AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದ ರಾಬಿನ್ ಉತ್ತಪ್ಪ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಪ್ಲೇಆಫ್ ಹಂತಕ್ಕೇರಲಿರುವುದು ಕೇವಲ ನಾಲ್ಕು ತಂಡಗಳು ಮಾತ್ರ. ಆ ತಂಡಗಳು ಯಾವುವು ಎಂಬುದರ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ.

TV9 Web
| Edited By: |

Updated on: Mar 25, 2024 | 12:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

1 / 6
ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

2 / 6
ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

3 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

4 / 6
ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

5 / 6
ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ