AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕ್ಯಾಪ್ಟನ್​ ಗಿಲ್​ಗೆ 12 ಲಕ್ಷ ರೂ. ದಂಡ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್​ಗಳಿಂದ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಇದೀಗ ಗುಜರಾತ್ ತಂಡದ ನಾಯಕ ಶುಭ್​ಮನ್ ಗಿಲ್ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಈ ಮೂಲಕ ಈ ಬಾರಿ ಐಪಿಎಲ್​ನಲ್ಲಿ ಸ್ಲೋ ಓವರ್​ ರೇಟ್ ಶಿಕ್ದೆಗೆ ಗುರಿಯಾದ ಮೊದಲ ನಾಯಕ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Mar 27, 2024 | 11:57 AM

Share
IPL 2024 : ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ (Shubman Gill) ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.

IPL 2024 : ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ (Shubman Gill) ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.

1 / 5
ಅದರಂತೆ ಶುಭ್​ಮನ್ ಗಿಲ್ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

ಅದರಂತೆ ಶುಭ್​ಮನ್ ಗಿಲ್ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

2 / 5
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

3 / 5
ಇನ್ನು ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

4 / 5
ಇದೀಗ ನಾಯಕನಾಗಿ ತಮ್ಮ 2ನೇ ಪಂದ್ಯದಲ್ಲೇ ಶುಭ್​ಮನ್ ಗಿಲ್ ಸ್ಲೋ ಓವರ್​ ರೇಟ್​ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆವಹಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಈ ತಪ್ಪು ಇನ್ನೆರಡು ಬಾರಿ ಪುನರಾವರ್ತನೆಯಾದರೆ ಗಿಲ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

ಇದೀಗ ನಾಯಕನಾಗಿ ತಮ್ಮ 2ನೇ ಪಂದ್ಯದಲ್ಲೇ ಶುಭ್​ಮನ್ ಗಿಲ್ ಸ್ಲೋ ಓವರ್​ ರೇಟ್​ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆವಹಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಈ ತಪ್ಪು ಇನ್ನೆರಡು ಬಾರಿ ಪುನರಾವರ್ತನೆಯಾದರೆ ಗಿಲ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು