AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 35 ಸಿಕ್ಸ್, 46 ಫೋರ್: RCB ತಂಡಕ್ಕೆ ಕನ್ನಡಿಗನದ್ದೇ ಚಿಂತೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಕಠಿಣ ಎದುರಾಳಿ ಕನ್ನಡಿಗ ಕೆಎಲ್ ರಾಹುಲ್.

TV9 Web
| Edited By: |

Updated on:Apr 02, 2024 | 2:56 PM

Share
IPL 2024 RCB vs LSG: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಕದನ ನಡೆಯಲಿದೆ. ಅದು ಕೂಡ ಕರ್ನಾಟಕದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಎಂಬುದು ವಿಶೇಷ. ಹೀಗಾಗಿ ತವರು ಮೈದಾನದಲ್ಲಿ ಕೆಎಲ್ ರಾಹುಲ್​ಗೂ ಫುಲ್ ಸಪೋರ್ಟ್ ಕಂಡು ಬರಲಿದೆ.

IPL 2024 RCB vs LSG: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಕದನ ನಡೆಯಲಿದೆ. ಅದು ಕೂಡ ಕರ್ನಾಟಕದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಎಂಬುದು ವಿಶೇಷ. ಹೀಗಾಗಿ ತವರು ಮೈದಾನದಲ್ಲಿ ಕೆಎಲ್ ರಾಹುಲ್​ಗೂ ಫುಲ್ ಸಪೋರ್ಟ್ ಕಂಡು ಬರಲಿದೆ.

1 / 6
ಇದುವೇ ಈಗ ಆರ್​ಸಿಬಿ ತಂಡದ ಚಿಂತೆಗೂ ಕಾರಣವಾಗಿದೆ. ಏಕೆಂದರೆ ಕೆಎಲ್ ರಾಹುಲ್ ಯಾವ ತಂಡದ ವಿರುದ್ಧ ಆಡುತ್ತರೋ ಗೊತ್ತಿಲ್ಲ. ಆದರೆ ಆರ್​ಸಿಬಿ ವಿರುದ್ಧ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿರುದ್ಧದ ಅವರ ಅಂಕಿ ಅಂಶಗಳೇ ಸಾಕ್ಷಿ.

ಇದುವೇ ಈಗ ಆರ್​ಸಿಬಿ ತಂಡದ ಚಿಂತೆಗೂ ಕಾರಣವಾಗಿದೆ. ಏಕೆಂದರೆ ಕೆಎಲ್ ರಾಹುಲ್ ಯಾವ ತಂಡದ ವಿರುದ್ಧ ಆಡುತ್ತರೋ ಗೊತ್ತಿಲ್ಲ. ಆದರೆ ಆರ್​ಸಿಬಿ ವಿರುದ್ಧ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿರುದ್ಧದ ಅವರ ಅಂಕಿ ಅಂಶಗಳೇ ಸಾಕ್ಷಿ.

2 / 6
ಏಕೆಂದರೆ ಕೆಎಲ್ ರಾಹುಲ್ ಇದುವರೆಗೆ ಆರ್​ಸಿಬಿ ವಿರುದ್ಧ ಒಟ್ಟು 14 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಬರೋಬ್ಬರಿ 628 ರನ್​ ಕಲೆಹಾಕಿದ್ದಾರೆ. ಹಾಗೆಯೇ ನಾಲ್ಕು ಬಾರಿ ಅಜೇಯರಾಗಿ ಕೂಡ ಉಳಿದಿದ್ದರು. ಅಂದರೆ ಆರ್​ಸಿಬಿ ವಿರುದ್ಧ ಕೆಎಲ್ ರಾಹುಲ್ 69.77 ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾರೆ.

ಏಕೆಂದರೆ ಕೆಎಲ್ ರಾಹುಲ್ ಇದುವರೆಗೆ ಆರ್​ಸಿಬಿ ವಿರುದ್ಧ ಒಟ್ಟು 14 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಬರೋಬ್ಬರಿ 628 ರನ್​ ಕಲೆಹಾಕಿದ್ದಾರೆ. ಹಾಗೆಯೇ ನಾಲ್ಕು ಬಾರಿ ಅಜೇಯರಾಗಿ ಕೂಡ ಉಳಿದಿದ್ದರು. ಅಂದರೆ ಆರ್​ಸಿಬಿ ವಿರುದ್ಧ ಕೆಎಲ್ ರಾಹುಲ್ 69.77 ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾರೆ.

3 / 6
ಇನ್ನು ಆರ್​ಸಿಬಿ ವಿರುದ್ಧ 144.03 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಕೆಎಲ್ ರಾಹುಲ್ 1 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೇ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು 46 ಫೋರ್​ಗಳು ಹಾಗೂ 35 ಸಿಕ್ಸ್​ಗಳು.

ಇನ್ನು ಆರ್​ಸಿಬಿ ವಿರುದ್ಧ 144.03 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಕೆಎಲ್ ರಾಹುಲ್ 1 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೇ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು 46 ಫೋರ್​ಗಳು ಹಾಗೂ 35 ಸಿಕ್ಸ್​ಗಳು.

4 / 6
ಅಂದರೆ ಆರ್​ಸಿಬಿ ವಿರುದ್ಧದ 14 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಸಿಕ್ಸ್​ ಹಾಗೂ ಫೋರ್​ಗಳ ಮೂಲಕವೇ ಒಟ್ಟು 394 ರನ್​ ಬಾರಿಸಿದ್ದಾರೆ. ಇದೀಗ ಕೆಎಲ್ ರಾಹುಲ್ ತನ್ನ ತವರು ಮೈದಾನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಅಂದರೆ ಆರ್​ಸಿಬಿ ವಿರುದ್ಧದ 14 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಸಿಕ್ಸ್​ ಹಾಗೂ ಫೋರ್​ಗಳ ಮೂಲಕವೇ ಒಟ್ಟು 394 ರನ್​ ಬಾರಿಸಿದ್ದಾರೆ. ಇದೀಗ ಕೆಎಲ್ ರಾಹುಲ್ ತನ್ನ ತವರು ಮೈದಾನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

5 / 6
ಇತ್ತ ಆರ್​ಸಿಬಿ ಅಭಿಮಾನಿಗಳು ಕೂಡ ಕೆಎಲ್ ರಾಹುಲ್ ಕಡೆಯಿಂದ ಭರ್ಜರಿ ಇನಿಂಗ್ಸ್​ನ ನಿರೀಕ್ಷಿಸುತ್ತಿದ್ದಾರೆ. ಒಂದು ವೇಳೆ ಆರ್​ಸಿಬಿ ವಿರುದ್ಧ ಕೆಎಲ್​​ಆರ್ ಅಬ್ಬರಿಸಲಾರಂಭಿಸಿದರೆ ಪ್ರೇಕ್ಷಕರ ಗ್ಯಾಲರಿಯಿಂದ ಭರಪೂರ ಬೆಂಬಲ ವ್ಯಕ್ತವಾಗುವುದರಲ್ಲಿ ಅನುಮಾನವೇ ಇಲ್ಲ.

ಇತ್ತ ಆರ್​ಸಿಬಿ ಅಭಿಮಾನಿಗಳು ಕೂಡ ಕೆಎಲ್ ರಾಹುಲ್ ಕಡೆಯಿಂದ ಭರ್ಜರಿ ಇನಿಂಗ್ಸ್​ನ ನಿರೀಕ್ಷಿಸುತ್ತಿದ್ದಾರೆ. ಒಂದು ವೇಳೆ ಆರ್​ಸಿಬಿ ವಿರುದ್ಧ ಕೆಎಲ್​​ಆರ್ ಅಬ್ಬರಿಸಲಾರಂಭಿಸಿದರೆ ಪ್ರೇಕ್ಷಕರ ಗ್ಯಾಲರಿಯಿಂದ ಭರಪೂರ ಬೆಂಬಲ ವ್ಯಕ್ತವಾಗುವುದರಲ್ಲಿ ಅನುಮಾನವೇ ಇಲ್ಲ.

6 / 6

Published On - 2:53 pm, Tue, 2 April 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ