AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದ ರಾಬಿನ್ ಉತ್ತಪ್ಪ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಪ್ಲೇಆಫ್ ಹಂತಕ್ಕೇರಲಿರುವುದು ಕೇವಲ ನಾಲ್ಕು ತಂಡಗಳು ಮಾತ್ರ. ಆ ತಂಡಗಳು ಯಾವುವು ಎಂಬುದರ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ.

TV9 Web
| Edited By: |

Updated on: Mar 25, 2024 | 12:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

1 / 6
ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

2 / 6
ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

3 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

4 / 6
ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

5 / 6
ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ