AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದ ರಾಬಿನ್ ಉತ್ತಪ್ಪ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಪ್ಲೇಆಫ್ ಹಂತಕ್ಕೇರಲಿರುವುದು ಕೇವಲ ನಾಲ್ಕು ತಂಡಗಳು ಮಾತ್ರ. ಆ ತಂಡಗಳು ಯಾವುವು ಎಂಬುದರ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ.

TV9 Web
| Edited By: |

Updated on: Mar 25, 2024 | 12:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

1 / 6
ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

2 / 6
ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

3 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

4 / 6
ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

5 / 6
ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ