AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ಪರ ಹೊಸ ಇತಿಹಾಸ ಬರೆದ ರುತುರಾಜ್ ಗಾಯಕ್ವಾಡ್

IPL 2024: ಐಪಿಎಲ್​ 2024 ರಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಸಿಎಸ್​ಕೆ ನಾಯಕ ವಿಶೇಷ ದಾಖಲೆಯನ್ನು ಕೂಡ ಬರೆದರು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 24, 2024 | 6:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 39ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 39ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು.

1 / 5
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅರ್ಧಶತಕದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಬೆಂಡೆತ್ತಿದ ಸಿಎಸ್​ಕೆ ನಾಯಕ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್​ಗಳನ್ನು ಬಾರಿಸಿದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅರ್ಧಶತಕದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಬೆಂಡೆತ್ತಿದ ಸಿಎಸ್​ಕೆ ನಾಯಕ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್​ಗಳನ್ನು ಬಾರಿಸಿದರು.

2 / 5
ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ರುತುರಾಜ್ ಗಾಯಕ್ವಾಡ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ಪರ ಶತಕ ಸಿಡಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರುತುರಾಜ್ ತಮ್ಮದಾಗಿಸಿಕೊಂಡರು.

ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ರುತುರಾಜ್ ಗಾಯಕ್ವಾಡ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ಪರ ಶತಕ ಸಿಡಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರುತುರಾಜ್ ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 6 ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಆದರೆ ನಾಯಕನಾಗಿ ಕಣಕ್ಕಿಳಿದ ಯಾವುದೇ ಆಟಗಾರ ಸಿಎಸ್​ಕೆ ಪರ ಸೆಂಚುರಿ ಸಿಡಿಸಿರಲಿಲ್ಲ. ಅಲ್ಲದೆ ಧೋನಿ 84 ರನ್ ಗಳಿಸಿದ್ದು ಸಿಎಸ್​ಕೆ ನಾಯಕ​ನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ರುತುರಾಜ್ ಗಾಯಕ್ವಾಡ್ ನೀಗಿಸಿರುವುದು ವಿಶೇಷ.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 6 ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಆದರೆ ನಾಯಕನಾಗಿ ಕಣಕ್ಕಿಳಿದ ಯಾವುದೇ ಆಟಗಾರ ಸಿಎಸ್​ಕೆ ಪರ ಸೆಂಚುರಿ ಸಿಡಿಸಿರಲಿಲ್ಲ. ಅಲ್ಲದೆ ಧೋನಿ 84 ರನ್ ಗಳಿಸಿದ್ದು ಸಿಎಸ್​ಕೆ ನಾಯಕ​ನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ರುತುರಾಜ್ ಗಾಯಕ್ವಾಡ್ ನೀಗಿಸಿರುವುದು ವಿಶೇಷ.

4 / 5
ಇನ್ನು ನಾಯಕನ ಈ ಭರ್ಜರಿ ಸೆಂಚುರಿಯೊಂದಿಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಅಜೇಯ 124 ರನ್​ ಬಾರಿಸಿದರು. ಅಲ್ಲದೆ 19.3 ಓವರ್​ಗಳಲ್ಲಿ ಎಲ್​ಎಸ್​ಜಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

ಇನ್ನು ನಾಯಕನ ಈ ಭರ್ಜರಿ ಸೆಂಚುರಿಯೊಂದಿಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಅಜೇಯ 124 ರನ್​ ಬಾರಿಸಿದರು. ಅಲ್ಲದೆ 19.3 ಓವರ್​ಗಳಲ್ಲಿ ಎಲ್​ಎಸ್​ಜಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ