AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೂರು ಪಂದ್ಯಗಳಲ್ಲೇ ಶತಕ ಪೂರೈಸಿದ RCB ವೇಗಿ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ವೇಗದ ಬೌಲರ್ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ.

TV9 Web
| Edited By: |

Updated on: Mar 30, 2024 | 2:02 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಈ ಮೂರು ಪಂದ್ಯಗಳಲ್ಲಿ ಒಂದು ಮ್ಯಾಚ್​ನಲ್ಲಿ ಜಯ ಸಾಧಿಸಿದರೆ, 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಸೋಲುಗಳಿಗೆ ಪ್ರಮುಖ ಕಾರಣ ಆರ್​ಸಿಬಿ ತಂಡದ ಬೌಲರ್​ಗಳು ಎಂದರೆ ತಪ್ಪಾಗಲಾರದು.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಈ ಮೂರು ಪಂದ್ಯಗಳಲ್ಲಿ ಒಂದು ಮ್ಯಾಚ್​ನಲ್ಲಿ ಜಯ ಸಾಧಿಸಿದರೆ, 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಸೋಲುಗಳಿಗೆ ಪ್ರಮುಖ ಕಾರಣ ಆರ್​ಸಿಬಿ ತಂಡದ ಬೌಲರ್​ಗಳು ಎಂದರೆ ತಪ್ಪಾಗಲಾರದು.

1 / 6
ಅದರಲ್ಲೂ ಆರ್​ಸಿಬಿ ತಂಡದ ವೇಗಿ ಅಲ್ಝಾರಿ ಜೋಸೆಫ್ ಕೇವಲ ಮೂರು ಪಂದ್ಯಗಳಲ್ಲೇ 100 ಕ್ಕಿಂತ ಅಧಿಕ ರನ್ ಬಿಟ್ಟುಕೊಟ್ಟಿದ್ದಾರೆ. ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿ 3.4 ಓವರ್ ಬೌಲಿಂಗ್ ಮಾಡಿದ್ದ ಅಲ್ಝಾರಿ 38 ರನ್ ನೀಡಿದ್ದರು. ಆದರೆ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

ಅದರಲ್ಲೂ ಆರ್​ಸಿಬಿ ತಂಡದ ವೇಗಿ ಅಲ್ಝಾರಿ ಜೋಸೆಫ್ ಕೇವಲ ಮೂರು ಪಂದ್ಯಗಳಲ್ಲೇ 100 ಕ್ಕಿಂತ ಅಧಿಕ ರನ್ ಬಿಟ್ಟುಕೊಟ್ಟಿದ್ದಾರೆ. ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿ 3.4 ಓವರ್ ಬೌಲಿಂಗ್ ಮಾಡಿದ್ದ ಅಲ್ಝಾರಿ 38 ರನ್ ನೀಡಿದ್ದರು. ಆದರೆ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

2 / 6
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ 2ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೂ, ಅಲ್ಝಾರಿ ಜೋಸೆಫ್ ಮಿಂಚಿನ ದಾಳಿ ಸಂಘಟಿಸುವಲ್ಲಿ ವಿಫಲರಾಗಿದ್ದರು. ಈ ಪಂದ್ಯದಲ್ಲಿ ನಾಲ್ಕು ಓವರ್ ಎಸೆದಿದ್ದ ಅಲ್ಝಾರಿ 43 ರನ್ ನೀಡಿ 1 ವಿಕೆಟ್ ಕಬಲಿಸಲಷ್ಟೇ ಶಕ್ತರಾಗಿದ್ದರು.

ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ 2ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೂ, ಅಲ್ಝಾರಿ ಜೋಸೆಫ್ ಮಿಂಚಿನ ದಾಳಿ ಸಂಘಟಿಸುವಲ್ಲಿ ವಿಫಲರಾಗಿದ್ದರು. ಈ ಪಂದ್ಯದಲ್ಲಿ ನಾಲ್ಕು ಓವರ್ ಎಸೆದಿದ್ದ ಅಲ್ಝಾರಿ 43 ರನ್ ನೀಡಿ 1 ವಿಕೆಟ್ ಕಬಲಿಸಲಷ್ಟೇ ಶಕ್ತರಾಗಿದ್ದರು.

3 / 6
ಹಾಗೆಯೇ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅಲ್ಝಾರಿ ಜೋಸೆಫ್ 2 ಓವರ್​ಗಳನ್ನು ಮಾತ್ರ ಎಸೆದಿದ್ದರು. ಈ 12 ಎಸೆತಗಳಲ್ಲಿ ನೀಡಿದ್ದು ಬರೋಬ್ಬರಿ 34 ರನ್​ಗಳು.

ಹಾಗೆಯೇ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅಲ್ಝಾರಿ ಜೋಸೆಫ್ 2 ಓವರ್​ಗಳನ್ನು ಮಾತ್ರ ಎಸೆದಿದ್ದರು. ಈ 12 ಎಸೆತಗಳಲ್ಲಿ ನೀಡಿದ್ದು ಬರೋಬ್ಬರಿ 34 ರನ್​ಗಳು.

4 / 6
ಹೀಗೆ ಮೂರು ಪಂದ್ಯಗಳಲ್ಲಿ 9.4 ಓವರ್​ಗಳನ್ನು ಎಸೆದಿರುವ ಅಲ್ಝಾರಿ ಜೋಸೆಫ್ ಒಟ್ಟು 115 ರನ್​ಗಳನ್ನು ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ದುಬಾರಿಯಾಗಿ ಪರಿಣಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ವಿಂಡೀಸ್ ವೇಗಿಯನ್ನು ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ.

ಹೀಗೆ ಮೂರು ಪಂದ್ಯಗಳಲ್ಲಿ 9.4 ಓವರ್​ಗಳನ್ನು ಎಸೆದಿರುವ ಅಲ್ಝಾರಿ ಜೋಸೆಫ್ ಒಟ್ಟು 115 ರನ್​ಗಳನ್ನು ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ದುಬಾರಿಯಾಗಿ ಪರಿಣಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ವಿಂಡೀಸ್ ವೇಗಿಯನ್ನು ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ.

5 / 6
RCB ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

RCB ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

6 / 6
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!