AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಂಜು ಸ್ಯಾಮ್ಸನ್​ಗೆ 30 ಲಕ್ಷ ರೂ. ದಂಡ..!

IPL 2024: ಐಪಿಎಲ್​ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಫೀಲ್ಡ್ ಅಂಪೈರ್​ಗಳ ವಾಗ್ವಾದ ನಡೆಸಿದ್ದರು. ಈ ಕಾರಣಕ್ಕಾಗಿ ಇದೀಗ ಸ್ಯಾಮ್ಸನ್ ಮೇಲೆ ಬಿಸಿಸಿಐ ಕ್ರಮ ಕೈಗೊಂಡಿದೆ.

TV9 Web
| Edited By: |

Updated on: May 08, 2024 | 10:51 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ (Sanju Samson) ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಅಂಪೈರ್ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ (Sanju Samson) ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಅಂಪೈರ್ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.

1 / 5
ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಈ ವೇಳೆ ಕ್ಯಾಚ್ ಹಿಡಿದ ಶಾಯ್ ಹೋಪ್ ಅವರ ಕಾಲು ಬೌಂಡರಿ ಲೈನ್​ಗೆ ತಗುಲಿದೆಯಾ ಎಂದು ಟಿವಿ ಅಂಪೈರ್ ಪರಿಶೀಲಿಸಿ ಔಟ್ ತೀರ್ಪು ನೀಡಿದ್ದರು.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಈ ವೇಳೆ ಕ್ಯಾಚ್ ಹಿಡಿದ ಶಾಯ್ ಹೋಪ್ ಅವರ ಕಾಲು ಬೌಂಡರಿ ಲೈನ್​ಗೆ ತಗುಲಿದೆಯಾ ಎಂದು ಟಿವಿ ಅಂಪೈರ್ ಪರಿಶೀಲಿಸಿ ಔಟ್ ತೀರ್ಪು ನೀಡಿದ್ದರು.

2 / 5
ಈ ತೀರ್ಪನ್ನು ಮರು ಪರಿಶೀಲಿಸುವಂತೆ ಸಂಜು ಸ್ಯಾಮ್ಸನ್ ಫೀಲ್ಡ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಅಲ್ಲದೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಇದೀಗ ಸಂಜು ಸ್ಯಾಮ್ಸನ್​ಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

ಈ ತೀರ್ಪನ್ನು ಮರು ಪರಿಶೀಲಿಸುವಂತೆ ಸಂಜು ಸ್ಯಾಮ್ಸನ್ ಫೀಲ್ಡ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಅಲ್ಲದೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಇದೀಗ ಸಂಜು ಸ್ಯಾಮ್ಸನ್​ಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

3 / 5
ಅದರಂತೆ ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಅಲ್ಲದೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಿಗೆ ಮ್ಯಾಚ್ ರೆಫರಿ ಎಚ್ಚರಿಕೆ ನೀಡಿದ್ದಾರೆ.

ಅದರಂತೆ ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಅಲ್ಲದೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಿಗೆ ಮ್ಯಾಚ್ ರೆಫರಿ ಎಚ್ಚರಿಕೆ ನೀಡಿದ್ದಾರೆ.

4 / 5
ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ (86) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದಾಗ್ಯೂ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್​ಗಳಲ್ಲಿ 201 ರನ್​ಗಳಿಗೆ ನಿಯಂತ್ರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್​ಗಳ ಜಯ ಸಾಧಿಸಿದೆ.

ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ (86) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದಾಗ್ಯೂ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್​ಗಳಲ್ಲಿ 201 ರನ್​ಗಳಿಗೆ ನಿಯಂತ್ರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್​ಗಳ ಜಯ ಸಾಧಿಸಿದೆ.

5 / 5
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!