AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯದಲ್ಲಿ RCB ಯಾಕೆ ಗೆಲ್ಲಲೇಬೇಕು ಅಂದರೆ…

IPL 2024 RCB vs SRH: ಐಪಿಎಲ್​ 2024 ರ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ.

TV9 Web
| Edited By: |

Updated on: Apr 15, 2024 | 11:09 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆಲ್ಲಲೇಬೇಕು. ಯಾಕೆಂದರೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆಲ್ಲಲೇಬೇಕು. ಯಾಕೆಂದರೆ...

1 / 6
ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ಒಂದು ಸ್ಥಾನ ಮೇಲೇರಬಹುದು.

ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ಒಂದು ಸ್ಥಾನ ಮೇಲೇರಬಹುದು.

2 / 6
ಅಲ್ಲದೆ ದ್ವಿತೀಯಾರ್ಧದ ಆರಂಭಕ್ಕೂ ಮುನ್ನವೇ 4 ಅಂಕಗಳೊಂದಿಗೆ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅಂದರೆ ಎಸ್​ಆರ್​ಹೆಚ್ ವಿರುದ್ಧ ಗೆಲುವು ದಾಖಲಿಸಿದರೆ, ಆರ್​ಸಿಬಿ ಮುಂದಿನ 7 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

ಅಲ್ಲದೆ ದ್ವಿತೀಯಾರ್ಧದ ಆರಂಭಕ್ಕೂ ಮುನ್ನವೇ 4 ಅಂಕಗಳೊಂದಿಗೆ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅಂದರೆ ಎಸ್​ಆರ್​ಹೆಚ್ ವಿರುದ್ಧ ಗೆಲುವು ದಾಖಲಿಸಿದರೆ, ಆರ್​ಸಿಬಿ ಮುಂದಿನ 7 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

3 / 6
ಅಥವಾ ದ್ವಿತೀಯಾರ್ಧದ 7 ಪಂದ್ಯಗಳಲ್ಲಿ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೊಂದಬಹುದು. ಹೀಗಾಗಿ ಮೊದಲಾರ್ಧದ ಕೊನೆಯ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಆರ್​ಸಿಬಿ ಗೆಲ್ಲಲೇಬೇಕು.

ಅಥವಾ ದ್ವಿತೀಯಾರ್ಧದ 7 ಪಂದ್ಯಗಳಲ್ಲಿ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೊಂದಬಹುದು. ಹೀಗಾಗಿ ಮೊದಲಾರ್ಧದ ಕೊನೆಯ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಆರ್​ಸಿಬಿ ಗೆಲ್ಲಲೇಬೇಕು.

4 / 6
ಏಕೆಂದರೆ ಆರ್​ಸಿಬಿ ಈಗಾಗಲೇ ತವರಿನಲ್ಲಿ 3 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಮ್ಯಾಚ್​ಗಳಲ್ಲಿ ಸೋತರೆ, ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ತವರಿನಲ್ಲಿ ನಡೆಯುವ ಈ ನಾಲ್ಕು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಇರಲಿದೆ.

ಏಕೆಂದರೆ ಆರ್​ಸಿಬಿ ಈಗಾಗಲೇ ತವರಿನಲ್ಲಿ 3 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಮ್ಯಾಚ್​ಗಳಲ್ಲಿ ಸೋತರೆ, ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ತವರಿನಲ್ಲಿ ನಡೆಯುವ ಈ ನಾಲ್ಕು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಇರಲಿದೆ.

5 / 6
ಹೀಗಾಗಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಹೀಗಾಗಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

6 / 6
Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!