AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶಹಬಾಝ್​ ಅಹ್ಮದ್​ರನ್ನು SRH ತಂಡಕ್ಕೆ ನೀಡಿದ್ದೇ RCB

IPL 2024: ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಜಯ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 7 ವಿಕೆಟ್ ಕಳೆದುಕೊಂಡು 139 ರನ್​ಗಳಿಸಲಷ್ಟೇ ಶಕ್ತರಾದರು. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಶಹಬಾಝ್ ಅಹ್ಮದ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on:May 25, 2024 | 10:54 AM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ 36 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಶಹಬಾಝ್ ಅಹ್ಮದ್ ಕೂಡ ಒಬ್ಬರು.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ 36 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಶಹಬಾಝ್ ಅಹ್ಮದ್ ಕೂಡ ಒಬ್ಬರು.

1 / 7
ಏಕೆಂದರೆ ಈ ಪಂದ್ಯದಲ್ಲಿ ಶಹಬಾಝ್ ಅಹ್ಮದ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 23 ರನ್​ಗಳು ಮಾತ್ರ. ಅಲ್ಲದೆ ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಕಬಳಿಸಿ ಎಸ್​ಆರ್​ಹೆಚ್​ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದಕ್ಕೂ ಮುನ್ನ ಬ್ಯಾಟಿಂಗ್​ನಲ್ಲೂ ಶಹಬಾಝ್ ಅಹ್ಮದ್ 18 ರನ್​ಗಳ ಕೊಡುಗೆ ನೀಡಿದ್ದರು.

ಏಕೆಂದರೆ ಈ ಪಂದ್ಯದಲ್ಲಿ ಶಹಬಾಝ್ ಅಹ್ಮದ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 23 ರನ್​ಗಳು ಮಾತ್ರ. ಅಲ್ಲದೆ ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಕಬಳಿಸಿ ಎಸ್​ಆರ್​ಹೆಚ್​ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದಕ್ಕೂ ಮುನ್ನ ಬ್ಯಾಟಿಂಗ್​ನಲ್ಲೂ ಶಹಬಾಝ್ ಅಹ್ಮದ್ 18 ರನ್​ಗಳ ಕೊಡುಗೆ ನೀಡಿದ್ದರು.

2 / 7
ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಹಬಾಝ್ ಅಹ್ಮದ್ ಅವರನ್ನು ನೀಡಿದ್ದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಅಂದರೆ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಆಟಗಾರರನ್ನು ಪರಸ್ಪರ ಟ್ರೇಡ್ ಮಾಡಿಕೊಂಡಿತ್ತು.

ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಹಬಾಝ್ ಅಹ್ಮದ್ ಅವರನ್ನು ನೀಡಿದ್ದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಅಂದರೆ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಆಟಗಾರರನ್ನು ಪರಸ್ಪರ ಟ್ರೇಡ್ ಮಾಡಿಕೊಂಡಿತ್ತು.

3 / 7
ಅದರಂತೆ ಶಹಬಾಝ್ ಅಹ್ಮದ್ ಅವರನ್ನು ಎಸ್​ಆರ್​ಹೆಚ್​ಗೆ ನೀಡಿ ಆರ್​ಸಿಬಿ ಫ್ರಾಂಚೈಸಿ ಎಸ್​ಆರ್​ಹೆಚ್ ತಂಡದಲ್ಲಿದ್ದ ಮಯಾಂಕ್ ಡಾಗರ್ ಅವರನ್ನು ಖರೀದಿಸಿತು. ಈ ಒಂದು ಟ್ರೇಡ್​ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗಿರುವುದು ವಿಶೇಷ.

ಅದರಂತೆ ಶಹಬಾಝ್ ಅಹ್ಮದ್ ಅವರನ್ನು ಎಸ್​ಆರ್​ಹೆಚ್​ಗೆ ನೀಡಿ ಆರ್​ಸಿಬಿ ಫ್ರಾಂಚೈಸಿ ಎಸ್​ಆರ್​ಹೆಚ್ ತಂಡದಲ್ಲಿದ್ದ ಮಯಾಂಕ್ ಡಾಗರ್ ಅವರನ್ನು ಖರೀದಿಸಿತು. ಈ ಒಂದು ಟ್ರೇಡ್​ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗಿರುವುದು ವಿಶೇಷ.

4 / 7
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಶಹಬಾಝ್ ಅಹ್ಮದ್ ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಎಸ್​ಆರ್​ಹೆಚ್​ ಪರ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿರುವ ಶಹಬಾಝ್ ಒಟ್ಟು 207	 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ವಿಕೆಟ್ ಕಬಳಿಸಿ ತಂಡ ಗೆಲುವಿನಲ್ಲಿ ಕೊಡುಗೆ ನೀಡಿದ್ದಾರೆ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಶಹಬಾಝ್ ಅಹ್ಮದ್ ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಎಸ್​ಆರ್​ಹೆಚ್​ ಪರ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿರುವ ಶಹಬಾಝ್ ಒಟ್ಟು 207 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ವಿಕೆಟ್ ಕಬಳಿಸಿ ತಂಡ ಗೆಲುವಿನಲ್ಲಿ ಕೊಡುಗೆ ನೀಡಿದ್ದಾರೆ.

5 / 7
ಅದೇ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡದಿಂದ ಆಯ್ಕೆ ಮಾಡಿದ ಮಯಾಂಕ್ ಡಾಗರ್ ಅವರ ಕೊಡುಗೆ ಕೇವಲ 1 ವಿಕೆಟ್ ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಪಡೆದಿದ್ದು ಕೇವಲ ಒಂದು ವಿಕೆಟ್ ಅಷ್ಟೇ.

ಅದೇ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡದಿಂದ ಆಯ್ಕೆ ಮಾಡಿದ ಮಯಾಂಕ್ ಡಾಗರ್ ಅವರ ಕೊಡುಗೆ ಕೇವಲ 1 ವಿಕೆಟ್ ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಪಡೆದಿದ್ದು ಕೇವಲ ಒಂದು ವಿಕೆಟ್ ಅಷ್ಟೇ.

6 / 7
ಅಂದರೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಅತ್ಯುತ್ತಮ ಟ್ರೇಡ್ ಇದೀಗ SRH ತಂಡವನ್ನು ಫೈನಲ್​ಗೆ ಪ್ರವೇಶಿಸುವಂತೆ ಮಾಡಿದೆ. ಅದೇ RCB ಟ್ರೇಡ್ ಮಾಡಿದ ಆಟಗಾರ ಕಳಪೆ ಪ್ರದರ್ಶನದಿಂದಾಗಿ 10 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದರೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಅತ್ಯುತ್ತಮ ಟ್ರೇಡ್ ಇದೀಗ SRH ತಂಡವನ್ನು ಫೈನಲ್​ಗೆ ಪ್ರವೇಶಿಸುವಂತೆ ಮಾಡಿದೆ. ಅದೇ RCB ಟ್ರೇಡ್ ಮಾಡಿದ ಆಟಗಾರ ಕಳಪೆ ಪ್ರದರ್ಶನದಿಂದಾಗಿ 10 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

7 / 7

Published On - 10:52 am, Sat, 25 May 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್