AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಲ್ಲವೂ ದೇವರ ಪ್ಲ್ಯಾನ್: ಯಶ್​ ಪ್ರದರ್ಶನಕ್ಕೆ ರಿಂಕು ಸಿಂಗ್ ಭಲೇ ಭೇಷ್

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದೆ. ಅದರಂತೆ ಮೇ 22 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:22 PM

IPL 2024: ಐಪಿಎಲ್​ ಸೀಸನ್ 17 ರ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಯಶ್ ದಯಾಳ್ (Yash Dayal) ಕೂಡ ಒಬ್ಬರು.

IPL 2024: ಐಪಿಎಲ್​ ಸೀಸನ್ 17 ರ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಯಶ್ ದಯಾಳ್ (Yash Dayal) ಕೂಡ ಒಬ್ಬರು.

1 / 7
ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಪ್ಲೇಆಫ್ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರು. ಮೊದಲ ಎಸೆತದಲ್ಲಿ ಧೋನಿ ಭರ್ಜರಿ ಸಿಕ್ಸ್ ಸಿಡಿಸಿದರು. ಸಿಎಸ್​ಕೆ ತಂಡದ ಗುರಿಯು 5 ಎಸೆತಗಳಲ್ಲಿ 11 ರನ್​ಗಳಿಗೆ ಇಳಿಯಿತು.

ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಪ್ಲೇಆಫ್ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರು. ಮೊದಲ ಎಸೆತದಲ್ಲಿ ಧೋನಿ ಭರ್ಜರಿ ಸಿಕ್ಸ್ ಸಿಡಿಸಿದರು. ಸಿಎಸ್​ಕೆ ತಂಡದ ಗುರಿಯು 5 ಎಸೆತಗಳಲ್ಲಿ 11 ರನ್​ಗಳಿಗೆ ಇಳಿಯಿತು.

2 / 7
ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶ್​ ದಯಾಳ್ ಯಶಸ್ವಿಯಾದರು. ಇನ್ನು 3ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 4ನೇ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾರನ್ನು ಕಟ್ಟಿ ಹಾಕುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಈ ಮೂಲಕ ಆರ್​ಸಿಬಿ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವಲ್ಲಿ ದಯಾಳ್ ಯಶಸ್ವಿಯಾದರು.

ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶ್​ ದಯಾಳ್ ಯಶಸ್ವಿಯಾದರು. ಇನ್ನು 3ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 4ನೇ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾರನ್ನು ಕಟ್ಟಿ ಹಾಕುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಈ ಮೂಲಕ ಆರ್​ಸಿಬಿ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವಲ್ಲಿ ದಯಾಳ್ ಯಶಸ್ವಿಯಾದರು.

3 / 7
ಅಂತಿಮ ಓವರ್​ನಲ್ಲಿ ಕೇವಲ 7 ರನ್ ಮಾತ್ರ ನೀಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟ ಯಶ್ ದಯಾಳ್ ಅವರ ಪ್ರದರ್ಶನಕ್ಕೆ ಕೆಕೆಆರ್ ಆಟಗಾರ ರಿಂಕು ಸಿಂಗ್ ಭೇಷ್ ಅಂದಿದ್ದಾರೆ. ರಿಂಕು ಸಿಂಗ್ ಹೀಗೆ ಭಲೇ ಭೇಷ್ ಎನ್ನಲು ಮುಖ್ಯ ಕಾರಣ ಇದೇ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು 5 ಸಿಕ್ಸ್ ಸಿಡಿಸಿರುವುದು.

ಅಂತಿಮ ಓವರ್​ನಲ್ಲಿ ಕೇವಲ 7 ರನ್ ಮಾತ್ರ ನೀಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟ ಯಶ್ ದಯಾಳ್ ಅವರ ಪ್ರದರ್ಶನಕ್ಕೆ ಕೆಕೆಆರ್ ಆಟಗಾರ ರಿಂಕು ಸಿಂಗ್ ಭೇಷ್ ಅಂದಿದ್ದಾರೆ. ರಿಂಕು ಸಿಂಗ್ ಹೀಗೆ ಭಲೇ ಭೇಷ್ ಎನ್ನಲು ಮುಖ್ಯ ಕಾರಣ ಇದೇ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು 5 ಸಿಕ್ಸ್ ಸಿಡಿಸಿರುವುದು.

4 / 7
ಐಪಿಎಲ್​ 2023 ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್ ಎಸೆದ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್​ 5 ಭರ್ಜರಿ ಸಿಕ್ಸ್​ ಸಿಡಿಸಿ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಇದೀಗ ಅದೇ ಯಶ್​ ದಯಾಳ್ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

ಐಪಿಎಲ್​ 2023 ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್ ಎಸೆದ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್​ 5 ಭರ್ಜರಿ ಸಿಕ್ಸ್​ ಸಿಡಿಸಿ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಇದೀಗ ಅದೇ ಯಶ್​ ದಯಾಳ್ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

5 / 7
ಈ ಗೆಲುವಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಯಶ್ ದಯಾಳ್ ಅವರ ಫೋಟೋವನ್ನು ಹಂಚಿಕೊಂಡಿರುವ ರಿಂಕು ಸಿಂಗ್, ಎಲ್ಲವೂ ದೇವರ ಪ್ಲ್ಯಾನ್...ಎಂದು ಆರ್​ಸಿಬಿ ವೇಗಿಯ ಪ್ರದರ್ಶನಕ್ಕೆ ಭೇಷ್ ಅಂದಿದ್ದಾರೆ.

ಈ ಗೆಲುವಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಯಶ್ ದಯಾಳ್ ಅವರ ಫೋಟೋವನ್ನು ಹಂಚಿಕೊಂಡಿರುವ ರಿಂಕು ಸಿಂಗ್, ಎಲ್ಲವೂ ದೇವರ ಪ್ಲ್ಯಾನ್...ಎಂದು ಆರ್​ಸಿಬಿ ವೇಗಿಯ ಪ್ರದರ್ಶನಕ್ಕೆ ಭೇಷ್ ಅಂದಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

7 / 7

Published On - 10:01 am, Sun, 19 May 24

Follow us
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್