AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ಪರ ಹೊಸ ಇತಿಹಾಸ ಬರೆದ ರುತುರಾಜ್ ಗಾಯಕ್ವಾಡ್

IPL 2024: ಐಪಿಎಲ್​ 2024 ರಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಸಿಎಸ್​ಕೆ ನಾಯಕ ವಿಶೇಷ ದಾಖಲೆಯನ್ನು ಕೂಡ ಬರೆದರು.

TV9 Web
| Edited By: |

Updated on: Apr 24, 2024 | 6:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 39ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 39ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು.

1 / 5
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅರ್ಧಶತಕದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಬೆಂಡೆತ್ತಿದ ಸಿಎಸ್​ಕೆ ನಾಯಕ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್​ಗಳನ್ನು ಬಾರಿಸಿದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅರ್ಧಶತಕದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಬೆಂಡೆತ್ತಿದ ಸಿಎಸ್​ಕೆ ನಾಯಕ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್​ಗಳನ್ನು ಬಾರಿಸಿದರು.

2 / 5
ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ರುತುರಾಜ್ ಗಾಯಕ್ವಾಡ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ಪರ ಶತಕ ಸಿಡಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರುತುರಾಜ್ ತಮ್ಮದಾಗಿಸಿಕೊಂಡರು.

ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ರುತುರಾಜ್ ಗಾಯಕ್ವಾಡ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ಪರ ಶತಕ ಸಿಡಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರುತುರಾಜ್ ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 6 ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಆದರೆ ನಾಯಕನಾಗಿ ಕಣಕ್ಕಿಳಿದ ಯಾವುದೇ ಆಟಗಾರ ಸಿಎಸ್​ಕೆ ಪರ ಸೆಂಚುರಿ ಸಿಡಿಸಿರಲಿಲ್ಲ. ಅಲ್ಲದೆ ಧೋನಿ 84 ರನ್ ಗಳಿಸಿದ್ದು ಸಿಎಸ್​ಕೆ ನಾಯಕ​ನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ರುತುರಾಜ್ ಗಾಯಕ್ವಾಡ್ ನೀಗಿಸಿರುವುದು ವಿಶೇಷ.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 6 ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಆದರೆ ನಾಯಕನಾಗಿ ಕಣಕ್ಕಿಳಿದ ಯಾವುದೇ ಆಟಗಾರ ಸಿಎಸ್​ಕೆ ಪರ ಸೆಂಚುರಿ ಸಿಡಿಸಿರಲಿಲ್ಲ. ಅಲ್ಲದೆ ಧೋನಿ 84 ರನ್ ಗಳಿಸಿದ್ದು ಸಿಎಸ್​ಕೆ ನಾಯಕ​ನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ರುತುರಾಜ್ ಗಾಯಕ್ವಾಡ್ ನೀಗಿಸಿರುವುದು ವಿಶೇಷ.

4 / 5
ಇನ್ನು ನಾಯಕನ ಈ ಭರ್ಜರಿ ಸೆಂಚುರಿಯೊಂದಿಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಅಜೇಯ 124 ರನ್​ ಬಾರಿಸಿದರು. ಅಲ್ಲದೆ 19.3 ಓವರ್​ಗಳಲ್ಲಿ ಎಲ್​ಎಸ್​ಜಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

ಇನ್ನು ನಾಯಕನ ಈ ಭರ್ಜರಿ ಸೆಂಚುರಿಯೊಂದಿಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಅಜೇಯ 124 ರನ್​ ಬಾರಿಸಿದರು. ಅಲ್ಲದೆ 19.3 ಓವರ್​ಗಳಲ್ಲಿ ಎಲ್​ಎಸ್​ಜಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್