AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೋಗಿ ಬೌಂಡರಿ ಲೈನ್​ನಲ್ಲಿ ನಿಲ್ಲು: ರೋಹಿತ್ ಶರ್ಮಾರ ಖಡಕ್ ಸೂಚನೆಗೆ ತಬ್ಬಿಬ್ಬಾದ ಪಾಂಡ್ಯ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) 8ನೇ ಪಂದ್ಯದಲ್ಲಿ ಕೆಲ ಕಾಲ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಮೈದಾನದಲ್ಲೇ ಇರುವಾಗ ಎಂಬುದು ವಿಶೇಷ. ಈ ವೇಳೆ ಹಾರ್ದಿಕ್ ಪಾಂಡ್ಯರನ್ನು ಬೌಂಡರಿ ಲೈನ್​ಗೆ ಕಳುಹಿಸುವ ಮೂಲಕ ರೋಹಿತ್ ಶರ್ಮಾ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Mar 28, 2024 | 6:55 AM

Share
IPL 2024: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು 31 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಮುಂಬೈ ತಂಡದ ನಾಯಕನ ನಿರ್ಧಾರವನ್ನು ಸನ್​​ರೈಸರ್ಸ್​ ಬ್ಯಾಟರ್​ಗಳ ಪವರ್​ಪ್ಲೇನಲ್ಲಿ ತಲೆಕೆಳಗಾಗಿಸಿದ್ದರು.

IPL 2024: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು 31 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಮುಂಬೈ ತಂಡದ ನಾಯಕನ ನಿರ್ಧಾರವನ್ನು ಸನ್​​ರೈಸರ್ಸ್​ ಬ್ಯಾಟರ್​ಗಳ ಪವರ್​ಪ್ಲೇನಲ್ಲಿ ತಲೆಕೆಳಗಾಗಿಸಿದ್ದರು.

1 / 7
ಸ್ಪೋಟಕ ಆರಂಭ ಒದಗಿಸಿದ ಟ್ರಾವಿಸ್ ಹೆಡ್ 24 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 9 ಫೋರ್​ಗಳೊಂದಿಗೆ 62 ರನ್ ಸಿಡಿಸಿದರೆ, ಅಭಿಷೇಕ್ ಶರ್ಮಾ ಕೇವಲ 23 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್​ನೊಂದಿಗೆ 63 ರನ್ ಚಚ್ಚಿದರು. ಪರಿಣಾಮ ಪವರ್​ಪ್ಲೇನಲ್ಲಿ ಎಸ್​ಆರ್​ಹೆಚ್ ತಂಡವು 81 ರನ್ ಕಲೆಹಾಕಿತು.

ಸ್ಪೋಟಕ ಆರಂಭ ಒದಗಿಸಿದ ಟ್ರಾವಿಸ್ ಹೆಡ್ 24 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 9 ಫೋರ್​ಗಳೊಂದಿಗೆ 62 ರನ್ ಸಿಡಿಸಿದರೆ, ಅಭಿಷೇಕ್ ಶರ್ಮಾ ಕೇವಲ 23 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್​ನೊಂದಿಗೆ 63 ರನ್ ಚಚ್ಚಿದರು. ಪರಿಣಾಮ ಪವರ್​ಪ್ಲೇನಲ್ಲಿ ಎಸ್​ಆರ್​ಹೆಚ್ ತಂಡವು 81 ರನ್ ಕಲೆಹಾಕಿತು.

2 / 7
ಅಲ್ಲದೆ 8 ಓವರ್​ ಮುಗಿಯುವ ಮುನ್ನವೇ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಕೋರ್ 100 ರ ಗಡಿದಾಟಿತು. ಇತ್ತ ಹೈದರಾಬಾದ್ ಬ್ಯಾಟರ್​ಗಳ ಅಬ್ಬರದಿಂದ ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಂಗೆಟ್ಟು ನಿಂತರು. ಇದರ ಬೆನ್ನಲ್ಲೇ ಕೋಚ್ ಕಡೆಯಿಂದ ಫೀಲ್ಡಿಂಗ್ ಸೆಟ್​ ಮಾಡುವಂತೆ ರೋಹಿತ್ ಶರ್ಮಾಗೆ ಸಂದೇಶ ಬಂದಿದೆ.

ಅಲ್ಲದೆ 8 ಓವರ್​ ಮುಗಿಯುವ ಮುನ್ನವೇ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಕೋರ್ 100 ರ ಗಡಿದಾಟಿತು. ಇತ್ತ ಹೈದರಾಬಾದ್ ಬ್ಯಾಟರ್​ಗಳ ಅಬ್ಬರದಿಂದ ಮುಂಬೈ ಇಂಡಿಯನ್ಸ್ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಂಗೆಟ್ಟು ನಿಂತರು. ಇದರ ಬೆನ್ನಲ್ಲೇ ಕೋಚ್ ಕಡೆಯಿಂದ ಫೀಲ್ಡಿಂಗ್ ಸೆಟ್​ ಮಾಡುವಂತೆ ರೋಹಿತ್ ಶರ್ಮಾಗೆ ಸಂದೇಶ ಬಂದಿದೆ.

3 / 7
ಹೀಗಾಗಿ ರೋಹಿತ್ ಶರ್ಮಾ ಫೀಲ್ಡಿಂಗ್​ನಲ್ಲಿ ಕೆಲ ಬದಲಾವಣೆ ಮಾಡಿದ್ದರು. ಅದರಲ್ಲೂ ಫ್ರಂಟ್ ಫೀಲ್ಡಿಂಗ್​ನಲ್ಲಿ ನಿಂತು ಮುಂಬೈ ಇಂಡಿಯನ್ಸ್ ತಂಡವನ್ನು ನಿಯಂತ್ರಿಸುತ್ತಿದ್ದ ಹಾರ್ದಿಕ್ ಪಾಂಡ್ಯರನ್ನು ಹಿಟ್​ಮ್ಯಾನ್ ಬೌಂಡರಿ ಲೈನ್​ನಲ್ಲಿ ಹೋಗಿ ನಿಲ್ಲುವಂತೆ ಸೂಚಿಸಿದರು.

ಹೀಗಾಗಿ ರೋಹಿತ್ ಶರ್ಮಾ ಫೀಲ್ಡಿಂಗ್​ನಲ್ಲಿ ಕೆಲ ಬದಲಾವಣೆ ಮಾಡಿದ್ದರು. ಅದರಲ್ಲೂ ಫ್ರಂಟ್ ಫೀಲ್ಡಿಂಗ್​ನಲ್ಲಿ ನಿಂತು ಮುಂಬೈ ಇಂಡಿಯನ್ಸ್ ತಂಡವನ್ನು ನಿಯಂತ್ರಿಸುತ್ತಿದ್ದ ಹಾರ್ದಿಕ್ ಪಾಂಡ್ಯರನ್ನು ಹಿಟ್​ಮ್ಯಾನ್ ಬೌಂಡರಿ ಲೈನ್​ನಲ್ಲಿ ಹೋಗಿ ನಿಲ್ಲುವಂತೆ ಸೂಚಿಸಿದರು.

4 / 7
ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ಬೌಂಡರಿ ಲೈನ್​ನಲ್ಲಿ ನಿಲ್ಲಿಸಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಪಂದ್ಯದ ನಡುವೆ ಸಿಕ್ಕ ಅವಕಾಶದಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನೇ ಬೌಂಡರಿ ಲೈನ್​ಗೆ ಕಳುಹಿಸಿದ್ದಾರೆ.

ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ಬೌಂಡರಿ ಲೈನ್​ನಲ್ಲಿ ನಿಲ್ಲಿಸಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಪಂದ್ಯದ ನಡುವೆ ಸಿಕ್ಕ ಅವಕಾಶದಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನೇ ಬೌಂಡರಿ ಲೈನ್​ಗೆ ಕಳುಹಿಸಿದ್ದಾರೆ.

5 / 7
ರೋಹಿತ್ ಶರ್ಮಾ ಬೌಂಡರಿ ಲೈನ್​​ಗೆ ಹೋಗು ಎಂದು ಹೇಳುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ತಬ್ಬಿಬ್ಬಾದಂತೆ ಕಂಡು ಬಂದರು. ಅಲ್ಲದೆ ಎಲ್ಲಿಗೆ ಹೋಗಬೇಕು ಎಂದು ಕೇಳಿದರು. ಈ ವೇಳೆ ಬೌಂಡರಿ ಲೈನ್​ನತ್ತ ಬೊಟ್ಟು ಮಾಡಿದ ರೋಹಿತ್ ಶರ್ಮಾ, ಅತ್ತ ಕಡೆ ಹೋಗಿ ನಿಲ್ಲು ಎಂದು ಸೂಚಿಸಿದರು. ಇದೀಗ ಹೊಸ ನಾಯಕನ ಮುಂದೆ ಹಳೆಯ ನಾಯಕನ ದರ್ಬಾರ್​ ಸಖತ್ ವೈರಲ್ ಆಗಿದ್ದು, ರೋಹಿತ್ ಶರ್ಮಾ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

ರೋಹಿತ್ ಶರ್ಮಾ ಬೌಂಡರಿ ಲೈನ್​​ಗೆ ಹೋಗು ಎಂದು ಹೇಳುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ತಬ್ಬಿಬ್ಬಾದಂತೆ ಕಂಡು ಬಂದರು. ಅಲ್ಲದೆ ಎಲ್ಲಿಗೆ ಹೋಗಬೇಕು ಎಂದು ಕೇಳಿದರು. ಈ ವೇಳೆ ಬೌಂಡರಿ ಲೈನ್​ನತ್ತ ಬೊಟ್ಟು ಮಾಡಿದ ರೋಹಿತ್ ಶರ್ಮಾ, ಅತ್ತ ಕಡೆ ಹೋಗಿ ನಿಲ್ಲು ಎಂದು ಸೂಚಿಸಿದರು. ಇದೀಗ ಹೊಸ ನಾಯಕನ ಮುಂದೆ ಹಳೆಯ ನಾಯಕನ ದರ್ಬಾರ್​ ಸಖತ್ ವೈರಲ್ ಆಗಿದ್ದು, ರೋಹಿತ್ ಶರ್ಮಾ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ನೀಡಿದ 278 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 31 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

ಇನ್ನು ಈ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ನೀಡಿದ 278 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 31 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

7 / 7
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ