AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಟೈಟಾನ್ಸ್​ ಬೇಡವೇ ಬೇಡವೆಂದು ಕೈ ಬಿಟ್ಟ ಆಟಗಾರರಿಗೆ ಕೋಟಿ ಸುರಿದ RCB

IPL 2024: 2 ಬಾರಿ ಫೈನಲ್​ಗೇರಿದ ಗುಜರಾತ್ ಟೈಟಾನ್ಸ್ ​ತಂಡದ ಪರವೇ ಕಳಪೆ ಪ್ರದರ್ಶನ ನೀಡಿದ್ದ ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್ ಅವರ ಖರೀದಿಗಾಗಿ RCB ಬರೋಬ್ಬರಿ 16.50 ಕೋಟಿ ರೂ. ವ್ಯಯಿಸಿರುವುದು ನಿಜಕ್ಕೂ ಅಚ್ಚರಿಯೇ ಸರಿ.

TV9 Web
| Updated By: ಝಾಹಿರ್ ಯೂಸುಫ್

Updated on: Dec 20, 2023 | 9:57 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಹರಾಜು ಮುಕ್ತಾಯದ ಬೆನ್ನಲ್ಲೇ ಆರ್​ಸಿಬಿ ತಂಡದ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಆರ್​ಸಿಬಿ ಫ್ರಾಂಚೈಸಿ ಖರೀದಿಸಿದ ಆಟಗಾರರು. ಏಕೆಂದರೆ ಈ ಬಾರಿ ಆರ್​ಸಿಬಿ ಅತೀ ಹೆಚ್ಚು ಮೊತ್ತ ವ್ಯಯಿಸಿರುವುದು ಗುಜರಾತ್ ಟೈಟಾನ್ಸ್​ ತಂಡದ ಮಾಜಿ ಆಟಗಾರರ ಮೇಲೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಹರಾಜು ಮುಕ್ತಾಯದ ಬೆನ್ನಲ್ಲೇ ಆರ್​ಸಿಬಿ ತಂಡದ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಆರ್​ಸಿಬಿ ಫ್ರಾಂಚೈಸಿ ಖರೀದಿಸಿದ ಆಟಗಾರರು. ಏಕೆಂದರೆ ಈ ಬಾರಿ ಆರ್​ಸಿಬಿ ಅತೀ ಹೆಚ್ಚು ಮೊತ್ತ ವ್ಯಯಿಸಿರುವುದು ಗುಜರಾತ್ ಟೈಟಾನ್ಸ್​ ತಂಡದ ಮಾಜಿ ಆಟಗಾರರ ಮೇಲೆ.

1 / 8
ಅಂದರೆ ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್ ಅವರನ್ನು ಈ ಬಾರಿ ಆರ್​ಸಿಬಿ ತಂಡ ಖರೀದಿಸಿದೆ. ಅದು ಕೂಡ ಕೋಟಿ ಮೊತ್ತ ನೀಡುವ ಮೂಲಕ ಎಂಬುದೇ ಅಚ್ಚರಿ.

ಅಂದರೆ ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್ ಅವರನ್ನು ಈ ಬಾರಿ ಆರ್​ಸಿಬಿ ತಂಡ ಖರೀದಿಸಿದೆ. ಅದು ಕೂಡ ಕೋಟಿ ಮೊತ್ತ ನೀಡುವ ಮೂಲಕ ಎಂಬುದೇ ಅಚ್ಚರಿ.

2 / 8
ಇಲ್ಲಿ ಅಲ್ಝಾರಿ ಜೋಸೆಫ್ ಖರೀದಿಗಾಗಿ ಆರ್​ಸಿಬಿ ಫ್ರಾಂಚೈಸಿ ವ್ಯಯಿಸಿರುವುದು ಬರೋಬ್ಬರಿ 11.50 ಕೋಟಿ ರೂ. ಹಾಗೆಯೇ ಯಶ್ ದಯಾಳ್ ಅವರನ್ನು 5 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಕೇವಲ ಇಬ್ಬರು ಆಟಗಾರರಿಗೆ ಆರ್​ಸಿಬಿ 16.50 ಕೋಟಿ ನೀಡಿರುವುದು ವಿಶೇಷ.

ಇಲ್ಲಿ ಅಲ್ಝಾರಿ ಜೋಸೆಫ್ ಖರೀದಿಗಾಗಿ ಆರ್​ಸಿಬಿ ಫ್ರಾಂಚೈಸಿ ವ್ಯಯಿಸಿರುವುದು ಬರೋಬ್ಬರಿ 11.50 ಕೋಟಿ ರೂ. ಹಾಗೆಯೇ ಯಶ್ ದಯಾಳ್ ಅವರನ್ನು 5 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಕೇವಲ ಇಬ್ಬರು ಆಟಗಾರರಿಗೆ ಆರ್​ಸಿಬಿ 16.50 ಕೋಟಿ ನೀಡಿರುವುದು ವಿಶೇಷ.

3 / 8
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಐಪಿಎಲ್ 2022ರ ಹರಾಜಿನಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಕೇವಲ 2.40 ಕೋಟಿ ರೂ.ಗೆ ಖರೀದಿಸಿತ್ತು ಎಂಬುದು.

ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಐಪಿಎಲ್ 2022ರ ಹರಾಜಿನಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಕೇವಲ 2.40 ಕೋಟಿ ರೂ.ಗೆ ಖರೀದಿಸಿತ್ತು ಎಂಬುದು.

4 / 8
ಹಾಗೆಯೇ ಯಶ್ ದಯಾಳ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು 3.2 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಈ ಬಾರಿ ಗುಜರಾತ್ ತಂಡವು ದಯಾಳ್ ಅವರನ್ನು ಉಳಿಸಿಕೊಂಡಿರಲಿಲ್ಲ.

ಹಾಗೆಯೇ ಯಶ್ ದಯಾಳ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು 3.2 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಈ ಬಾರಿ ಗುಜರಾತ್ ತಂಡವು ದಯಾಳ್ ಅವರನ್ನು ಉಳಿಸಿಕೊಂಡಿರಲಿಲ್ಲ.

5 / 8
ಏಕೆಂದರೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ 14 ಪಂದ್ಯಗಳನ್ನಾಡಿದ್ದ ಯಶ್ ದಯಾಳ್ ಪಡೆದಿರುವುದು ಕೇವಲ 13 ವಿಕೆಟ್​ಗಳನ್ನು ಮಾತ್ರ. ಹೀಗಾಗಿಯೇ ಈ ಬಾರಿ ಅವರನ್ನು ಕೈ ಬಿಡಲಾಗಿತ್ತು.

ಏಕೆಂದರೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ 14 ಪಂದ್ಯಗಳನ್ನಾಡಿದ್ದ ಯಶ್ ದಯಾಳ್ ಪಡೆದಿರುವುದು ಕೇವಲ 13 ವಿಕೆಟ್​ಗಳನ್ನು ಮಾತ್ರ. ಹೀಗಾಗಿಯೇ ಈ ಬಾರಿ ಅವರನ್ನು ಕೈ ಬಿಡಲಾಗಿತ್ತು.

6 / 8
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಪರ ಕಳೆದ 2 ಸೀಸನ್​ಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್ 16 ಪಂದ್ಯಗಳಿಂದ ಕಬಳಿಸಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಹೀಗಾಗಿಯೇ ಗುಜರಾತ್ ಫ್ರಾಂಚೈಸಿ ಈ ಬಾರಿ ವಿಂಡೀಸ್ ವೇಗಿಯನ್ನು ತಂಡದಿಂದ ಕೈಬಿಟ್ಟಿತು.

ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಪರ ಕಳೆದ 2 ಸೀಸನ್​ಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್ 16 ಪಂದ್ಯಗಳಿಂದ ಕಬಳಿಸಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಹೀಗಾಗಿಯೇ ಗುಜರಾತ್ ಫ್ರಾಂಚೈಸಿ ಈ ಬಾರಿ ವಿಂಡೀಸ್ ವೇಗಿಯನ್ನು ತಂಡದಿಂದ ಕೈಬಿಟ್ಟಿತು.

7 / 8
ಅತ್ತ 2 ಬಾರಿ ಫೈನಲ್​ಗೇರಿದ ಗುಜರಾತ್ ಟೈಟಾನ್ಸ್​ ಪರವೇ ಕಳಪೆ ಪ್ರದರ್ಶನ ನೀಡಿದ್ದ ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್ ಅವರ ಖರೀದಿಗಾಗಿ ಆರ್​ಸಿಬಿ ಬರೋಬ್ಬರಿ 16.50 ಕೋಟಿ ರೂ. ವ್ಯಯಿಸಿರುವುದು ನಿಜಕ್ಕೂ ಅಚ್ಚರಿಯೇ ಸರಿ.

ಅತ್ತ 2 ಬಾರಿ ಫೈನಲ್​ಗೇರಿದ ಗುಜರಾತ್ ಟೈಟಾನ್ಸ್​ ಪರವೇ ಕಳಪೆ ಪ್ರದರ್ಶನ ನೀಡಿದ್ದ ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್ ಅವರ ಖರೀದಿಗಾಗಿ ಆರ್​ಸಿಬಿ ಬರೋಬ್ಬರಿ 16.50 ಕೋಟಿ ರೂ. ವ್ಯಯಿಸಿರುವುದು ನಿಜಕ್ಕೂ ಅಚ್ಚರಿಯೇ ಸರಿ.

8 / 8
Follow us
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ