AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯ RCB vs ಕನ್ನಡಿಗರು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಎರಡೂ ತಂಡಗಳಲ್ಲೂ ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಉಭಯ ತಂಡಗಳಲ್ಲಿ ಒಟ್ಟು ಕರ್ನಾಟಕದ ಐವರು ಆಟಗಾರರಿದ್ದಾರೆ.

TV9 Web
| Edited By: |

Updated on: Apr 02, 2024 | 3:52 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

1 / 9
ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

2 / 9
ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 9
ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

4 / 9
ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 9
ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

6 / 9
ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

7 / 9
ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

8 / 9
ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

9 / 9
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ