AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯ RCB vs ಕನ್ನಡಿಗರು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಎರಡೂ ತಂಡಗಳಲ್ಲೂ ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಉಭಯ ತಂಡಗಳಲ್ಲಿ ಒಟ್ಟು ಕರ್ನಾಟಕದ ಐವರು ಆಟಗಾರರಿದ್ದಾರೆ.

TV9 Web
| Edited By: |

Updated on: Apr 02, 2024 | 3:52 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

1 / 9
ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

2 / 9
ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 9
ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

4 / 9
ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 9
ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

6 / 9
ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

7 / 9
ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

8 / 9
ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

9 / 9
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು