AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಟೈಟಾನ್ಸ್ ವಿರುದ್ಧ RCB ಪ್ಲೇಯಿಂಗ್ 11 ಹೀಗಿರಲಿದೆ

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 9 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ RCB ತಂಡ ಭಾನುವಾರ (ಏ.28) ಗುಜರಾತ್ ಟೈಟಾನ್ಸ್​ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Edited By: |

Updated on: Apr 27, 2024 | 2:26 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (SRH) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಏ.27) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (SRH) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಏ.27) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

1 / 14
ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ ಎಂದೇ ಹೇಳಬಹುದು. ಅದರಂತೆ ಗುಜರಾತ್ ಟೈಟಾನ್ಸ್​​​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ ಎಂದೇ ಹೇಳಬಹುದು. ಅದರಂತೆ ಗುಜರಾತ್ ಟೈಟಾನ್ಸ್​​​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

2 / 14
ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಆರಂಭಿಕನಾಗಿ ಇನಿಂಗ್ಸ್ ಆರಂಭಿಸಲಿದ್ದಾರೆ.

ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಆರಂಭಿಕನಾಗಿ ಇನಿಂಗ್ಸ್ ಆರಂಭಿಸಲಿದ್ದಾರೆ.

3 / 14
ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಕಿಂಗ್ ಕೊಹ್ಲಿ ಸದ್ಯ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿದು ಮತ್ತಷ್ಟು ರನ್ ಪೇರಿಸುವ ನಿರೀಕ್ಷೆಯಿದೆ.

ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಕಿಂಗ್ ಕೊಹ್ಲಿ ಸದ್ಯ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿದು ಮತ್ತಷ್ಟು ರನ್ ಪೇರಿಸುವ ನಿರೀಕ್ಷೆಯಿದೆ.

4 / 14
ವಿಲ್ ಜಾಕ್ಸ್: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದ ವಿಲ್ ಜಾಕ್ಸ್ ​ಎಸ್​ಆರ್​ಹೆಚ್ ವಿರುದ್ಧ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧ ಜಾಕ್ಸ್​ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಖಚಿತ.

ವಿಲ್ ಜಾಕ್ಸ್: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದ ವಿಲ್ ಜಾಕ್ಸ್ ​ಎಸ್​ಆರ್​ಹೆಚ್ ವಿರುದ್ಧ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧ ಜಾಕ್ಸ್​ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಖಚಿತ.

5 / 14
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್, ಕೆಕೆಆರ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್, ಕೆಕೆಆರ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

6 / 14
ಕ್ಯಾಮರೋನ್ ಗ್ರೀನ್: ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಕ್ಯಾಮರೋನ್ ಗ್ರೀನ್ ಗುಜರಾತ್ ಟೈಟಾನ್ಸ್ ವಿರುದ್ಧ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

ಕ್ಯಾಮರೋನ್ ಗ್ರೀನ್: ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಕ್ಯಾಮರೋನ್ ಗ್ರೀನ್ ಗುಜರಾತ್ ಟೈಟಾನ್ಸ್ ವಿರುದ್ಧ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 14
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ವಿಕೆಟ್ ಕೀಪರ್ ಸ್ಥಾನದಲ್ಲಿ ಸ್ಪೋಟಕ ದಾಂಡಿಗ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ವಿಕೆಟ್ ಕೀಪರ್ ಸ್ಥಾನದಲ್ಲಿ ಸ್ಪೋಟಕ ದಾಂಡಿಗ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

8 / 14
ಮಹಿಪಾಲ್ ಲೋಮ್ರರ್: ಎಡಗೈ ದಾಂಡಿಗ ಮಹಿಪಾಲ್ ಲೋಮ್ರರ್ ಕಳೆದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆಯಿದೆ.

ಮಹಿಪಾಲ್ ಲೋಮ್ರರ್: ಎಡಗೈ ದಾಂಡಿಗ ಮಹಿಪಾಲ್ ಲೋಮ್ರರ್ ಕಳೆದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆಯಿದೆ.

9 / 14
ಕರ್ಣ್ ಶರ್ಮಾ: ಆರ್​ಸಿಬಿ ಪರ ಕಳೆದ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿರುವ ಕರ್ಣ್ ಶರ್ಮಾ ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಅಹಮದಬಾದ್​ನ ಪಿಚ್​ ಸ್ಪಿನ್ ಬೌಲರ್​ಗಳಿಗೆ ಸಹಕಾರಿ.

ಕರ್ಣ್ ಶರ್ಮಾ: ಆರ್​ಸಿಬಿ ಪರ ಕಳೆದ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿರುವ ಕರ್ಣ್ ಶರ್ಮಾ ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಅಹಮದಬಾದ್​ನ ಪಿಚ್​ ಸ್ಪಿನ್ ಬೌಲರ್​ಗಳಿಗೆ ಸಹಕಾರಿ.

10 / 14
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿರುವ ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ.

ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿರುವ ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ.

11 / 14
ಲಾಕಿ ಫರ್ಗುಸನ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಲಾಕಿ ಫರ್ಗುಸನ್​ಗೆ ಅಹಮದಾಬಾದ್ ಪಿಚ್​ನಲ್ಲಿ ಆಡಿದ ಹೆಚ್ಚಿನ ಅನುಭವವಿದೆ. ಹೀಗಾಗಿ ಆರ್​ಸಿಬಿ ಫರ್ಗುಸನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಲಾಕಿ ಫರ್ಗುಸನ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಲಾಕಿ ಫರ್ಗುಸನ್​ಗೆ ಅಹಮದಾಬಾದ್ ಪಿಚ್​ನಲ್ಲಿ ಆಡಿದ ಹೆಚ್ಚಿನ ಅನುಭವವಿದೆ. ಹೀಗಾಗಿ ಆರ್​ಸಿಬಿ ಫರ್ಗುಸನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

12 / 14
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ದಯಾಳ್ 3 ಓವರ್​ಗಳಲ್ಲಿ ನೀಡಿದ್ದು ಕೇವಲ 18 ರನ್​ಗಳು ಮಾತ್ರ.

ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ದಯಾಳ್ 3 ಓವರ್​ಗಳಲ್ಲಿ ನೀಡಿದ್ದು ಕೇವಲ 18 ರನ್​ಗಳು ಮಾತ್ರ.

13 / 14
ಸ್ವಪ್ನಿಲ್ ಸಿಂಗ್: ಆರ್​ಸಿಬಿ ತಂಡವು ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಸಿಂಗ್ ಅವರನ್ನು ಕಣಕ್ಕಿಳಿಸಲಿದೆ. ಕಳೆದ ಪಂದ್ಯದಲ್ಲಿ ಇಂಪ್ಯಾಕ್ಟ್ ಸಬ್ ಆಗಿ ಕಣಕ್ಕಿಳಿದ ಸ್ವಪ್ನಿಲ್ 12 ರನ್ ಬಾರಿಸಿದ್ದಲ್ಲದೆ, 2 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಆರ್​ಸಿಬಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸ್ವಪ್ನಿಲ್ ಸಿಂಗ್: ಆರ್​ಸಿಬಿ ತಂಡವು ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಸಿಂಗ್ ಅವರನ್ನು ಕಣಕ್ಕಿಳಿಸಲಿದೆ. ಕಳೆದ ಪಂದ್ಯದಲ್ಲಿ ಇಂಪ್ಯಾಕ್ಟ್ ಸಬ್ ಆಗಿ ಕಣಕ್ಕಿಳಿದ ಸ್ವಪ್ನಿಲ್ 12 ರನ್ ಬಾರಿಸಿದ್ದಲ್ಲದೆ, 2 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಆರ್​ಸಿಬಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

14 / 14
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ