Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 15 ದಿನಗಳಲ್ಲಿ ಐಪಿಎಲ್​ನ ಚಿತ್ರಣ ಬದಲಿಸಿದ RCB

IPL 2024: ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಲ್ಲಿ ಆರ್​ಸಿಬಿ ಕಳಪೆ ಪ್ರದರ್ಶನ ನೀಡಿತ್ತು. ಪರಿಣಾಮ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು. ಮೇ 3 ರಂದು ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೇ 18 ರ ವೇಳೆಗೆ ಪ್ಲೇಆಫ್ ಪ್ರವೇಶಿಸಿರುವುದು ಗ್ರೇಟೆಸ್ಟ್ ಕಂಬ್ಯಾಕ್ ಎಂದು ವರ್ಣಿಸಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:22 PM

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ಅನ್ನು  RCB ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಪರಾಜಯಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್​ ಮಾತ್ರ. ಅಂದರೆ 7 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ಅನ್ನು RCB ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಪರಾಜಯಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್​ ಮಾತ್ರ. ಅಂದರೆ 7 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

1 / 5
ಇನ್ನು ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೂ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿಯೇ ಎಲ್ಲರೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವುದಿಲ್ಲ ಎಂದೇ ಭಾವಿಸಿದ್ದರು. ಏಕೆಂದರೆ ಮೇ 3 ರಂದು ಪ್ರಕಟವಾದ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು 10ನೇ ಸ್ಥಾನದಲ್ಲಿತ್ತು.

ಇನ್ನು ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೂ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿಯೇ ಎಲ್ಲರೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವುದಿಲ್ಲ ಎಂದೇ ಭಾವಿಸಿದ್ದರು. ಏಕೆಂದರೆ ಮೇ 3 ರಂದು ಪ್ರಕಟವಾದ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು 10ನೇ ಸ್ಥಾನದಲ್ಲಿತ್ತು.

2 / 5
ಇದಾದ ಬಳಿಕ ಆರ್​ಸಿಬಿ ತಂಡದ ಕಂಬ್ಯಾಕ್ ಮಾತ್ರ ಅದ್ಭುತ ಎನ್ನದೇ ವಿಧಿಯಿಲ್ಲ. ಏಕೆಂದರೆ ಕಳೆದ 15 ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದಾರೆ.

ಇದಾದ ಬಳಿಕ ಆರ್​ಸಿಬಿ ತಂಡದ ಕಂಬ್ಯಾಕ್ ಮಾತ್ರ ಅದ್ಭುತ ಎನ್ನದೇ ವಿಧಿಯಿಲ್ಲ. ಏಕೆಂದರೆ ಕಳೆದ 15 ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದಾರೆ.

3 / 5
ಮೊದಲ 8 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ ಆ ಬಳಿಕ ಸತತ 6 ಗೆಲುವು ದಾಖಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ.

ಮೊದಲ 8 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ ಆ ಬಳಿಕ ಸತತ 6 ಗೆಲುವು ದಾಖಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ.

4 / 5
ಈ ಮೂಲಕ ಆರ್​ಸಿಬಿ ಪಾಲಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಇದೀಗ ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ಆರ್​ಸಿಬಿ ಪಾಲಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಇದೀಗ ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

5 / 5

Published On - 10:51 am, Sun, 19 May 24

Follow us
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ