AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಂಜು ಸ್ಯಾಮ್ಸನ್​ಗೆ 30 ಲಕ್ಷ ರೂ. ದಂಡ..!

IPL 2024: ಐಪಿಎಲ್​ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಫೀಲ್ಡ್ ಅಂಪೈರ್​ಗಳ ವಾಗ್ವಾದ ನಡೆಸಿದ್ದರು. ಈ ಕಾರಣಕ್ಕಾಗಿ ಇದೀಗ ಸ್ಯಾಮ್ಸನ್ ಮೇಲೆ ಬಿಸಿಸಿಐ ಕ್ರಮ ಕೈಗೊಂಡಿದೆ.

TV9 Web
| Edited By: |

Updated on: May 08, 2024 | 10:51 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ (Sanju Samson) ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಅಂಪೈರ್ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ (Sanju Samson) ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಅಂಪೈರ್ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.

1 / 5
ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಈ ವೇಳೆ ಕ್ಯಾಚ್ ಹಿಡಿದ ಶಾಯ್ ಹೋಪ್ ಅವರ ಕಾಲು ಬೌಂಡರಿ ಲೈನ್​ಗೆ ತಗುಲಿದೆಯಾ ಎಂದು ಟಿವಿ ಅಂಪೈರ್ ಪರಿಶೀಲಿಸಿ ಔಟ್ ತೀರ್ಪು ನೀಡಿದ್ದರು.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಈ ವೇಳೆ ಕ್ಯಾಚ್ ಹಿಡಿದ ಶಾಯ್ ಹೋಪ್ ಅವರ ಕಾಲು ಬೌಂಡರಿ ಲೈನ್​ಗೆ ತಗುಲಿದೆಯಾ ಎಂದು ಟಿವಿ ಅಂಪೈರ್ ಪರಿಶೀಲಿಸಿ ಔಟ್ ತೀರ್ಪು ನೀಡಿದ್ದರು.

2 / 5
ಈ ತೀರ್ಪನ್ನು ಮರು ಪರಿಶೀಲಿಸುವಂತೆ ಸಂಜು ಸ್ಯಾಮ್ಸನ್ ಫೀಲ್ಡ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಅಲ್ಲದೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಇದೀಗ ಸಂಜು ಸ್ಯಾಮ್ಸನ್​ಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

ಈ ತೀರ್ಪನ್ನು ಮರು ಪರಿಶೀಲಿಸುವಂತೆ ಸಂಜು ಸ್ಯಾಮ್ಸನ್ ಫೀಲ್ಡ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಅಲ್ಲದೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಇದೀಗ ಸಂಜು ಸ್ಯಾಮ್ಸನ್​ಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

3 / 5
ಅದರಂತೆ ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಅಲ್ಲದೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಿಗೆ ಮ್ಯಾಚ್ ರೆಫರಿ ಎಚ್ಚರಿಕೆ ನೀಡಿದ್ದಾರೆ.

ಅದರಂತೆ ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಅಲ್ಲದೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಿಗೆ ಮ್ಯಾಚ್ ರೆಫರಿ ಎಚ್ಚರಿಕೆ ನೀಡಿದ್ದಾರೆ.

4 / 5
ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ (86) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದಾಗ್ಯೂ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್​ಗಳಲ್ಲಿ 201 ರನ್​ಗಳಿಗೆ ನಿಯಂತ್ರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್​ಗಳ ಜಯ ಸಾಧಿಸಿದೆ.

ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ (86) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದಾಗ್ಯೂ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್​ಗಳಲ್ಲಿ 201 ರನ್​ಗಳಿಗೆ ನಿಯಂತ್ರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್​ಗಳ ಜಯ ಸಾಧಿಸಿದೆ.

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ