Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 15 ದಿನಗಳಲ್ಲಿ ಐಪಿಎಲ್​ನ ಚಿತ್ರಣ ಬದಲಿಸಿದ RCB

IPL 2024: ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಲ್ಲಿ ಆರ್​ಸಿಬಿ ಕಳಪೆ ಪ್ರದರ್ಶನ ನೀಡಿತ್ತು. ಪರಿಣಾಮ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು. ಮೇ 3 ರಂದು ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೇ 18 ರ ವೇಳೆಗೆ ಪ್ಲೇಆಫ್ ಪ್ರವೇಶಿಸಿರುವುದು ಗ್ರೇಟೆಸ್ಟ್ ಕಂಬ್ಯಾಕ್ ಎಂದು ವರ್ಣಿಸಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:22 PM

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ಅನ್ನು  RCB ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಪರಾಜಯಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್​ ಮಾತ್ರ. ಅಂದರೆ 7 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ಅನ್ನು RCB ಸೋಲಿನೊಂದಿಗೆ ಆರಂಭಿಸಿತ್ತು. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಪರಾಜಯಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್​ ಮಾತ್ರ. ಅಂದರೆ 7 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.

1 / 5
ಇನ್ನು ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೂ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿಯೇ ಎಲ್ಲರೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವುದಿಲ್ಲ ಎಂದೇ ಭಾವಿಸಿದ್ದರು. ಏಕೆಂದರೆ ಮೇ 3 ರಂದು ಪ್ರಕಟವಾದ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು 10ನೇ ಸ್ಥಾನದಲ್ಲಿತ್ತು.

ಇನ್ನು ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೂ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿಯೇ ಎಲ್ಲರೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶಿಸುವುದಿಲ್ಲ ಎಂದೇ ಭಾವಿಸಿದ್ದರು. ಏಕೆಂದರೆ ಮೇ 3 ರಂದು ಪ್ರಕಟವಾದ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು 10ನೇ ಸ್ಥಾನದಲ್ಲಿತ್ತು.

2 / 5
ಇದಾದ ಬಳಿಕ ಆರ್​ಸಿಬಿ ತಂಡದ ಕಂಬ್ಯಾಕ್ ಮಾತ್ರ ಅದ್ಭುತ ಎನ್ನದೇ ವಿಧಿಯಿಲ್ಲ. ಏಕೆಂದರೆ ಕಳೆದ 15 ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದಾರೆ.

ಇದಾದ ಬಳಿಕ ಆರ್​ಸಿಬಿ ತಂಡದ ಕಂಬ್ಯಾಕ್ ಮಾತ್ರ ಅದ್ಭುತ ಎನ್ನದೇ ವಿಧಿಯಿಲ್ಲ. ಏಕೆಂದರೆ ಕಳೆದ 15 ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದಾರೆ.

3 / 5
ಮೊದಲ 8 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ ಆ ಬಳಿಕ ಸತತ 6 ಗೆಲುವು ದಾಖಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ.

ಮೊದಲ 8 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ ಆ ಬಳಿಕ ಸತತ 6 ಗೆಲುವು ದಾಖಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ.

4 / 5
ಈ ಮೂಲಕ ಆರ್​ಸಿಬಿ ಪಾಲಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಇದೀಗ ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ಆರ್​ಸಿಬಿ ಪಾಲಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಇದೀಗ ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

5 / 5

Published On - 10:51 am, Sun, 19 May 24

Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್