AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್​ಸಿಬಿ ಆಡಿದ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ ಜಯ ಸಾಧಿಸಿದೆ. ಇನ್ನುಳಿದ ಎಲ್ಲಾ ಪಂದ್ಯಗಳಲ್ಲೂ ಸೋಲನುಭವಿದೆ.

TV9 Web
| Edited By: |

Updated on: Apr 17, 2024 | 9:22 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಮೊದಲಾರ್ಧದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಸಜ್ಜಾಗುತ್ತಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ದ್ವಿತೀಯಾರ್ಧವನ್ನು ಆರಂಭಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಮೊದಲಾರ್ಧದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಸಜ್ಜಾಗುತ್ತಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ದ್ವಿತೀಯಾರ್ಧವನ್ನು ಆರಂಭಿಸಲಿದೆ.

1 / 6
ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೇರಲು ಆರ್​ಸಿಬಿ ಮೊದಲ ಹೆಜ್ಜೆಯನ್ನಿಡುವ ವಿಶ್ವಾಸದಲ್ಲಿದೆ. ಏಕೆಂದರೆ ಮೊದಲಾರ್ಧದಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಗೆದ್ದಿದ್ದರೂ, ದ್ವಿತೀಯಾರ್ಧದ ಮೂಲಕ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿದೆ.

ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೇರಲು ಆರ್​ಸಿಬಿ ಮೊದಲ ಹೆಜ್ಜೆಯನ್ನಿಡುವ ವಿಶ್ವಾಸದಲ್ಲಿದೆ. ಏಕೆಂದರೆ ಮೊದಲಾರ್ಧದಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಗೆದ್ದಿದ್ದರೂ, ದ್ವಿತೀಯಾರ್ಧದ ಮೂಲಕ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿದೆ.

2 / 6
ಅಂದರೆ ಮುಂದಿನ 7 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದರೆ, 8 ಗೆಲುವುಗಳೊಂದಿಗೆ ಒಟ್ಟು 16 ಅಂಕಗಳನ್ನು ಪಡೆದುಕೊಳ್ಳಲಿದೆ. ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ವಾಡಿಕೆ. ಅದರಂತೆ ಆರ್​ಸಿಬಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದು ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

ಅಂದರೆ ಮುಂದಿನ 7 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದರೆ, 8 ಗೆಲುವುಗಳೊಂದಿಗೆ ಒಟ್ಟು 16 ಅಂಕಗಳನ್ನು ಪಡೆದುಕೊಳ್ಳಲಿದೆ. ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ವಾಡಿಕೆ. ಅದರಂತೆ ಆರ್​ಸಿಬಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದು ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

3 / 6
ಇನ್ನು 7 ಪಂದ್ಯಗಳಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಸೋತರೂ 14 ಅಂಕಗಳನ್ನು ಕಲೆಹಾಕಲು ಅವಕಾಶವಿದೆ. ಇಲ್ಲಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರ 2 ತಂಡಗಳು 18 ಅಥವಾ 20 ಅಂಕಗಳನ್ನು ಪಡೆದುಕೊಂಡರೆ, ನಾಲ್ಕನೇ ಸ್ಥಾನ ಪಡೆಯುವ ತಂಡವೊಂದು 14 ಅಂಕಗಳನ್ನು ಗಳಿಸುವ ಸಾಧ್ಯತೆ ಹೆಚ್ಚು. ಅದರಂತೆ ಆರ್​ಸಿಬಿ 14 ಅಂಕಳಗಳೊಂದಿಗೆ ಉತ್ತಮ ನೆಟ್​ ರನ್ ರೇಟ್ ಸಹಾಯದಿಂದ ಪ್ಲೇಆಫ್ ಹಂತಕ್ಕೇರಬಹುದು.

ಇನ್ನು 7 ಪಂದ್ಯಗಳಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಸೋತರೂ 14 ಅಂಕಗಳನ್ನು ಕಲೆಹಾಕಲು ಅವಕಾಶವಿದೆ. ಇಲ್ಲಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರ 2 ತಂಡಗಳು 18 ಅಥವಾ 20 ಅಂಕಗಳನ್ನು ಪಡೆದುಕೊಂಡರೆ, ನಾಲ್ಕನೇ ಸ್ಥಾನ ಪಡೆಯುವ ತಂಡವೊಂದು 14 ಅಂಕಗಳನ್ನು ಗಳಿಸುವ ಸಾಧ್ಯತೆ ಹೆಚ್ಚು. ಅದರಂತೆ ಆರ್​ಸಿಬಿ 14 ಅಂಕಳಗಳೊಂದಿಗೆ ಉತ್ತಮ ನೆಟ್​ ರನ್ ರೇಟ್ ಸಹಾಯದಿಂದ ಪ್ಲೇಆಫ್ ಹಂತಕ್ಕೇರಬಹುದು.

4 / 6
ಹೀಗಾಗಿ ಮೊದಲಾರ್ಧದಲ್ಲಿ ಒಂದು ಗೆಲುವು ಸಾಧಿಸಿರುವ ಆರ್​ಸಿಬಿ, ದ್ವಿತೀಯಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮುಂದುವರೆದರೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು. ಅದರಂತೆ ಫಾಫ್ ಡುಪ್ಲೆಸಿಸ್ ಪಡೆ ದ್ವಿತೀಯಾರ್ಧದಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿ ಮೊದಲಾರ್ಧದಲ್ಲಿ ಒಂದು ಗೆಲುವು ಸಾಧಿಸಿರುವ ಆರ್​ಸಿಬಿ, ದ್ವಿತೀಯಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮುಂದುವರೆದರೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು. ಅದರಂತೆ ಫಾಫ್ ಡುಪ್ಲೆಸಿಸ್ ಪಡೆ ದ್ವಿತೀಯಾರ್ಧದಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

5 / 6
ಆರ್​ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್ (2 ಪಂದ್ಯಗಳು), ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ವಿಶ್ವಾಸದಲ್ಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್ (2 ಪಂದ್ಯಗಳು), ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ವಿಶ್ವಾಸದಲ್ಲಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್