AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಒಂದು ರನ್​ಗೆ 21 ಲಕ್ಷ ರೂ: ಇದು ಮ್ಯಾಕ್ಸ್​ವೆಲ್ ಆಟ..!

IPL 2024 RCB vs RR: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡ ಸೋಲನುಭವಿಸಿದೆ. ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 4 ವಿಕೆಟ್​ಗಳ ಜಯ ಸಾಧಿಸಿ, ಕ್ವಾಲಿಫೈಯರ್-2 ಹಂತಕ್ಕೇರಿದರೆ, ಆರ್​ಸಿಬಿ ಐಪಿಎಲ್​ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಆರ್​ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಪ್ರದರ್ಶನದ ಬಗ್ಗೆ ಚರ್ಚೆಗಳು ಶುರುವಾಗಿದೆ.

ಝಾಹಿರ್ ಯೂಸುಫ್
|

Updated on: May 23, 2024 | 1:58 PM

Share
IPL 2024: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell). ಟೂರ್ನಿಯ ಆರಂಭದಿಂದ ಶುರುವಾದ ಈ ವೈಫಲ್ಯವು ಅಂತಿಮ ಪಂದ್ಯದವರೆಗೂ ಮುಂದುವರೆದದ್ದು ಮಾತ್ರ ವಿಪರ್ಯಾಸ.

IPL 2024: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell). ಟೂರ್ನಿಯ ಆರಂಭದಿಂದ ಶುರುವಾದ ಈ ವೈಫಲ್ಯವು ಅಂತಿಮ ಪಂದ್ಯದವರೆಗೂ ಮುಂದುವರೆದದ್ದು ಮಾತ್ರ ವಿಪರ್ಯಾಸ.

1 / 5
ಅದರಲ್ಲೂ ನಿರ್ಣಾಯಕ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಗೋಲ್ಡನ್ ಡಕ್​ಗೆ ಔಟಾಗಿದ್ದರು. ಇದಾದ ಬಳಿಕ 5ನೇ ಓವರ್​ನಲ್ಲಿ ಸುಲಭ ಕ್ಯಾಚ್​ವೊಂದನ್ನು ಕೈಚೆಲ್ಲಿದ್ದರು. ಒಂದು ವೇಳೆ ಟಾಮ್ ಕೊಹ್ಲರ್​ ಅವರ ಈ ಕ್ಯಾಚ್ ಹಿಡಿದಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲೇ ಒತ್ತಡಕ್ಕೊಳಗಾಗುತ್ತಿತ್ತು. ಆದರೆ ಅತ್ತ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದ ಮ್ಯಾಕ್ಸ್​ವೆಲ್ ಫೀಲ್ಡಿಂಗ್​ನಲ್ಲೂ ಆರ್​ಸಿಬಿ ಪಾಲಿಗೆ ದುಬಾರಿಯಾದರು.

ಅದರಲ್ಲೂ ನಿರ್ಣಾಯಕ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಗೋಲ್ಡನ್ ಡಕ್​ಗೆ ಔಟಾಗಿದ್ದರು. ಇದಾದ ಬಳಿಕ 5ನೇ ಓವರ್​ನಲ್ಲಿ ಸುಲಭ ಕ್ಯಾಚ್​ವೊಂದನ್ನು ಕೈಚೆಲ್ಲಿದ್ದರು. ಒಂದು ವೇಳೆ ಟಾಮ್ ಕೊಹ್ಲರ್​ ಅವರ ಈ ಕ್ಯಾಚ್ ಹಿಡಿದಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲೇ ಒತ್ತಡಕ್ಕೊಳಗಾಗುತ್ತಿತ್ತು. ಆದರೆ ಅತ್ತ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದ ಮ್ಯಾಕ್ಸ್​ವೆಲ್ ಫೀಲ್ಡಿಂಗ್​ನಲ್ಲೂ ಆರ್​ಸಿಬಿ ಪಾಲಿಗೆ ದುಬಾರಿಯಾದರು.

2 / 5
ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಕೊಡುಗೆ ಕೇವಲ 52 ರನ್​ಗಳು. ಅಂದರೆ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ಒಂದೇ ಸೀಸನ್​ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದಾರೆ ಎಂದರೆ ನಂಬಲೇಬೇಕು.

ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಕೊಡುಗೆ ಕೇವಲ 52 ರನ್​ಗಳು. ಅಂದರೆ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ಒಂದೇ ಸೀಸನ್​ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದಾರೆ ಎಂದರೆ ನಂಬಲೇಬೇಕು.

3 / 5
ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಗ್ಲೆನ್ ಮ್ಯಾಕ್ಸ್​ವೆಲ್​ಗಾಗಿ ಆರ್​ಸಿಬಿ ನೀಡುತ್ತಿರುವ ಸಂಭಾವನೆ. ಅಂದರೆ ಈ ಸೀಸನ್​ಗಾಗಿ ಮ್ಯಾಕ್ಸ್​ವೆಲ್ ಪಡೆದಿರುವುದು ಬರೋಬ್ಬರಿ 11 ಕೋಟಿ ರೂ. ಅಂದರೆ ಕೇವಲ 52 ರನ್​ ಕಲೆಹಾಕಿರುವ ಮ್ಯಾಕ್ಸ್​ವೆಲ್ ಪ್ರತಿ ರನ್​ಗೆ ಮೊತ್ತ 21 ಲಕ್ಷ ರೂ. ಪಡೆದಿದ್ದಾರೆ.

ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಗ್ಲೆನ್ ಮ್ಯಾಕ್ಸ್​ವೆಲ್​ಗಾಗಿ ಆರ್​ಸಿಬಿ ನೀಡುತ್ತಿರುವ ಸಂಭಾವನೆ. ಅಂದರೆ ಈ ಸೀಸನ್​ಗಾಗಿ ಮ್ಯಾಕ್ಸ್​ವೆಲ್ ಪಡೆದಿರುವುದು ಬರೋಬ್ಬರಿ 11 ಕೋಟಿ ರೂ. ಅಂದರೆ ಕೇವಲ 52 ರನ್​ ಕಲೆಹಾಕಿರುವ ಮ್ಯಾಕ್ಸ್​ವೆಲ್ ಪ್ರತಿ ರನ್​ಗೆ ಮೊತ್ತ 21 ಲಕ್ಷ ರೂ. ಪಡೆದಿದ್ದಾರೆ.

4 / 5
ಇನ್ನು ಬೌಲಿಂಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಿಂದ ಕೇವಲ 6 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಅಂದರೆ ಆಲ್​ರೌಂಡರ್ ಆಗಿ ಮ್ಯಾಕ್ಸ್​ವೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಕೈ ಕೊಡುವ ಮೂಲಕ ಆರ್​ಸಿಬಿ ತಂಡದ ಸೋಲಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಪ್ರಮುಖ ಕಾರಣಕರ್ತರಾಗಿದ್ದಾರೆ.

ಇನ್ನು ಬೌಲಿಂಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಿಂದ ಕೇವಲ 6 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಅಂದರೆ ಆಲ್​ರೌಂಡರ್ ಆಗಿ ಮ್ಯಾಕ್ಸ್​ವೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಕೈ ಕೊಡುವ ಮೂಲಕ ಆರ್​ಸಿಬಿ ತಂಡದ ಸೋಲಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಪ್ರಮುಖ ಕಾರಣಕರ್ತರಾಗಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ