳನ್ನು ಎಸೆದಿದ್ದ ಅವರು 29 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿಲ್ಲ.

3- ಆಕಾಶ್ ದೀಪ್ (ಬೌಲರ್): ಈ ಬಾರಿಯ ಐಪಿಎಲ್ನಲ್ಲಿ ಆಕಾಶ್ ದೀಪ್ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಆದರೆ ಈ ಪಂದ್ಯದಲ್ಲಿ ಎಸೆದ 21 ಎಸೆತಗಳಲ್ಲಿ 55 ರನ್ ನೀಡುವ ಮೂಲಕ ದುಬಾರಿಯಾಗಿ ಪರಿಣಮಿಸಿದ್ದರು. ಹೀಗಾಗಿ ಆ ಬಳಿಕ ಅವರಿಗೆ ಚಾನ್ಸ್ ನೀಡಲಾಗಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




