AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಲ್ಲವೂ ದೇವರ ಪ್ಲ್ಯಾನ್: ಯಶ್​ ಪ್ರದರ್ಶನಕ್ಕೆ ರಿಂಕು ಸಿಂಗ್ ಭಲೇ ಭೇಷ್

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದೆ. ಅದರಂತೆ ಮೇ 22 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:22 PM

Share
IPL 2024: ಐಪಿಎಲ್​ ಸೀಸನ್ 17 ರ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಯಶ್ ದಯಾಳ್ (Yash Dayal) ಕೂಡ ಒಬ್ಬರು.

IPL 2024: ಐಪಿಎಲ್​ ಸೀಸನ್ 17 ರ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಯಶ್ ದಯಾಳ್ (Yash Dayal) ಕೂಡ ಒಬ್ಬರು.

1 / 7
ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಪ್ಲೇಆಫ್ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರು. ಮೊದಲ ಎಸೆತದಲ್ಲಿ ಧೋನಿ ಭರ್ಜರಿ ಸಿಕ್ಸ್ ಸಿಡಿಸಿದರು. ಸಿಎಸ್​ಕೆ ತಂಡದ ಗುರಿಯು 5 ಎಸೆತಗಳಲ್ಲಿ 11 ರನ್​ಗಳಿಗೆ ಇಳಿಯಿತು.

ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಪ್ಲೇಆಫ್ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರು. ಮೊದಲ ಎಸೆತದಲ್ಲಿ ಧೋನಿ ಭರ್ಜರಿ ಸಿಕ್ಸ್ ಸಿಡಿಸಿದರು. ಸಿಎಸ್​ಕೆ ತಂಡದ ಗುರಿಯು 5 ಎಸೆತಗಳಲ್ಲಿ 11 ರನ್​ಗಳಿಗೆ ಇಳಿಯಿತು.

2 / 7
ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶ್​ ದಯಾಳ್ ಯಶಸ್ವಿಯಾದರು. ಇನ್ನು 3ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 4ನೇ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾರನ್ನು ಕಟ್ಟಿ ಹಾಕುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಈ ಮೂಲಕ ಆರ್​ಸಿಬಿ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವಲ್ಲಿ ದಯಾಳ್ ಯಶಸ್ವಿಯಾದರು.

ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶ್​ ದಯಾಳ್ ಯಶಸ್ವಿಯಾದರು. ಇನ್ನು 3ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 4ನೇ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾರನ್ನು ಕಟ್ಟಿ ಹಾಕುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಈ ಮೂಲಕ ಆರ್​ಸಿಬಿ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವಲ್ಲಿ ದಯಾಳ್ ಯಶಸ್ವಿಯಾದರು.

3 / 7
ಅಂತಿಮ ಓವರ್​ನಲ್ಲಿ ಕೇವಲ 7 ರನ್ ಮಾತ್ರ ನೀಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟ ಯಶ್ ದಯಾಳ್ ಅವರ ಪ್ರದರ್ಶನಕ್ಕೆ ಕೆಕೆಆರ್ ಆಟಗಾರ ರಿಂಕು ಸಿಂಗ್ ಭೇಷ್ ಅಂದಿದ್ದಾರೆ. ರಿಂಕು ಸಿಂಗ್ ಹೀಗೆ ಭಲೇ ಭೇಷ್ ಎನ್ನಲು ಮುಖ್ಯ ಕಾರಣ ಇದೇ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು 5 ಸಿಕ್ಸ್ ಸಿಡಿಸಿರುವುದು.

ಅಂತಿಮ ಓವರ್​ನಲ್ಲಿ ಕೇವಲ 7 ರನ್ ಮಾತ್ರ ನೀಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟ ಯಶ್ ದಯಾಳ್ ಅವರ ಪ್ರದರ್ಶನಕ್ಕೆ ಕೆಕೆಆರ್ ಆಟಗಾರ ರಿಂಕು ಸಿಂಗ್ ಭೇಷ್ ಅಂದಿದ್ದಾರೆ. ರಿಂಕು ಸಿಂಗ್ ಹೀಗೆ ಭಲೇ ಭೇಷ್ ಎನ್ನಲು ಮುಖ್ಯ ಕಾರಣ ಇದೇ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು 5 ಸಿಕ್ಸ್ ಸಿಡಿಸಿರುವುದು.

4 / 7
ಐಪಿಎಲ್​ 2023 ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್ ಎಸೆದ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್​ 5 ಭರ್ಜರಿ ಸಿಕ್ಸ್​ ಸಿಡಿಸಿ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಇದೀಗ ಅದೇ ಯಶ್​ ದಯಾಳ್ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

ಐಪಿಎಲ್​ 2023 ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್ ಎಸೆದ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್​ 5 ಭರ್ಜರಿ ಸಿಕ್ಸ್​ ಸಿಡಿಸಿ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಇದೀಗ ಅದೇ ಯಶ್​ ದಯಾಳ್ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

5 / 7
ಈ ಗೆಲುವಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಯಶ್ ದಯಾಳ್ ಅವರ ಫೋಟೋವನ್ನು ಹಂಚಿಕೊಂಡಿರುವ ರಿಂಕು ಸಿಂಗ್, ಎಲ್ಲವೂ ದೇವರ ಪ್ಲ್ಯಾನ್...ಎಂದು ಆರ್​ಸಿಬಿ ವೇಗಿಯ ಪ್ರದರ್ಶನಕ್ಕೆ ಭೇಷ್ ಅಂದಿದ್ದಾರೆ.

ಈ ಗೆಲುವಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಯಶ್ ದಯಾಳ್ ಅವರ ಫೋಟೋವನ್ನು ಹಂಚಿಕೊಂಡಿರುವ ರಿಂಕು ಸಿಂಗ್, ಎಲ್ಲವೂ ದೇವರ ಪ್ಲ್ಯಾನ್...ಎಂದು ಆರ್​ಸಿಬಿ ವೇಗಿಯ ಪ್ರದರ್ಶನಕ್ಕೆ ಭೇಷ್ ಅಂದಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

7 / 7

Published On - 10:01 am, Sun, 19 May 24

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್