AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್​ಸಿಬಿ ಆಡಿದ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ ಜಯ ಸಾಧಿಸಿದೆ. ಇನ್ನುಳಿದ ಎಲ್ಲಾ ಪಂದ್ಯಗಳಲ್ಲೂ ಸೋಲನುಭವಿದೆ.

TV9 Web
| Edited By: |

Updated on: Apr 17, 2024 | 9:22 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಮೊದಲಾರ್ಧದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಸಜ್ಜಾಗುತ್ತಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ದ್ವಿತೀಯಾರ್ಧವನ್ನು ಆರಂಭಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಮೊದಲಾರ್ಧದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಸಜ್ಜಾಗುತ್ತಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ದ್ವಿತೀಯಾರ್ಧವನ್ನು ಆರಂಭಿಸಲಿದೆ.

1 / 6
ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೇರಲು ಆರ್​ಸಿಬಿ ಮೊದಲ ಹೆಜ್ಜೆಯನ್ನಿಡುವ ವಿಶ್ವಾಸದಲ್ಲಿದೆ. ಏಕೆಂದರೆ ಮೊದಲಾರ್ಧದಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಗೆದ್ದಿದ್ದರೂ, ದ್ವಿತೀಯಾರ್ಧದ ಮೂಲಕ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿದೆ.

ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೇರಲು ಆರ್​ಸಿಬಿ ಮೊದಲ ಹೆಜ್ಜೆಯನ್ನಿಡುವ ವಿಶ್ವಾಸದಲ್ಲಿದೆ. ಏಕೆಂದರೆ ಮೊದಲಾರ್ಧದಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಗೆದ್ದಿದ್ದರೂ, ದ್ವಿತೀಯಾರ್ಧದ ಮೂಲಕ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿದೆ.

2 / 6
ಅಂದರೆ ಮುಂದಿನ 7 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದರೆ, 8 ಗೆಲುವುಗಳೊಂದಿಗೆ ಒಟ್ಟು 16 ಅಂಕಗಳನ್ನು ಪಡೆದುಕೊಳ್ಳಲಿದೆ. ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ವಾಡಿಕೆ. ಅದರಂತೆ ಆರ್​ಸಿಬಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದು ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

ಅಂದರೆ ಮುಂದಿನ 7 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದರೆ, 8 ಗೆಲುವುಗಳೊಂದಿಗೆ ಒಟ್ಟು 16 ಅಂಕಗಳನ್ನು ಪಡೆದುಕೊಳ್ಳಲಿದೆ. ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ವಾಡಿಕೆ. ಅದರಂತೆ ಆರ್​ಸಿಬಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದು ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

3 / 6
ಇನ್ನು 7 ಪಂದ್ಯಗಳಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಸೋತರೂ 14 ಅಂಕಗಳನ್ನು ಕಲೆಹಾಕಲು ಅವಕಾಶವಿದೆ. ಇಲ್ಲಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರ 2 ತಂಡಗಳು 18 ಅಥವಾ 20 ಅಂಕಗಳನ್ನು ಪಡೆದುಕೊಂಡರೆ, ನಾಲ್ಕನೇ ಸ್ಥಾನ ಪಡೆಯುವ ತಂಡವೊಂದು 14 ಅಂಕಗಳನ್ನು ಗಳಿಸುವ ಸಾಧ್ಯತೆ ಹೆಚ್ಚು. ಅದರಂತೆ ಆರ್​ಸಿಬಿ 14 ಅಂಕಳಗಳೊಂದಿಗೆ ಉತ್ತಮ ನೆಟ್​ ರನ್ ರೇಟ್ ಸಹಾಯದಿಂದ ಪ್ಲೇಆಫ್ ಹಂತಕ್ಕೇರಬಹುದು.

ಇನ್ನು 7 ಪಂದ್ಯಗಳಲ್ಲಿ ಆರ್​ಸಿಬಿ ಒಂದು ಪಂದ್ಯವನ್ನು ಸೋತರೂ 14 ಅಂಕಗಳನ್ನು ಕಲೆಹಾಕಲು ಅವಕಾಶವಿದೆ. ಇಲ್ಲಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರ 2 ತಂಡಗಳು 18 ಅಥವಾ 20 ಅಂಕಗಳನ್ನು ಪಡೆದುಕೊಂಡರೆ, ನಾಲ್ಕನೇ ಸ್ಥಾನ ಪಡೆಯುವ ತಂಡವೊಂದು 14 ಅಂಕಗಳನ್ನು ಗಳಿಸುವ ಸಾಧ್ಯತೆ ಹೆಚ್ಚು. ಅದರಂತೆ ಆರ್​ಸಿಬಿ 14 ಅಂಕಳಗಳೊಂದಿಗೆ ಉತ್ತಮ ನೆಟ್​ ರನ್ ರೇಟ್ ಸಹಾಯದಿಂದ ಪ್ಲೇಆಫ್ ಹಂತಕ್ಕೇರಬಹುದು.

4 / 6
ಹೀಗಾಗಿ ಮೊದಲಾರ್ಧದಲ್ಲಿ ಒಂದು ಗೆಲುವು ಸಾಧಿಸಿರುವ ಆರ್​ಸಿಬಿ, ದ್ವಿತೀಯಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮುಂದುವರೆದರೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು. ಅದರಂತೆ ಫಾಫ್ ಡುಪ್ಲೆಸಿಸ್ ಪಡೆ ದ್ವಿತೀಯಾರ್ಧದಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿ ಮೊದಲಾರ್ಧದಲ್ಲಿ ಒಂದು ಗೆಲುವು ಸಾಧಿಸಿರುವ ಆರ್​ಸಿಬಿ, ದ್ವಿತೀಯಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮುಂದುವರೆದರೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು. ಅದರಂತೆ ಫಾಫ್ ಡುಪ್ಲೆಸಿಸ್ ಪಡೆ ದ್ವಿತೀಯಾರ್ಧದಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

5 / 6
ಆರ್​ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್ (2 ಪಂದ್ಯಗಳು), ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ವಿಶ್ವಾಸದಲ್ಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್ (2 ಪಂದ್ಯಗಳು), ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ವಿಶ್ವಾಸದಲ್ಲಿದೆ.

6 / 6
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು