AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪರ ಒಂದೇ ಒಂದು ಪಂದ್ಯವಾಡದ ಆಟಗಾರರು ಯಾರು ಗೊತ್ತಾ?

IPL 2024 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಒಟ್ಟು 15 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, 8 ರಲ್ಲಿ ಸೋಲನುಭವಿಸಿದೆ. ಅದರಲ್ಲೂ ಪ್ಲೇಆಫ್ ಹಂತಕ್ಕೇರಿದ್ದ ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಐಪಿಎಲ್ ಅಭಿಯಾನ ಅಂತ್ಯಗೊಳಿಸಿತ್ತು.

ಝಾಹಿರ್ ಯೂಸುಫ್
|

Updated on: May 28, 2024 | 8:08 AM

Share
ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಒಟ್ಟು 25 ಆಟಗಾರರ ಬಳಗದೊಂದಿಗೆ ಕಾಣಿಸಿಕೊಂಡಿತ್ತು. ಈ ಇಪ್ಪತ್ತೈದು ಆಟಗಾರರಲ್ಲಿ 22 ಮಂದಿ ಈ ಬಾರಿ ಕಣಕ್ಕಿಳಿದಿದ್ದಾರೆ. ಆದರೆ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಸೌಭಾಗ್ಯ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ...

ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಒಟ್ಟು 25 ಆಟಗಾರರ ಬಳಗದೊಂದಿಗೆ ಕಾಣಿಸಿಕೊಂಡಿತ್ತು. ಈ ಇಪ್ಪತ್ತೈದು ಆಟಗಾರರಲ್ಲಿ 22 ಮಂದಿ ಈ ಬಾರಿ ಕಣಕ್ಕಿಳಿದಿದ್ದಾರೆ. ಆದರೆ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಸೌಭಾಗ್ಯ ಸಿಕ್ಕಿಲ್ಲ. ಆ ಆಟಗಾರರು ಯಾರೆಂದರೆ...

1 / 8
1- ರಜನ್ ಕುಮಾರ್ (ಬೌಲರ್): ಐಪಿಎಲ್ 2023 ರಲ್ಲಿ ಆರ್​ಸಿಬಿ 70 ಲಕ್ಷ ರೂ.ಗೆ ಖರೀದಿಸಿದ್ದ ರಜನ್ ಕುಮಾರ್ ಕಳೆದ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವಾಡಿರಲಿಲ್ಲ. ಇದಾಗ್ಯೂ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಬಾರಿ ಕೂಡ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ನೀಡಿಲ್ಲ.

1- ರಜನ್ ಕುಮಾರ್ (ಬೌಲರ್): ಐಪಿಎಲ್ 2023 ರಲ್ಲಿ ಆರ್​ಸಿಬಿ 70 ಲಕ್ಷ ರೂ.ಗೆ ಖರೀದಿಸಿದ್ದ ರಜನ್ ಕುಮಾರ್ ಕಳೆದ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವಾಡಿರಲಿಲ್ಲ. ಇದಾಗ್ಯೂ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಬಾರಿ ಕೂಡ ಅವರಿಗೆ ಪಾದಾರ್ಪಣೆ ಮಾಡುವ ಅವಕಾಶ ನೀಡಿಲ್ಲ.

2 / 8
2- ಟಾಮ್ ಕರನ್ (ಆಲ್​ರೌಂಡರ್): ಇಂಗ್ಲೆಂಡ್​ನ ಆಲ್​ರೌಂಡರ್ ಟಾಮ್ ಕರನ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ಬರೋಬ್ಬರಿ 1.5 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 15 ಪಂದ್ಯಗಳಲ್ಲಿ ಒಮ್ಮೆಯೂ ಕರನ್ ಅವರನ್ನು ಕಣಕ್ಕಿಳಿಸಿರಲಿಲ್ಲ.

2- ಟಾಮ್ ಕರನ್ (ಆಲ್​ರೌಂಡರ್): ಇಂಗ್ಲೆಂಡ್​ನ ಆಲ್​ರೌಂಡರ್ ಟಾಮ್ ಕರನ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ಬರೋಬ್ಬರಿ 1.5 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 15 ಪಂದ್ಯಗಳಲ್ಲಿ ಒಮ್ಮೆಯೂ ಕರನ್ ಅವರನ್ನು ಕಣಕ್ಕಿಳಿಸಿರಲಿಲ್ಲ.

3 / 8
3- ಮನೋಜ್ ಭಾಂಡಗೆ (ಆಲ್​ರೌಂಡರ್): ಐಪಿಎಲ್ 2023 ರಿಂದ ಆರ್​ಸಿಬಿ ತಂಡದಲ್ಲಿರುವ ಕನ್ನಡಿಗ ಮನೋಜ್ ಭಾಂಡಗೆಗೆ ಕಳೆದ ಸೀಸನ್​ನಲ್ಲಿ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡಿರಲಿಲ್ಲ. ಇದಾಗ್ಯೂ ಈ ಬಾರಿ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದ ಭಾಂಡಗೆ ಅವರಿಗೂ ಒಂದೇ ಒಂದು ಚಾನ್ಸ್ ನೀಡಲಾಗಿಲ್ಲ. ಇನ್ನು ಈ ಬಾರಿ ಆರ್​ಸಿಬಿ ಪರ ಕೇವಲ 1 ಪಂದ್ಯವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3- ಮನೋಜ್ ಭಾಂಡಗೆ (ಆಲ್​ರೌಂಡರ್): ಐಪಿಎಲ್ 2023 ರಿಂದ ಆರ್​ಸಿಬಿ ತಂಡದಲ್ಲಿರುವ ಕನ್ನಡಿಗ ಮನೋಜ್ ಭಾಂಡಗೆಗೆ ಕಳೆದ ಸೀಸನ್​ನಲ್ಲಿ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡಿರಲಿಲ್ಲ. ಇದಾಗ್ಯೂ ಈ ಬಾರಿ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದ ಭಾಂಡಗೆ ಅವರಿಗೂ ಒಂದೇ ಒಂದು ಚಾನ್ಸ್ ನೀಡಲಾಗಿಲ್ಲ. ಇನ್ನು ಈ ಬಾರಿ ಆರ್​ಸಿಬಿ ಪರ ಕೇವಲ 1 ಪಂದ್ಯವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

4 / 8
1- ಸುಯಶ್ ಪ್ರಭುದೇಸಾಯಿ (ಬ್ಯಾಟರ್): ಈ ಬಾರಿಯ ಐಪಿಎಲ್​ನಲ್ಲಿ ಸುಯಶ್ ಪ್ರಭುದೇಸಾಯಿ ಕೇವಲ ಒಂದು ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ 24 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

1- ಸುಯಶ್ ಪ್ರಭುದೇಸಾಯಿ (ಬ್ಯಾಟರ್): ಈ ಬಾರಿಯ ಐಪಿಎಲ್​ನಲ್ಲಿ ಸುಯಶ್ ಪ್ರಭುದೇಸಾಯಿ ಕೇವಲ ಒಂದು ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ 24 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

5 / 8
2- ಹಿಮಾಂಶು ಶರ್ಮಾ (ಬೌಲರ್): ಕಳೆದ ಸೀಸನ್​​ನಿಂದ ಆರ್​ಸಿಬಿ ತಂಡದಲ್ಲಿರುವ ಸ್ಪಿನ್ನರ್ ಹಿಮಾಂಶು ಶರ್ಮಾ ಈ ಬಾರಿ ಆಡಿದ್ದು ಕೇವಲ 1 ಮ್ಯಾಚ್ ಮಾತ್ರ. ಈ ಪಂದ್ಯದಲ್ಲಿ 2 ಓವರ್​ಗಳನ್ನು ಎಸೆದಿದ್ದ ಅವರು 29 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿಲ್ಲ.

2- ಹಿಮಾಂಶು ಶರ್ಮಾ (ಬೌಲರ್): ಕಳೆದ ಸೀಸನ್​​ನಿಂದ ಆರ್​ಸಿಬಿ ತಂಡದಲ್ಲಿರುವ ಸ್ಪಿನ್ನರ್ ಹಿಮಾಂಶು ಶರ್ಮಾ ಈ ಬಾರಿ ಆಡಿದ್ದು ಕೇವಲ 1 ಮ್ಯಾಚ್ ಮಾತ್ರ. ಈ ಪಂದ್ಯದಲ್ಲಿ 2 ಓವರ್​ಗಳನ್ನು ಎಸೆದಿದ್ದ ಅವರು 29 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿಲ್ಲ.

6 / 8
3- ಆಕಾಶ್ ದೀಪ್ (ಬೌಲರ್): ಈ ಬಾರಿಯ ಐಪಿಎಲ್​ನಲ್ಲಿ ಆಕಾಶ್ ದೀಪ್ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಆದರೆ ಈ ಪಂದ್ಯದಲ್ಲಿ ಎಸೆದ 21 ಎಸೆತಗಳಲ್ಲಿ 55 ರನ್ ನೀಡುವ ಮೂಲಕ ದುಬಾರಿಯಾಗಿ ಪರಿಣಮಿಸಿದ್ದರು. ಹೀಗಾಗಿ ಆ ಬಳಿಕ ಅವರಿಗೆ ಚಾನ್ಸ್ ನೀಡಲಾಗಿಲ್ಲ.

3- ಆಕಾಶ್ ದೀಪ್ (ಬೌಲರ್): ಈ ಬಾರಿಯ ಐಪಿಎಲ್​ನಲ್ಲಿ ಆಕಾಶ್ ದೀಪ್ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಆದರೆ ಈ ಪಂದ್ಯದಲ್ಲಿ ಎಸೆದ 21 ಎಸೆತಗಳಲ್ಲಿ 55 ರನ್ ನೀಡುವ ಮೂಲಕ ದುಬಾರಿಯಾಗಿ ಪರಿಣಮಿಸಿದ್ದರು. ಹೀಗಾಗಿ ಆ ಬಳಿಕ ಅವರಿಗೆ ಚಾನ್ಸ್ ನೀಡಲಾಗಿಲ್ಲ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

8 / 8
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?