AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 RR vs RCB: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭ?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) 17ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯವು ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದ ವೇಳೆ ಮಳೆ ಬರುವ ಸಾಧ್ಯತೆ ತುಂಬಾ ಕಡಿಮೆ. ಇದಾಗ್ಯೂ ಭಾರತಾದ್ಯಂತ ಮನ್ಸೂನ್ ಪ್ರವೇಶಿಸಿದ್ದು, ಹೀಗಾಗಿ ಆರ್​ಸಿಬಿ ಮತ್ತು ಆರ್​ಆರ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಎಂಬ ಪ್ರಶ್ನೆ ಮೂಡುವುದು ಸಹಜ.ಈ ಪ್ರಶ್ನೆಗೆ ಇಲ್ಲಿದೆ ಉತ್ತರ...

ಝಾಹಿರ್ ಯೂಸುಫ್
| Updated By: Digi Tech Desk|

Updated on:May 22, 2024 | 9:42 AM

Share
IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ (RR) ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಜರುಗಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.

IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ (RR) ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಜರುಗಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.

1 / 8
ಒಂದು ವೇಳೆ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡಚಣೆಯುಂಟು ಮಾಡಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಈಗಾಗಲೇ ಐಪಿಎಲ್​ನ 2 ಪಂದ್ಯಗಳು ಮಳೆಗೆ ಅಹುತಿಯಾಗಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬಂದರೆ...? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ...

ಒಂದು ವೇಳೆ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡಚಣೆಯುಂಟು ಮಾಡಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಈಗಾಗಲೇ ಐಪಿಎಲ್​ನ 2 ಪಂದ್ಯಗಳು ಮಳೆಗೆ ಅಹುತಿಯಾಗಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬಂದರೆ...? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ...

2 / 8
ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಅದರಂತೆ 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಅದರಂತೆ 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

3 / 8
ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ 8 ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ.

ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ 8 ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ.

4 / 8
ಇನ್ನು ಪ್ಲೇಆಫ್ ಪಂದ್ಯಗಳಿಗೆ ಹೆಚ್ಚುವರಿ 120 ನಿಮಿಷಗಳನ್ನು ನಿಗದಿ ಮಾಡಲಾಗಿದೆ. ಅಂದರೆ ಐಪಿಎಲ್​ ಪಂದ್ಯದ ನಿಗದಿತ ಸಮಯ 3 ಗಂಟೆ 15 ನಿಮಿಷಗಳು. ಒಂದು ವೇಳೆ ಮಳೆ ಬಂದು ಅಥವಾ ಇನ್ನಿತರ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಯನ್ನು ಬಳಸಲಾಗುತ್ತದೆ. ಅಂದರೆ ಎಲಿಮಿನೇಟರ್ ಪಂದ್ಯಕ್ಕೆ 7.30 ರಿಂದ 1 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

ಇನ್ನು ಪ್ಲೇಆಫ್ ಪಂದ್ಯಗಳಿಗೆ ಹೆಚ್ಚುವರಿ 120 ನಿಮಿಷಗಳನ್ನು ನಿಗದಿ ಮಾಡಲಾಗಿದೆ. ಅಂದರೆ ಐಪಿಎಲ್​ ಪಂದ್ಯದ ನಿಗದಿತ ಸಮಯ 3 ಗಂಟೆ 15 ನಿಮಿಷಗಳು. ಒಂದು ವೇಳೆ ಮಳೆ ಬಂದು ಅಥವಾ ಇನ್ನಿತರ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಯನ್ನು ಬಳಸಲಾಗುತ್ತದೆ. ಅಂದರೆ ಎಲಿಮಿನೇಟರ್ ಪಂದ್ಯಕ್ಕೆ 7.30 ರಿಂದ 1 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

5 / 8
ಇದಾಗ್ಯೂ ಪಂದ್ಯ ನಡೆಯದಿದ್ದರೆ ಅಥವಾ ಪೂರ್ಣಗೊಳ್ಳದಿದ್ದರೆ ಮ್ಯಾಚ್ ಅನ್ನು ಮೀಸಲು ದಿನದಾಟವನ್ನು ಬಳಸಲಾಗುತ್ತದೆ. ಮೀಸಲು ದಿನದಾಟದಲ್ಲೂ ಪಂದ್ಯ ನಡೆಸಲು ಸಾಧ್ಯವಿಲ್ಲ ಎಂದು ಕಂಡು ಬಂದರೆ ಸೂಪರ್ ಓವರ್​ ಆಡಿಸಲು ಮುಂದಾಗಲಿದ್ದಾರೆ.

ಇದಾಗ್ಯೂ ಪಂದ್ಯ ನಡೆಯದಿದ್ದರೆ ಅಥವಾ ಪೂರ್ಣಗೊಳ್ಳದಿದ್ದರೆ ಮ್ಯಾಚ್ ಅನ್ನು ಮೀಸಲು ದಿನದಾಟವನ್ನು ಬಳಸಲಾಗುತ್ತದೆ. ಮೀಸಲು ದಿನದಾಟದಲ್ಲೂ ಪಂದ್ಯ ನಡೆಸಲು ಸಾಧ್ಯವಿಲ್ಲ ಎಂದು ಕಂಡು ಬಂದರೆ ಸೂಪರ್ ಓವರ್​ ಆಡಿಸಲು ಮುಂದಾಗಲಿದ್ದಾರೆ.

6 / 8
ಇನ್ನು ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ಕೂಡ ನಡೆಯದಿದ್ದರೆ, ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್-4 ಸ್ಥಾನಗಳಲ್ಲಿ ಮೇಲಿರುವ ತಂಡವು ಮುಂದಿನ ಹಂತಕ್ಕೇರಲಿದೆ.

ಇನ್ನು ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ಕೂಡ ನಡೆಯದಿದ್ದರೆ, ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್-4 ಸ್ಥಾನಗಳಲ್ಲಿ ಮೇಲಿರುವ ತಂಡವು ಮುಂದಿನ ಹಂತಕ್ಕೇರಲಿದೆ.

7 / 8
ಅಂದರೆ ಎಲಿಮಿನೇಟರ್ ಪಂದ್ಯವು ರದ್ದಾದರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಏಕೆಂದರೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬಂದು ಮ್ಯಾಚ್ ಕ್ಯಾನ್ಸಲ್ ಆದರೆ ಅದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವರದಾನವಾಗಲಿದೆ.

ಅಂದರೆ ಎಲಿಮಿನೇಟರ್ ಪಂದ್ಯವು ರದ್ದಾದರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಏಕೆಂದರೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬಂದು ಮ್ಯಾಚ್ ಕ್ಯಾನ್ಸಲ್ ಆದರೆ ಅದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವರದಾನವಾಗಲಿದೆ.

8 / 8

Published On - 8:54 am, Wed, 22 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ