AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ರಿಷಭ್ ಪಂತ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 167 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

TV9 Web
| Edited By: |

Updated on: Apr 13, 2024 | 10:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 26ನೇ ಪಂದ್ಯವು ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 26ನೇ ಪಂದ್ಯವು ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಓವರ್​ನ 3 ಎಸೆತದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಇನ್ನು ಪಂದ್ಯದ 5ನೇ ಓವರ್​ನಲ್ಲಿ ಇಶಾಂತ್ ಶರ್ಮಾ ಎಸೆದ ಚೆಂಡು ಲೆಗ್ ಸೈಡ್​ನತ್ತ ವೈಡ್ ಆಗಿತ್ತು. ತಕ್ಷಣವೇ ಫೀಲ್ಡ್ ಅಂಪೈರ್ ವೈಡ್ ನೀಡಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಓವರ್​ನ 3 ಎಸೆತದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಇನ್ನು ಪಂದ್ಯದ 5ನೇ ಓವರ್​ನಲ್ಲಿ ಇಶಾಂತ್ ಶರ್ಮಾ ಎಸೆದ ಚೆಂಡು ಲೆಗ್ ಸೈಡ್​ನತ್ತ ವೈಡ್ ಆಗಿತ್ತು. ತಕ್ಷಣವೇ ಫೀಲ್ಡ್ ಅಂಪೈರ್ ವೈಡ್ ನೀಡಿದ್ದರು.

2 / 5
ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ರಿವ್ಯೂ ಮೊರೆ ಹೋದರು. ಮರು ಪರಿಶೀಲನೆ ವೇಳೆ ವೈಡ್ ಆಗಿರುವುದು ಸ್ಷಷ್ಟವಾಗಿತ್ತು. ಇತ್ತ ಅಂಪೈರ್ ನಿರ್ಧಾರ ಸರಿಯಾಗಿತ್ತು ಎಂಬುದು ಗೊತ್ತಾಗುತ್ತಿದ್ದಂತೆ ಪಂತ್ ನಾನು ರಿವ್ಯೂ ತೆಗೆದುಕೊಂಡಿಲ್ಲ ಎಂದು ವಾಗ್ವಾದಕ್ಕಿಳಿದರು.

ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ರಿವ್ಯೂ ಮೊರೆ ಹೋದರು. ಮರು ಪರಿಶೀಲನೆ ವೇಳೆ ವೈಡ್ ಆಗಿರುವುದು ಸ್ಷಷ್ಟವಾಗಿತ್ತು. ಇತ್ತ ಅಂಪೈರ್ ನಿರ್ಧಾರ ಸರಿಯಾಗಿತ್ತು ಎಂಬುದು ಗೊತ್ತಾಗುತ್ತಿದ್ದಂತೆ ಪಂತ್ ನಾನು ರಿವ್ಯೂ ತೆಗೆದುಕೊಂಡಿಲ್ಲ ಎಂದು ವಾಗ್ವಾದಕ್ಕಿಳಿದರು.

3 / 5
ನಾನು ಯಾವುದೇ DRS ಬಯಸಿರಲಿಲ್ಲ. ಹೀಗಾಗಿ ನಮ್ಮ ರಿವ್ಯೂ ಅನ್ನು ಕಡಿತ ಮಾಡುವಂತಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ಈ ವೇಳೆ ಟಿವಿ ರಿಪ್ಲೇನಲ್ಲಿ ರಿಷಭ್ ಪಂತ್ ರಿವ್ಯೂಗೆ ಮನವಿ ಸಲ್ಲಿಸುತ್ತಿರುವುದನ್ನು ತೋರಿಸಲಾಯಿತು. ಅತ್ತ ಬಿಗ್ ಸ್ಕ್ರೀನ್​ನಲ್ಲಿ ರಿವ್ಯೂ ಅಪೀಲ್​ಗೆ ಮನವಿ ಸಲ್ಲಿಸುತ್ತಿರುವುದು ಕಾಣುತ್ತಿದ್ದಂತೆ ಪಂತ್ ಅಂಪೈರ್​ ಜೊತೆಗಿನ ವಾಗ್ವಾದ ನಿಲ್ಲಿಸಿ ವಿಕೆಟ್ ಕೀಪಿಂಗ್ ಮಾಡಲು ತೆರಳಿದರು.

ನಾನು ಯಾವುದೇ DRS ಬಯಸಿರಲಿಲ್ಲ. ಹೀಗಾಗಿ ನಮ್ಮ ರಿವ್ಯೂ ಅನ್ನು ಕಡಿತ ಮಾಡುವಂತಿಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ಈ ವೇಳೆ ಟಿವಿ ರಿಪ್ಲೇನಲ್ಲಿ ರಿಷಭ್ ಪಂತ್ ರಿವ್ಯೂಗೆ ಮನವಿ ಸಲ್ಲಿಸುತ್ತಿರುವುದನ್ನು ತೋರಿಸಲಾಯಿತು. ಅತ್ತ ಬಿಗ್ ಸ್ಕ್ರೀನ್​ನಲ್ಲಿ ರಿವ್ಯೂ ಅಪೀಲ್​ಗೆ ಮನವಿ ಸಲ್ಲಿಸುತ್ತಿರುವುದು ಕಾಣುತ್ತಿದ್ದಂತೆ ಪಂತ್ ಅಂಪೈರ್​ ಜೊತೆಗಿನ ವಾಗ್ವಾದ ನಿಲ್ಲಿಸಿ ವಿಕೆಟ್ ಕೀಪಿಂಗ್ ಮಾಡಲು ತೆರಳಿದರು.

4 / 5
ಇದೀಗ ಮೋಸದಾಟಕ್ಕೆ ಮುಂದಾಗಿದ್ದ ರಿಷಭ್ ಪಂತ್ ಅವರ ವಿಡಿಯೋ-ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹ ನಡೆಗಳ ಮೂಲಕ ಅಂಪೈರ್ ಅನ್ನು ಗೊಂದಲಕ್ಕೀಡಲು ಮಾಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ಇದೀಗ ಮೋಸದಾಟಕ್ಕೆ ಮುಂದಾಗಿದ್ದ ರಿಷಭ್ ಪಂತ್ ಅವರ ವಿಡಿಯೋ-ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹ ನಡೆಗಳ ಮೂಲಕ ಅಂಪೈರ್ ಅನ್ನು ಗೊಂದಲಕ್ಕೀಡಲು ಮಾಡಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

5 / 5
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ