AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೈದರಾಬಾದ್​ನಲ್ಲಿ ಭಾರೀ ಮಳೆ: SRH-LSG ತಂಡಗಳಿಗೆ ಹೊಸ ಚಿಂತೆ ಶುರು

IPL 2024 SRH vs LSG: ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗುತ್ತದೆ. ಇದರಿಂದ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಹಿಂದೆ ಉಳಿಯಬಹುದು.

TV9 Web
| Edited By: |

Updated on: May 07, 2024 | 9:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 57ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡಿಯನ್ನುಂಟು ಮಾಡುವ ಸಾಧ್ಯತೆಯಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 57ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡಿಯನ್ನುಂಟು ಮಾಡುವ ಸಾಧ್ಯತೆಯಿದೆ.

1 / 6
ಏಕೆಂದರೆ ಮಂಗಳವಾರ ಸಂಜೆಯಿಂದ ಹೈದರಾಬಾದ್​ನಾದ್ಯಂತ ಭಾರೀ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ರಾಜೀವ್ ಗಾಂಧಿ ಮೈದಾನದಲ್ಲಿ ನೀರು ನಿಂತಿದೆ. ಈ ಮಳೆಯು ರಾತ್ರಿವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಕೆಂದರೆ ಮಂಗಳವಾರ ಸಂಜೆಯಿಂದ ಹೈದರಾಬಾದ್​ನಾದ್ಯಂತ ಭಾರೀ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ರಾಜೀವ್ ಗಾಂಧಿ ಮೈದಾನದಲ್ಲಿ ನೀರು ನಿಂತಿದೆ. ಈ ಮಳೆಯು ರಾತ್ರಿವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

2 / 6
ಹಾಗೆಯೇ ನಾಳೆ ಸಂಜೆಯಿಂದ ಮತ್ತೆ ಮಳೆಯಾಗಲಿದ್ದು, ರಾತ್ರಿ ವೇಳೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ವರುಣ ಅವಕೃಪೆ ತೋರುವ ಸಾಧ್ಯತೆ ಹೆಚ್ಚಿದೆ.

ಹಾಗೆಯೇ ನಾಳೆ ಸಂಜೆಯಿಂದ ಮತ್ತೆ ಮಳೆಯಾಗಲಿದ್ದು, ರಾತ್ರಿ ವೇಳೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ವರುಣ ಅವಕೃಪೆ ತೋರುವ ಸಾಧ್ಯತೆ ಹೆಚ್ಚಿದೆ.

3 / 6
ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ತುಂಬಾ ಮಹತ್ವದ್ದು. ಏಕೆಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿರುವ ಎಸ್​ಆರ್​ಹೆಚ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಮುಂದಿನ ಮೂರು ಪಂದ್ಯಗಳಲ್ಲೂ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ.

ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ತುಂಬಾ ಮಹತ್ವದ್ದು. ಏಕೆಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿರುವ ಎಸ್​ಆರ್​ಹೆಚ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಮುಂದಿನ ಮೂರು ಪಂದ್ಯಗಳಲ್ಲೂ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ.

4 / 6
ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮಲೇಬೇಕು. ಅತ್ತ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಕೂಡ ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ ಮಾತ್ರ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮಲೇಬೇಕು. ಅತ್ತ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಕೂಡ ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ ಮಾತ್ರ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

5 / 6
ಅಂದರೆ ಪ್ಲೇಆಫ್​ ರೇಸ್​ನಲ್ಲಿ ಮುಂದಿನ ಹಂತಕ್ಕೆ ಹೋಗಲು ಉಭಯ ತಂಡಗಳಿಗೂ ನಾಳಿನ (ಮೇ 8) ಪಂದ್ಯದಲ್ಲಿ ಗೆಲ್ಲಲೇಬೇಕು. ಇದರ ನಡುವೆ ಹೈದರಾಬಾದ್​ನಾದ್ಯಂತ ಭಾರೀ ಮಳೆಯಾಗುತ್ತಿರುವುದು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಚಿಂತೆಯನ್ನು ಹೆಚ್ಚಿಸಿದೆ.

ಅಂದರೆ ಪ್ಲೇಆಫ್​ ರೇಸ್​ನಲ್ಲಿ ಮುಂದಿನ ಹಂತಕ್ಕೆ ಹೋಗಲು ಉಭಯ ತಂಡಗಳಿಗೂ ನಾಳಿನ (ಮೇ 8) ಪಂದ್ಯದಲ್ಲಿ ಗೆಲ್ಲಲೇಬೇಕು. ಇದರ ನಡುವೆ ಹೈದರಾಬಾದ್​ನಾದ್ಯಂತ ಭಾರೀ ಮಳೆಯಾಗುತ್ತಿರುವುದು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಚಿಂತೆಯನ್ನು ಹೆಚ್ಚಿಸಿದೆ.

6 / 6
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ