AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶಹಬಾಝ್​ ಅಹ್ಮದ್​ರನ್ನು SRH ತಂಡಕ್ಕೆ ನೀಡಿದ್ದೇ RCB

IPL 2024: ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಜಯ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 7 ವಿಕೆಟ್ ಕಳೆದುಕೊಂಡು 139 ರನ್​ಗಳಿಸಲಷ್ಟೇ ಶಕ್ತರಾದರು. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಶಹಬಾಝ್ ಅಹ್ಮದ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on:May 25, 2024 | 10:54 AM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ 36 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಶಹಬಾಝ್ ಅಹ್ಮದ್ ಕೂಡ ಒಬ್ಬರು.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ 36 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಶಹಬಾಝ್ ಅಹ್ಮದ್ ಕೂಡ ಒಬ್ಬರು.

1 / 7
ಏಕೆಂದರೆ ಈ ಪಂದ್ಯದಲ್ಲಿ ಶಹಬಾಝ್ ಅಹ್ಮದ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 23 ರನ್​ಗಳು ಮಾತ್ರ. ಅಲ್ಲದೆ ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಕಬಳಿಸಿ ಎಸ್​ಆರ್​ಹೆಚ್​ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದಕ್ಕೂ ಮುನ್ನ ಬ್ಯಾಟಿಂಗ್​ನಲ್ಲೂ ಶಹಬಾಝ್ ಅಹ್ಮದ್ 18 ರನ್​ಗಳ ಕೊಡುಗೆ ನೀಡಿದ್ದರು.

ಏಕೆಂದರೆ ಈ ಪಂದ್ಯದಲ್ಲಿ ಶಹಬಾಝ್ ಅಹ್ಮದ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 23 ರನ್​ಗಳು ಮಾತ್ರ. ಅಲ್ಲದೆ ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಕಬಳಿಸಿ ಎಸ್​ಆರ್​ಹೆಚ್​ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದಕ್ಕೂ ಮುನ್ನ ಬ್ಯಾಟಿಂಗ್​ನಲ್ಲೂ ಶಹಬಾಝ್ ಅಹ್ಮದ್ 18 ರನ್​ಗಳ ಕೊಡುಗೆ ನೀಡಿದ್ದರು.

2 / 7
ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಹಬಾಝ್ ಅಹ್ಮದ್ ಅವರನ್ನು ನೀಡಿದ್ದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಅಂದರೆ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಆಟಗಾರರನ್ನು ಪರಸ್ಪರ ಟ್ರೇಡ್ ಮಾಡಿಕೊಂಡಿತ್ತು.

ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಹಬಾಝ್ ಅಹ್ಮದ್ ಅವರನ್ನು ನೀಡಿದ್ದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಅಂದರೆ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಆಟಗಾರರನ್ನು ಪರಸ್ಪರ ಟ್ರೇಡ್ ಮಾಡಿಕೊಂಡಿತ್ತು.

3 / 7
ಅದರಂತೆ ಶಹಬಾಝ್ ಅಹ್ಮದ್ ಅವರನ್ನು ಎಸ್​ಆರ್​ಹೆಚ್​ಗೆ ನೀಡಿ ಆರ್​ಸಿಬಿ ಫ್ರಾಂಚೈಸಿ ಎಸ್​ಆರ್​ಹೆಚ್ ತಂಡದಲ್ಲಿದ್ದ ಮಯಾಂಕ್ ಡಾಗರ್ ಅವರನ್ನು ಖರೀದಿಸಿತು. ಈ ಒಂದು ಟ್ರೇಡ್​ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗಿರುವುದು ವಿಶೇಷ.

ಅದರಂತೆ ಶಹಬಾಝ್ ಅಹ್ಮದ್ ಅವರನ್ನು ಎಸ್​ಆರ್​ಹೆಚ್​ಗೆ ನೀಡಿ ಆರ್​ಸಿಬಿ ಫ್ರಾಂಚೈಸಿ ಎಸ್​ಆರ್​ಹೆಚ್ ತಂಡದಲ್ಲಿದ್ದ ಮಯಾಂಕ್ ಡಾಗರ್ ಅವರನ್ನು ಖರೀದಿಸಿತು. ಈ ಒಂದು ಟ್ರೇಡ್​ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗಿರುವುದು ವಿಶೇಷ.

4 / 7
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಶಹಬಾಝ್ ಅಹ್ಮದ್ ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಎಸ್​ಆರ್​ಹೆಚ್​ ಪರ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿರುವ ಶಹಬಾಝ್ ಒಟ್ಟು 207	 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ವಿಕೆಟ್ ಕಬಳಿಸಿ ತಂಡ ಗೆಲುವಿನಲ್ಲಿ ಕೊಡುಗೆ ನೀಡಿದ್ದಾರೆ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಶಹಬಾಝ್ ಅಹ್ಮದ್ ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಎಸ್​ಆರ್​ಹೆಚ್​ ಪರ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿರುವ ಶಹಬಾಝ್ ಒಟ್ಟು 207 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ವಿಕೆಟ್ ಕಬಳಿಸಿ ತಂಡ ಗೆಲುವಿನಲ್ಲಿ ಕೊಡುಗೆ ನೀಡಿದ್ದಾರೆ.

5 / 7
ಅದೇ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡದಿಂದ ಆಯ್ಕೆ ಮಾಡಿದ ಮಯಾಂಕ್ ಡಾಗರ್ ಅವರ ಕೊಡುಗೆ ಕೇವಲ 1 ವಿಕೆಟ್ ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಪಡೆದಿದ್ದು ಕೇವಲ ಒಂದು ವಿಕೆಟ್ ಅಷ್ಟೇ.

ಅದೇ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡದಿಂದ ಆಯ್ಕೆ ಮಾಡಿದ ಮಯಾಂಕ್ ಡಾಗರ್ ಅವರ ಕೊಡುಗೆ ಕೇವಲ 1 ವಿಕೆಟ್ ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಪಡೆದಿದ್ದು ಕೇವಲ ಒಂದು ವಿಕೆಟ್ ಅಷ್ಟೇ.

6 / 7
ಅಂದರೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಅತ್ಯುತ್ತಮ ಟ್ರೇಡ್ ಇದೀಗ SRH ತಂಡವನ್ನು ಫೈನಲ್​ಗೆ ಪ್ರವೇಶಿಸುವಂತೆ ಮಾಡಿದೆ. ಅದೇ RCB ಟ್ರೇಡ್ ಮಾಡಿದ ಆಟಗಾರ ಕಳಪೆ ಪ್ರದರ್ಶನದಿಂದಾಗಿ 10 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದರೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಅತ್ಯುತ್ತಮ ಟ್ರೇಡ್ ಇದೀಗ SRH ತಂಡವನ್ನು ಫೈನಲ್​ಗೆ ಪ್ರವೇಶಿಸುವಂತೆ ಮಾಡಿದೆ. ಅದೇ RCB ಟ್ರೇಡ್ ಮಾಡಿದ ಆಟಗಾರ ಕಳಪೆ ಪ್ರದರ್ಶನದಿಂದಾಗಿ 10 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

7 / 7

Published On - 10:52 am, Sat, 25 May 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ