AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCBಗೆ ಪ್ಲೇಆಫ್​ ಪ್ರವೇಶಿಸಲು ಇನ್ನೂ ಇದೆ ಅವಕಾಶ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ, ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಸತತ 6 ಪಂದ್ಯಗಳಲ್ಲಿ ಸೋಲನುಭವಿಸಿದೆ.

TV9 Web
| Edited By: |

Updated on: Apr 22, 2024 | 8:02 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಅಲ್ಲದೆ 7 ಸೋಲುಗಳೊಂದಿಗೆ ಇದೀಗ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಅಲ್ಲದೆ 7 ಸೋಲುಗಳೊಂದಿಗೆ ಇದೀಗ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

1 / 6
ಇದಾಗ್ಯೂ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ ಉಳಿದ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಫಾಫ್ ಪಡೆಗೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು. ಹೀಗಾಗಿ ಇನ್ನೊಂದಷ್ಟು ಪಂದ್ಯಗಳವರೆಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಜೀವಂತವಿರಲಿದೆ.

ಇದಾಗ್ಯೂ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ ಉಳಿದ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಫಾಫ್ ಪಡೆಗೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು. ಹೀಗಾಗಿ ಇನ್ನೊಂದಷ್ಟು ಪಂದ್ಯಗಳವರೆಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಜೀವಂತವಿರಲಿದೆ.

2 / 6
ಅಂದರೆ ಇಲ್ಲಿ ಯಾವುದೇ ತಂಡ ಪ್ಲೇಆಫ್ ಹಂತಕ್ಕೇರಿಲ್ಲ. ಐಪಿಎಲ್​ನಲ್ಲಿ 16 ಅಂಕಗಳನ್ನು ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸುವುದನ್ನು ಖಚಿತ ಪಡಿಸಲಿದೆ. ಇಲ್ಲಿ ರಾಜಸ್ಥಾನ್ ರಾಯಲ್ಸ್ 12 ಅಂಕಗಳನ್ನು ಪಡೆದಿದ್ದರೆ, ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ತಲಾ 8 ಅಂಕಗಳನ್ನು ಹೊಂದಿದೆ.

ಅಂದರೆ ಇಲ್ಲಿ ಯಾವುದೇ ತಂಡ ಪ್ಲೇಆಫ್ ಹಂತಕ್ಕೇರಿಲ್ಲ. ಐಪಿಎಲ್​ನಲ್ಲಿ 16 ಅಂಕಗಳನ್ನು ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸುವುದನ್ನು ಖಚಿತ ಪಡಿಸಲಿದೆ. ಇಲ್ಲಿ ರಾಜಸ್ಥಾನ್ ರಾಯಲ್ಸ್ 12 ಅಂಕಗಳನ್ನು ಪಡೆದಿದ್ದರೆ, ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ತಲಾ 8 ಅಂಕಗಳನ್ನು ಹೊಂದಿದೆ.

3 / 6
ಈ ಮೂರು ತಂಡಗಳು ಮುಂದಿನ ಪಂದ್ಯಗಳ ಮೂಲಕ 16 ಅಂಕಗಳನ್ನು ಸಂಪಾದಿಸಿ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆ ಹೆಚ್ಚಿದೆ. ಇನ್ನು ನಾಲ್ಕನೇ ತಂಡ 16 ಅಂಕಗಳನ್ನು ಪಡೆಯುವರೆಗೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

ಈ ಮೂರು ತಂಡಗಳು ಮುಂದಿನ ಪಂದ್ಯಗಳ ಮೂಲಕ 16 ಅಂಕಗಳನ್ನು ಸಂಪಾದಿಸಿ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆ ಹೆಚ್ಚಿದೆ. ಇನ್ನು ನಾಲ್ಕನೇ ತಂಡ 16 ಅಂಕಗಳನ್ನು ಪಡೆಯುವರೆಗೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

4 / 6
ಸಾಮಾನ್ಯವಾಗಿ ಟಾಪ್-3 ತಂಡಗಳು 16 ಅಂಕಗಳನ್ನು ಕಲೆಹಾಕಿದರೆ 4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ತಂಡವು ​14 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​​ಗೆ ಪ್ರವೇಶಿಸುವ ಸಾಧ್ಯತೆ ಹೆಚ್ಚು. ಇತ್ತ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದರೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು.

ಸಾಮಾನ್ಯವಾಗಿ ಟಾಪ್-3 ತಂಡಗಳು 16 ಅಂಕಗಳನ್ನು ಕಲೆಹಾಕಿದರೆ 4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ತಂಡವು ​14 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​​ಗೆ ಪ್ರವೇಶಿಸುವ ಸಾಧ್ಯತೆ ಹೆಚ್ಚು. ಇತ್ತ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದರೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು.

5 / 6
ಈ ಮೂಲಕ ಲೀಗ್ ಹಂತದ ಮುಕ್ತಾಯದ ವೇಳೆಗೆ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಎದುರು ನೋಡಬಹುದು. ಅದರಂತೆ ಅಗ್ರ ನಾಲ್ಕು ತಂಡಗಳು 16 ಅಂಕಗಳನ್ನು ಗಳಿಸುವವರೆಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಅಚ್ಚರಿಪಡಬೇಕಿಲ್ಲ.

ಈ ಮೂಲಕ ಲೀಗ್ ಹಂತದ ಮುಕ್ತಾಯದ ವೇಳೆಗೆ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಎದುರು ನೋಡಬಹುದು. ಅದರಂತೆ ಅಗ್ರ ನಾಲ್ಕು ತಂಡಗಳು 16 ಅಂಕಗಳನ್ನು ಗಳಿಸುವವರೆಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಅಚ್ಚರಿಪಡಬೇಕಿಲ್ಲ.

6 / 6
Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ