IPL 2024: ಎಲ್ಲವೂ ದೇವರ ಪ್ಲ್ಯಾನ್: ಯಶ್​ ಪ್ರದರ್ಶನಕ್ಕೆ ರಿಂಕು ಸಿಂಗ್ ಭಲೇ ಭೇಷ್

Updated on: May 19, 2024 | 2:22 PM

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದೆ. ಅದರಂತೆ ಮೇ 22 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

1 / 7
IPL 2024: ಐಪಿಎಲ್​ ಸೀಸನ್ 17 ರ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಯಶ್ ದಯಾಳ್ (Yash Dayal) ಕೂಡ ಒಬ್ಬರು.

IPL 2024: ಐಪಿಎಲ್​ ಸೀಸನ್ 17 ರ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಯಶ್ ದಯಾಳ್ (Yash Dayal) ಕೂಡ ಒಬ್ಬರು.

2 / 7
ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಪ್ಲೇಆಫ್ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರು. ಮೊದಲ ಎಸೆತದಲ್ಲಿ ಧೋನಿ ಭರ್ಜರಿ ಸಿಕ್ಸ್ ಸಿಡಿಸಿದರು. ಸಿಎಸ್​ಕೆ ತಂಡದ ಗುರಿಯು 5 ಎಸೆತಗಳಲ್ಲಿ 11 ರನ್​ಗಳಿಗೆ ಇಳಿಯಿತು.

ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಪ್ಲೇಆಫ್ ಪ್ರವೇಶಿಸಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರು. ಮೊದಲ ಎಸೆತದಲ್ಲಿ ಧೋನಿ ಭರ್ಜರಿ ಸಿಕ್ಸ್ ಸಿಡಿಸಿದರು. ಸಿಎಸ್​ಕೆ ತಂಡದ ಗುರಿಯು 5 ಎಸೆತಗಳಲ್ಲಿ 11 ರನ್​ಗಳಿಗೆ ಇಳಿಯಿತು.

3 / 7
ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶ್​ ದಯಾಳ್ ಯಶಸ್ವಿಯಾದರು. ಇನ್ನು 3ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 4ನೇ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾರನ್ನು ಕಟ್ಟಿ ಹಾಕುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಈ ಮೂಲಕ ಆರ್​ಸಿಬಿ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವಲ್ಲಿ ದಯಾಳ್ ಯಶಸ್ವಿಯಾದರು.

ಆದರೆ 2ನೇ ಎಸೆತದಲ್ಲಿ ಧೋನಿಯನ್ನು ಔಟ್ ಮಾಡುವಲ್ಲಿ ಯಶ್​ ದಯಾಳ್ ಯಶಸ್ವಿಯಾದರು. ಇನ್ನು 3ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 4ನೇ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾರನ್ನು ಕಟ್ಟಿ ಹಾಕುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಈ ಮೂಲಕ ಆರ್​ಸಿಬಿ ತಂಡವನ್ನು ಪ್ಲೇಆಫ್ ಹಂತಕ್ಕೇರಿಸುವಲ್ಲಿ ದಯಾಳ್ ಯಶಸ್ವಿಯಾದರು.

4 / 7
ಅಂತಿಮ ಓವರ್​ನಲ್ಲಿ ಕೇವಲ 7 ರನ್ ಮಾತ್ರ ನೀಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟ ಯಶ್ ದಯಾಳ್ ಅವರ ಪ್ರದರ್ಶನಕ್ಕೆ ಕೆಕೆಆರ್ ಆಟಗಾರ ರಿಂಕು ಸಿಂಗ್ ಭೇಷ್ ಅಂದಿದ್ದಾರೆ. ರಿಂಕು ಸಿಂಗ್ ಹೀಗೆ ಭಲೇ ಭೇಷ್ ಎನ್ನಲು ಮುಖ್ಯ ಕಾರಣ ಇದೇ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು 5 ಸಿಕ್ಸ್ ಸಿಡಿಸಿರುವುದು.

ಅಂತಿಮ ಓವರ್​ನಲ್ಲಿ ಕೇವಲ 7 ರನ್ ಮಾತ್ರ ನೀಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟ ಯಶ್ ದಯಾಳ್ ಅವರ ಪ್ರದರ್ಶನಕ್ಕೆ ಕೆಕೆಆರ್ ಆಟಗಾರ ರಿಂಕು ಸಿಂಗ್ ಭೇಷ್ ಅಂದಿದ್ದಾರೆ. ರಿಂಕು ಸಿಂಗ್ ಹೀಗೆ ಭಲೇ ಭೇಷ್ ಎನ್ನಲು ಮುಖ್ಯ ಕಾರಣ ಇದೇ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು 5 ಸಿಕ್ಸ್ ಸಿಡಿಸಿರುವುದು.

5 / 7
ಐಪಿಎಲ್​ 2023 ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್ ಎಸೆದ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್​ 5 ಭರ್ಜರಿ ಸಿಕ್ಸ್​ ಸಿಡಿಸಿ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಇದೀಗ ಅದೇ ಯಶ್​ ದಯಾಳ್ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

ಐಪಿಎಲ್​ 2023 ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್ ಎಸೆದ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್​ 5 ಭರ್ಜರಿ ಸಿಕ್ಸ್​ ಸಿಡಿಸಿ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಇದೀಗ ಅದೇ ಯಶ್​ ದಯಾಳ್ ಕೊನೆಯ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

6 / 7
ಈ ಗೆಲುವಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಯಶ್ ದಯಾಳ್ ಅವರ ಫೋಟೋವನ್ನು ಹಂಚಿಕೊಂಡಿರುವ ರಿಂಕು ಸಿಂಗ್, ಎಲ್ಲವೂ ದೇವರ ಪ್ಲ್ಯಾನ್...ಎಂದು ಆರ್​ಸಿಬಿ ವೇಗಿಯ ಪ್ರದರ್ಶನಕ್ಕೆ ಭೇಷ್ ಅಂದಿದ್ದಾರೆ.

ಈ ಗೆಲುವಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಯಶ್ ದಯಾಳ್ ಅವರ ಫೋಟೋವನ್ನು ಹಂಚಿಕೊಂಡಿರುವ ರಿಂಕು ಸಿಂಗ್, ಎಲ್ಲವೂ ದೇವರ ಪ್ಲ್ಯಾನ್...ಎಂದು ಆರ್​ಸಿಬಿ ವೇಗಿಯ ಪ್ರದರ್ಶನಕ್ಕೆ ಭೇಷ್ ಅಂದಿದ್ದಾರೆ.

7 / 7
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

Published On - 10:01 am, Sun, 19 May 24

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us