AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯ RCB vs ಕನ್ನಡಿಗರು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಎರಡೂ ತಂಡಗಳಲ್ಲೂ ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಉಭಯ ತಂಡಗಳಲ್ಲಿ ಒಟ್ಟು ಕರ್ನಾಟಕದ ಐವರು ಆಟಗಾರರಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 02, 2024 | 3:52 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

1 / 9
ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

2 / 9
ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 9
ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

4 / 9
ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 9
ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

6 / 9
ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

7 / 9
ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

8 / 9
ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

9 / 9
Follow us
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ