AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಹೆಸರು ಬದಲಾವಣೆ..?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಕಳೆದ ಬಾರಿ ವಿನ್ನರ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್​ ಈ ಬಾರಿ ಕೂಡ ಮೊದಲ ಪಂದ್ಯವನ್ನಾಡಲಿದೆ. ಆದರೆ ಐಪಿಎಲ್ 2023 ರ ರನ್ನರ್ ಅಪ್ ಗುಜರಾತ್ ಟೈಟಾನ್ಸ್ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ.

TV9 Web
| Edited By: |

Updated on:Mar 13, 2024 | 12:20 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೂ ಮುನ್ನ RCB ಯಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಹೊಸ ಹೆಸರಿನೊಂದಿಗೆ ಕಣಕ್ಕಿಳಿಯಲಿದೆ ಎಂದು ತಿಳಿದು ಬಂದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೂ ಮುನ್ನ RCB ಯಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಹೊಸ ಹೆಸರಿನೊಂದಿಗೆ ಕಣಕ್ಕಿಳಿಯಲಿದೆ ಎಂದು ತಿಳಿದು ಬಂದಿದೆ.

1 / 6
ಹೌದು, ಈ ಬಾರಿ ಆರ್​ಸಿಬಿ ತಂಡವು ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಮಾರ್ಚ್ 19 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ಹೆಸರು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಎಂದು ಘೋಷಣೆಯಾಗಲಿದೆ ಎಂದು ವರದಿಯಾಗಿದೆ.

ಹೌದು, ಈ ಬಾರಿ ಆರ್​ಸಿಬಿ ತಂಡವು ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಮಾರ್ಚ್ 19 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ಹೆಸರು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಎಂದು ಘೋಷಣೆಯಾಗಲಿದೆ ಎಂದು ವರದಿಯಾಗಿದೆ.

2 / 6
ಈ ಹಿಂದಿನಿಂದಲೂ ಆರ್​ಸಿಬಿ ಅಭಿಮಾನಿಗಳು ಬ್ಯಾಂಗಲೂರ್ ಬದಲಿಗೆ ಬೆಂಗಳೂರು ಬಳಸುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿ ಸಲ್ಲಿಸುತ್ತಾ ಬಂದಿದ್ದರು. ಇದೀಗ ಅಭಿಮಾನಿಗಳ ಬಹುಕಾಲದ ಈ ಬೇಡಿಕೆಯನ್ನು ಈಡೇರಿಸಲು ಆರ್​ಸಿಬಿ ಫ್ರಾಂಚೈಸಿ ಮುಂದಾಗಿದೆ.

ಈ ಹಿಂದಿನಿಂದಲೂ ಆರ್​ಸಿಬಿ ಅಭಿಮಾನಿಗಳು ಬ್ಯಾಂಗಲೂರ್ ಬದಲಿಗೆ ಬೆಂಗಳೂರು ಬಳಸುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿ ಸಲ್ಲಿಸುತ್ತಾ ಬಂದಿದ್ದರು. ಇದೀಗ ಅಭಿಮಾನಿಗಳ ಬಹುಕಾಲದ ಈ ಬೇಡಿಕೆಯನ್ನು ಈಡೇರಿಸಲು ಆರ್​ಸಿಬಿ ಫ್ರಾಂಚೈಸಿ ಮುಂದಾಗಿದೆ.

3 / 6
ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ಆರ್​ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ಹೊಸ ಹೆಸರಿನೊಂದಿಗೆ ಐಪಿಎಲ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.

ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ಆರ್​ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ಹೊಸ ಹೆಸರಿನೊಂದಿಗೆ ಐಪಿಎಲ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.

4 / 6
ಬಹುನಿರೀಕ್ಷಿತ ಐಪಿಎಲ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಬಹುನಿರೀಕ್ಷಿತ ಐಪಿಎಲ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6

Published On - 12:04 pm, Wed, 13 March 24

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ