Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟಿ20 ವಿಶ್ವಕಪ್​ಗೆ ರಿಷಭ್ ಪಂತ್ ಆಯ್ಕೆ ಬಹುತೇಕ ಖಚಿತ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಇದಾಗ್ಯೂ ತಂಡದ ನಾಯಕ ರಿಷಭ್ ಪಂತ್ ಅತ್ಯುತ್ತಮ ಸ್ಟ್ರೈಕ್​ ರೇಟ್​ನೊಂದಿಗೆ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ಇದೀಗ ಪಂತ್ ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2024 | 4:20 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ. ಇದಕ್ಕಾಗಿ ಬಿಸಿಸಿಐ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರು ಕೂಡ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ. ಇದಕ್ಕಾಗಿ ಬಿಸಿಸಿಐ ಕೆಲ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರು ಕೂಡ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಅಪಘಾತದ ಬಳಿಕ ಒಂದು ವರ್ಷದಿಂದ ಹೊರಗುಳಿದಿದ್ದ ಪಂತ್ ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಅಪಘಾತದ ಬಳಿಕ ಒಂದು ವರ್ಷದಿಂದ ಹೊರಗುಳಿದಿದ್ದ ಪಂತ್ ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

2 / 5
ಆಡಿರುವ 5 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 154.55ರ ಸ್ಟ್ರೈಕ್ ರೇಟ್​ನಲ್ಲಿ 153 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭರ್ಜರಿ ಪ್ರದರ್ಶನ ನೀಡಿರುವ ಪಂತ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಚಿಂತಿಸಿದೆ.

ಆಡಿರುವ 5 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 154.55ರ ಸ್ಟ್ರೈಕ್ ರೇಟ್​ನಲ್ಲಿ 153 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭರ್ಜರಿ ಪ್ರದರ್ಶನ ನೀಡಿರುವ ಪಂತ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಚಿಂತಿಸಿದೆ.

3 / 5
ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್​ ಆಗಿ ಆಯ್ಕೆಯಾಗಬಹುದು.

ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್​ ಆಗಿ ಆಯ್ಕೆಯಾಗಬಹುದು.

4 / 5
ಒಟ್ಟಿನಲ್ಲಿ ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ ಎಂದೇ ಹೇಳಬಹುದು.

ಒಟ್ಟಿನಲ್ಲಿ ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ ಎಂದೇ ಹೇಳಬಹುದು.

5 / 5
Follow us
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ