AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕ್ಯಾಪ್ಟನ್​ ಗಿಲ್​ಗೆ 12 ಲಕ್ಷ ರೂ. ದಂಡ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್​ಗಳಿಂದ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಇದೀಗ ಗುಜರಾತ್ ತಂಡದ ನಾಯಕ ಶುಭ್​ಮನ್ ಗಿಲ್ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಈ ಮೂಲಕ ಈ ಬಾರಿ ಐಪಿಎಲ್​ನಲ್ಲಿ ಸ್ಲೋ ಓವರ್​ ರೇಟ್ ಶಿಕ್ದೆಗೆ ಗುರಿಯಾದ ಮೊದಲ ನಾಯಕ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Mar 27, 2024 | 11:57 AM

Share
IPL 2024 : ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ (Shubman Gill) ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.

IPL 2024 : ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ (Shubman Gill) ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.

1 / 5
ಅದರಂತೆ ಶುಭ್​ಮನ್ ಗಿಲ್ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

ಅದರಂತೆ ಶುಭ್​ಮನ್ ಗಿಲ್ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

2 / 5
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

3 / 5
ಇನ್ನು ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

4 / 5
ಇದೀಗ ನಾಯಕನಾಗಿ ತಮ್ಮ 2ನೇ ಪಂದ್ಯದಲ್ಲೇ ಶುಭ್​ಮನ್ ಗಿಲ್ ಸ್ಲೋ ಓವರ್​ ರೇಟ್​ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆವಹಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಈ ತಪ್ಪು ಇನ್ನೆರಡು ಬಾರಿ ಪುನರಾವರ್ತನೆಯಾದರೆ ಗಿಲ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

ಇದೀಗ ನಾಯಕನಾಗಿ ತಮ್ಮ 2ನೇ ಪಂದ್ಯದಲ್ಲೇ ಶುಭ್​ಮನ್ ಗಿಲ್ ಸ್ಲೋ ಓವರ್​ ರೇಟ್​ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆವಹಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಈ ತಪ್ಪು ಇನ್ನೆರಡು ಬಾರಿ ಪುನರಾವರ್ತನೆಯಾದರೆ ಗಿಲ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

5 / 5
Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!