AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡ ಪ್ಲೇಆಫ್​​ಗೆ?

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ (ಐಪಿಎಲ್) RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸಿಎಸ್​ಕೆ 21 ಮ್ಯಾಚ್​ಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಝಾಹಿರ್ ಯೂಸುಫ್
|

Updated on: May 16, 2024 | 1:52 PM

Share
ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೇ 18 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೇ 18 ರಂದು ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೇ 18 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೇ 18 ರಂದು ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

1 / 6
AccuWeather.com ಪ್ರಕಾರ, ಮೇ 18 ರಂದು ಬೆಂಗಳೂರಿನಲ್ಲಿ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.100 ರಷ್ಟು ಮೋಡ ಆವರಿಸಲಿದೆ.

AccuWeather.com ಪ್ರಕಾರ, ಮೇ 18 ರಂದು ಬೆಂಗಳೂರಿನಲ್ಲಿ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.100 ರಷ್ಟು ಮೋಡ ಆವರಿಸಲಿದೆ.

2 / 6
ಅಲ್ಲದೆ ಈ ವೇಳೆ ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ ಎಂದು ತಿಳಿಸಿದೆ. ಅಲ್ಲದೆ ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಶೇಕಡಾ 60 ಕ್ಕಿಂತ ಹೆಚ್ಚಿದೆ. ಅಂದರೆ ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎನ್ನಬಹುದು.

ಅಲ್ಲದೆ ಈ ವೇಳೆ ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ ಎಂದು ತಿಳಿಸಿದೆ. ಅಲ್ಲದೆ ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಶೇಕಡಾ 60 ಕ್ಕಿಂತ ಹೆಚ್ಚಿದೆ. ಅಂದರೆ ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎನ್ನಬಹುದು.

3 / 6
ಇದರ ಬೆನ್ನಲ್ಲೇ, ಭಾರೀ ಮಳೆಯಿಂದಾಗಿ ಪಂದ್ಯ ರದ್ದಾದರೆ ಯಾವ ತಂಡ ಪ್ಲೇಆಫ್ ಪ್ರವೇಶಿಸಲಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಚೆನ್ನೈ ಸೂಪರ್ ಕಿಂಗ್ಸ್. ಏಕೆಂದರೆ ಸಿಎಸ್​ಕೆ ತಂಡವು ಒಟ್ಟು 14 ಅಂಕಗಳೊಂದಿಗೆ ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಇದರ ಬೆನ್ನಲ್ಲೇ, ಭಾರೀ ಮಳೆಯಿಂದಾಗಿ ಪಂದ್ಯ ರದ್ದಾದರೆ ಯಾವ ತಂಡ ಪ್ಲೇಆಫ್ ಪ್ರವೇಶಿಸಲಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಚೆನ್ನೈ ಸೂಪರ್ ಕಿಂಗ್ಸ್. ಏಕೆಂದರೆ ಸಿಎಸ್​ಕೆ ತಂಡವು ಒಟ್ಟು 14 ಅಂಕಗಳೊಂದಿಗೆ ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

4 / 6
ಶನಿವಾರ ಮಳೆಯಿಂದಾಗಿ ಪಂದ್ಯ ರದ್ದಾದರೆ ಆರ್​ಸಿಬಿ ಮತ್ತು ಸಿಎಸ್​ಕೆ ತಲಾ ಒಂದೊಂದು ಪಾಯಿಂಟ್ ಹಂಚಿಕೊಳ್ಳಲಿದೆ. ಇದರಿಂದ ಸಿಎಸ್​ಕೆ ತಂಡದ ಒಟ್ಟು ಪಾಯಿಂಟ್ಸ್ 15 ಆಗಲಿದ್ದು, ಇದೇ ವೇಳೆ ಆರ್​ಸಿಬಿ ತಂಡದ ಅಂಕ 13 ರಲ್ಲೇ ಉಳಿಯಲಿದೆ. ಅತ್ತ 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ 3ನೇ ಅಥವಾ 4ನೇ ಸ್ಥಾನದೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಶನಿವಾರ ಮಳೆಯಿಂದಾಗಿ ಪಂದ್ಯ ರದ್ದಾದರೆ ಆರ್​ಸಿಬಿ ಮತ್ತು ಸಿಎಸ್​ಕೆ ತಲಾ ಒಂದೊಂದು ಪಾಯಿಂಟ್ ಹಂಚಿಕೊಳ್ಳಲಿದೆ. ಇದರಿಂದ ಸಿಎಸ್​ಕೆ ತಂಡದ ಒಟ್ಟು ಪಾಯಿಂಟ್ಸ್ 15 ಆಗಲಿದ್ದು, ಇದೇ ವೇಳೆ ಆರ್​ಸಿಬಿ ತಂಡದ ಅಂಕ 13 ರಲ್ಲೇ ಉಳಿಯಲಿದೆ. ಅತ್ತ 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ 3ನೇ ಅಥವಾ 4ನೇ ಸ್ಥಾನದೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

5 / 6
ಅಂದರೆ ಮೇ 18 ರಂದು ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಐಪಿಎಲ್​ನಿಂದ ಹೊರಬೀಳಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹೀಗಾಗಿ ಬೆಂಗಳೂರಿನಲ್ಲಿ ಶನಿವಾರ ನಡೆಯಲಿರುವ ಪಂದ್ಯವು ಮಳೆಗೆ ಅಹುತಿಯಾಗದಿರಲಿ ಎಂಬುದೇ ಆರ್​ಸಿಬಿ ಅಭಿಮಾನಿಗಳ ಅಂಬೋಣ.

ಅಂದರೆ ಮೇ 18 ರಂದು ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಐಪಿಎಲ್​ನಿಂದ ಹೊರಬೀಳಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹೀಗಾಗಿ ಬೆಂಗಳೂರಿನಲ್ಲಿ ಶನಿವಾರ ನಡೆಯಲಿರುವ ಪಂದ್ಯವು ಮಳೆಗೆ ಅಹುತಿಯಾಗದಿರಲಿ ಎಂಬುದೇ ಆರ್​ಸಿಬಿ ಅಭಿಮಾನಿಗಳ ಅಂಬೋಣ.

6 / 6
Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!