AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಪಂಜಾಬ್ ಕಿಂಗ್ಸ್​ ನಾಯಕರಾಗ್ತಾರಾ ರೋಹಿತ್ ಶರ್ಮಾ?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಗಾಗಿ ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಬಹುತೇಕ ಪ್ಲೇಯರ್ಸ್ ಅನ್ನು ಬಿಡುಗಡೆ ಮಾಡಬೇಕಾಗುತ್ತದೆ. ಅಂದರೆ ಐಪಿಎಲ್ ಮೆಗಾ ಆಕ್ಷನ್ ನಿಯಮದ ಪ್ರಕಾರ ಕೇವಲ 4 ಆಟಗಾರರನ್ನು ಮಾತ್ರ ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ಇರಲಿದೆ.

TV9 Web
| Edited By: |

Updated on: Apr 20, 2024 | 12:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ಮುಕ್ತಾಯಕ್ಕೂ ಮುನ್ನವೇ ಐಪಿಎಲ್ ಮೆಗಾ ಹರಾಜು ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರೋಹಿತ್ ಶರ್ಮಾ (Rohit Sharma) ಪಂಜಾಬ್ ಕಿಂಗ್ಸ್ (Punjab Kings) ಪರ ಆಡಲಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಕೆಲ ದಿನಗಳ ಹಿಂದೆ ಹರಿದಾಡಿದ ಸುದ್ದಿಗಳು.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ಮುಕ್ತಾಯಕ್ಕೂ ಮುನ್ನವೇ ಐಪಿಎಲ್ ಮೆಗಾ ಹರಾಜು ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರೋಹಿತ್ ಶರ್ಮಾ (Rohit Sharma) ಪಂಜಾಬ್ ಕಿಂಗ್ಸ್ (Punjab Kings) ಪರ ಆಡಲಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಕೆಲ ದಿನಗಳ ಹಿಂದೆ ಹರಿದಾಡಿದ ಸುದ್ದಿಗಳು.

1 / 6
ಈ ಬಾರಿಯ ಐಪಿಎಲ್​ನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಕೇವಲ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಮುಂಬೈ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಿಟ್​ಮ್ಯಾನ್ ಅವರನ್ನು ಈ ಬಾರಿ ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅಲ್ಲದೆ ಅವರ ಬದಲಿಗೆ ಇದೀಗ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಕೇವಲ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಮುಂಬೈ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಿಟ್​ಮ್ಯಾನ್ ಅವರನ್ನು ಈ ಬಾರಿ ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅಲ್ಲದೆ ಅವರ ಬದಲಿಗೆ ಇದೀಗ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

2 / 6
ಹೀಗಾಗಿಯೇ ಮುಂದಿನ ವರ್ಷ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಆಡಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಸುದ್ದಿಗಳ ನಡುವೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಹಿಟ್​ಮ್ಯಾನ್ ಮುನ್ನಡೆಸಲಿದ್ದಾರೆ ಎಂಬ ಸುದ್ದಿಯೊಂದು ಸಖತ್ ವೈರಲ್ ಆಗಿದೆ.

ಹೀಗಾಗಿಯೇ ಮುಂದಿನ ವರ್ಷ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಆಡಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಸುದ್ದಿಗಳ ನಡುವೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಹಿಟ್​ಮ್ಯಾನ್ ಮುನ್ನಡೆಸಲಿದ್ದಾರೆ ಎಂಬ ಸುದ್ದಿಯೊಂದು ಸಖತ್ ವೈರಲ್ ಆಗಿದೆ.

3 / 6
ಹೀಗೆ ಸುದ್ದಿ ವೈರಲ್ ಆಗಲು ಮುಖ್ಯ ಕಾರಣ, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ಮಾಲಕಿ ಪ್ರೀತಿ ಝಿಂಟಾ ರೋಹಿತ್ ಶರ್ಮಾ ಜೊತೆ ಮಾತನಾಡಿದ್ದು. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಮುಂದಿನ ವರ್ಷ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಮಹತ್ವ ಪಡೆದುಕೊಂಡಿದೆ.

ಹೀಗೆ ಸುದ್ದಿ ವೈರಲ್ ಆಗಲು ಮುಖ್ಯ ಕಾರಣ, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ಮಾಲಕಿ ಪ್ರೀತಿ ಝಿಂಟಾ ರೋಹಿತ್ ಶರ್ಮಾ ಜೊತೆ ಮಾತನಾಡಿದ್ದು. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಮುಂದಿನ ವರ್ಷ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಮಹತ್ವ ಪಡೆದುಕೊಂಡಿದೆ.

4 / 6
ಇದೀಗ ಈ ವದಂತಿಗಳ ಬಗ್ಗೆ ಖುದ್ದು ಪ್ರೀತಿ ಝಿಂಟಾ ಪ್ರತಿಕ್ರಿಯಿಸಿದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಆಧಾರರಹಿತ, ಸುಳ್ಳು ಸುದ್ದಿಗಳು. ನಾನು ರೋಹಿತ್ ಶರ್ಮಾ ಅವರನ್ನು ಬಹಳ ಗೌರವದಿಂದ ಕಾಣುತ್ತೇನೆ. ಅವರ ದೊಡ್ಡ ಅಭಿಮಾನಿ ನಾನು. ಆದರೆ ಅವರ ಜೊತೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಬರುವ ಬಗ್ಗೆಯಾಗಲಿ ನಾನು ಚರ್ಚಿಸಿಲ್ಲ ಅಥವಾ ಅಂತಹ ಹೇಳಿಕೆಯನ್ನು ನೀಡಿಲ್ಲ. ಹೀಗಾಗಿ ಅಂತಹ ಸುದ್ದಿಗಳನ್ನು ನಂಬಬೇಡಿ ಎಂದು ಪ್ರೀತಿ ಝಿಂಟಾ ತಿಳಿಸಿದ್ದಾರೆ.

ಇದೀಗ ಈ ವದಂತಿಗಳ ಬಗ್ಗೆ ಖುದ್ದು ಪ್ರೀತಿ ಝಿಂಟಾ ಪ್ರತಿಕ್ರಿಯಿಸಿದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಆಧಾರರಹಿತ, ಸುಳ್ಳು ಸುದ್ದಿಗಳು. ನಾನು ರೋಹಿತ್ ಶರ್ಮಾ ಅವರನ್ನು ಬಹಳ ಗೌರವದಿಂದ ಕಾಣುತ್ತೇನೆ. ಅವರ ದೊಡ್ಡ ಅಭಿಮಾನಿ ನಾನು. ಆದರೆ ಅವರ ಜೊತೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಬರುವ ಬಗ್ಗೆಯಾಗಲಿ ನಾನು ಚರ್ಚಿಸಿಲ್ಲ ಅಥವಾ ಅಂತಹ ಹೇಳಿಕೆಯನ್ನು ನೀಡಿಲ್ಲ. ಹೀಗಾಗಿ ಅಂತಹ ಸುದ್ದಿಗಳನ್ನು ನಂಬಬೇಡಿ ಎಂದು ಪ್ರೀತಿ ಝಿಂಟಾ ತಿಳಿಸಿದ್ದಾರೆ.

5 / 6
ಇದಾಗ್ಯೂ ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿದರೆ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಹಿಟ್​ಮ್ಯಾನ್ ಖರೀದಿಗಾಗಿ ಒಂದಷ್ಟು ಫ್ರಾಂಚೈಸಿಗಳು ಪ್ರಯತ್ನಿಸುವುದಂತು ದಿಟ. ಹೀಗೆ ರೋಹಿತ್ ಶರ್ಮಾ ಖರೀದಿಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಕೂಡ ಪ್ರಯತ್ನ ನಡೆಸುವುದು ಖಚಿತ ಎಂದೇ ಎನ್ನಬಹುದು.

ಇದಾಗ್ಯೂ ಐಪಿಎಲ್ 2025 ಕ್ಕಾಗಿ ಮೆಗಾ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿದರೆ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಹಿಟ್​ಮ್ಯಾನ್ ಖರೀದಿಗಾಗಿ ಒಂದಷ್ಟು ಫ್ರಾಂಚೈಸಿಗಳು ಪ್ರಯತ್ನಿಸುವುದಂತು ದಿಟ. ಹೀಗೆ ರೋಹಿತ್ ಶರ್ಮಾ ಖರೀದಿಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಕೂಡ ಪ್ರಯತ್ನ ನಡೆಸುವುದು ಖಚಿತ ಎಂದೇ ಎನ್ನಬಹುದು.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ