IPL 2024: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದ ರಾಬಿನ್ ಉತ್ತಪ್ಪ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಪ್ಲೇಆಫ್ ಹಂತಕ್ಕೇರಲಿರುವುದು ಕೇವಲ ನಾಲ್ಕು ತಂಡಗಳು ಮಾತ್ರ. ಆ ತಂಡಗಳು ಯಾವುವು ಎಂಬುದರ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ.

| Updated By: ಝಾಹಿರ್ ಯೂಸುಫ್

Updated on: Mar 25, 2024 | 12:53 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಂಗೇರಿದೆ. ಈಗಾಗಲೇ 10 ತಂಡಗಳು ತಲಾ ಒಂದೊಂದು ಪಂದ್ಯವಾಡಿದ್ದು, ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ ಕಂಡು ಬಂದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಈ ಸಲ ಪ್ಲೇಆಫ್ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

1 / 6
ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಉತ್ತಪ್ಪ, ಈ ಸಲ ರಾಜಸ್ಥಾನ್ ರಾಯಲ್ಸ್ ತಂಡ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದಿದ್ದಾರೆ. ಏಕೆಂದರೆ ಸಂಜು ಸ್ಯಾಮ್ಸನ್ ನೇತತ್ವದ ರಾಯಲ್ಸ್ ಪಡೆ ಕಳೆದ ಕೆಲ ಸೀಸನ್​ಗಳಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಹಂತಕ್ಕೇರುವುದು ಖಚಿತ. ಅಲ್ಲದೆ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

2 / 6
ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

ಹಾಗೆಯೇ ಪ್ಲೇಆಫ್ ಹಂತಕ್ಕೇರುವ 2ನೇ ತಂಡವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಸಿಎಸ್​ಕೆ ತಂಡದ ನಾಯಕ ಬದಲಾದರೂ ರುತುರಾಜ್ ಗಾಯಕ್ವಾಡ್​ಗೆ ಮಹೇಂದ್ರ ಸಿಂಗ್ ಧೋನಿಯ ಬೆಂಬಲ ಸಿಗಲಿದೆ. ಹೀಗಾಗಿ ಸಿಎಸ್​ಕೆ ತಂಡವನ್ನು ಕೂಡ ಪ್ಲೇಆಫ್ ಹಂತದಲ್ಲಿ ಎದುರು ನೋಡಬಹುದು.

3 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡವು ಬಲಿಷ್ಠ ದಾಂಡಿಗರ ಬಳಗವನ್ನೇ ಹೊಂದಿದ್ದು, ಈ ಆಟಗಾರರು ಫಾರ್ಮ್ ಪ್ರದರ್ಶಿಸಿ ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

4 / 6
ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಸತತ 2 ಬಾರಿ ಫೈನಲ್ ಆಡಿದೆ. ಹೀಗಾಗಿ ಬಲಿಷ್ಠ ಮುಂಬೈ ಪಡೆಯನ್ನು ಸಹ ಅವರು ಪ್ಲೇಆಫ್​ಗೆ ಕೊಂಡೊಯ್ಯುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ರಾಬಿನ್ ಉತ್ತಪ್ಪ.

5 / 6
ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

ರಾಬಿನ್ ಉತ್ತಪ್ಪ ಅವರ ಹೇಳಿಕೆಯಂತೆ, ಈ ಸಲ ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ. ಅದರಂತೆ ಈ ನಾಲ್ಕು ತಂಡಗಳು ಈ ಬಾರಿ ನಾಕೌಟ್ ಪಂದ್ಯಗಳನ್ನಾಡಲಿದೆಯಾ? ರಾಬಿನ್ ಉತ್ತಪ್ಪ ಅವರ ಭವಿಷ್ಯವು ನಿಜವಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ