AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCBಗೆ ಮಾಡು ಇಲ್ಲವೇ ಮಡಿ ಪಂದ್ಯ: ಡೆಲ್ಲಿ ಕ್ಯಾಪಿಟಲ್ಸ್​ಗೆ ಮತ್ತೊಂದು ಪಂದ್ಯ..!

IPL 2024 RCB vs DC: ಐಪಿಎಲ್​ 2024 ರಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಉಭಯ ತಂಡಗಳಿಗೂ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದರೆ ಒಟ್ಟು 14 ಪಾಯಿಂಟ್ಸ್ ಆಗಲಿದೆ. ಅದೇ ಡೆಲ್ಲಿ ಕ್ಯಾಪಿಟಲ್ಸ್ ತನ್ನ 2 ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ 16 ಅಂಕಗಳನ್ನು ಸಂಪಾದಿಸಲಿದೆ. ಹೀಗಾಗಿ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಇಂದಿನ ಪಂದ್ಯ ತುಂಬಾ ಮಹತ್ವದ್ದು.

ಝಾಹಿರ್ ಯೂಸುಫ್
|

Updated on: May 12, 2024 | 7:52 AM

Share
ಐಪಿಎಲ್​ನಲ್ಲಿ (IPL 2024) ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಮುಂದಿನ ಹಂತಕ್ಕೇರಲು ಅವಕಾಶ ಹೊಂದಿರಲಿದೆ.

ಐಪಿಎಲ್​ನಲ್ಲಿ (IPL 2024) ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಮುಂದಿನ ಹಂತಕ್ಕೇರಲು ಅವಕಾಶ ಹೊಂದಿರಲಿದೆ.

1 / 6
ಏಕೆಂದರೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 12 ಅಂಕಗಳನ್ನು ಹೊಂದಿದೆ. ಅತ್ತ ಆರ್​ಸಿಬಿ ಹೊಂದಿರುವುದು ಕೇವಲ 10 ಪಾಯಿಂಟ್ಸ್ ಮಾತ್ರ. ಹೀಗಾಗಿ ಫಾಫ್ ಡುಪ್ಲೆಸಿಸ್ ಪಡೆ ಇಂದು ಗೆದ್ದರೂ 12 ಅಂಕಗಳನ್ನು ಮಾತ್ರ ಕಲೆಹಾಕಲಿದೆ.

ಏಕೆಂದರೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 12 ಅಂಕಗಳನ್ನು ಹೊಂದಿದೆ. ಅತ್ತ ಆರ್​ಸಿಬಿ ಹೊಂದಿರುವುದು ಕೇವಲ 10 ಪಾಯಿಂಟ್ಸ್ ಮಾತ್ರ. ಹೀಗಾಗಿ ಫಾಫ್ ಡುಪ್ಲೆಸಿಸ್ ಪಡೆ ಇಂದು ಗೆದ್ದರೂ 12 ಅಂಕಗಳನ್ನು ಮಾತ್ರ ಕಲೆಹಾಕಲಿದೆ.

2 / 6
ಮತ್ತೊಂದೆಡೆ ಆರ್​ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋತರೂ 12 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ನೆಟ್ ರನ್ ರೇಟ್​ ಇಳಿಕೆಯಾದರೆ ಮಾತ್ರ ಅಂಕ ಪಟ್ಟಿಯಲ್ಲಿ ಆರ್​ಸಿಬಿಗಿಂತ ಕೆಳ ಸ್ಥಾನ ಪಡೆಯಲಿದೆ. ಇದಾಗ್ಯೂ ಪ್ಲೇಆಫ್ ರೇಸ್​ನಿಂದ ಹೊರಬೀಳುವುದಿಲ್ಲ.

ಮತ್ತೊಂದೆಡೆ ಆರ್​ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋತರೂ 12 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ನೆಟ್ ರನ್ ರೇಟ್​ ಇಳಿಕೆಯಾದರೆ ಮಾತ್ರ ಅಂಕ ಪಟ್ಟಿಯಲ್ಲಿ ಆರ್​ಸಿಬಿಗಿಂತ ಕೆಳ ಸ್ಥಾನ ಪಡೆಯಲಿದೆ. ಇದಾಗ್ಯೂ ಪ್ಲೇಆಫ್ ರೇಸ್​ನಿಂದ ಹೊರಬೀಳುವುದಿಲ್ಲ.

3 / 6
ಬದಲಾಗಿ ಆರ್​ಸಿಬಿಯಂತೆ 14 ಅಂಕಗಳನ್ನು ಕಲೆಹಾಕಲು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೊಂದು ಮ್ಯಾಚ್ ಕೂಡ ಇದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಅವಕಾಶವನ್ನು ಎದುರು ನೋಡಬಹುದು.

ಬದಲಾಗಿ ಆರ್​ಸಿಬಿಯಂತೆ 14 ಅಂಕಗಳನ್ನು ಕಲೆಹಾಕಲು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೊಂದು ಮ್ಯಾಚ್ ಕೂಡ ಇದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಅವಕಾಶವನ್ನು ಎದುರು ನೋಡಬಹುದು.

4 / 6
ಒಂದು ವೇಳೆ ಇಂದು ಆರ್​ಸಿಬಿ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 14 ಅಂಕಗಳನ್ನು ಸಂಪಾದಿಸಲಿದೆ. ಮತ್ತೊಂದೆಡೆ ಆರ್​ಸಿಬಿ ಇಂದು ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೂ 12 ಅಂಕಗಳನ್ನು ಮಾತ್ರ ಹೊಂದಲಿದೆ.

ಒಂದು ವೇಳೆ ಇಂದು ಆರ್​ಸಿಬಿ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 14 ಅಂಕಗಳನ್ನು ಸಂಪಾದಿಸಲಿದೆ. ಮತ್ತೊಂದೆಡೆ ಆರ್​ಸಿಬಿ ಇಂದು ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೂ 12 ಅಂಕಗಳನ್ನು ಮಾತ್ರ ಹೊಂದಲಿದೆ.

5 / 6
ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅದೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿರುವ ಮತ್ತೊಂದು ಪಂದ್ಯ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅದೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿರುವ ಮತ್ತೊಂದು ಪಂದ್ಯ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 6
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು