AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 549 ರನ್ಸ್​, 81 ಬೌಂಡರಿ: SRH vs RCB ಮತ್ತೆ ಮುಖಾಮುಖಿ

IPL 2024: ಐಪಿಎಲ್ 2024ರ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಳಿಗೆ ನಿರ್ಣಾಯಕ. ಏಕೆಂಧರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 24, 2024 | 10:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

1 / 5
ವಿಶೇಷ ಎಂದರೆ ಮೊದಲಾರ್ಧದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 287 ರನ್​ ಬಾರಿಸುವ ಮೂಲಕ ಎಸ್​ಆರ್​ಹೆಚ್ ಹೊಸ ಇತಿಹಾಸ ಬರೆದಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಬ್ಯಾಟರ್​ಗಳು ಕೂಡ 262 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿದೆ.

ವಿಶೇಷ ಎಂದರೆ ಮೊದಲಾರ್ಧದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 287 ರನ್​ ಬಾರಿಸುವ ಮೂಲಕ ಎಸ್​ಆರ್​ಹೆಚ್ ಹೊಸ ಇತಿಹಾಸ ಬರೆದಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಬ್ಯಾಟರ್​ಗಳು ಕೂಡ 262 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿದೆ.

2 / 5
ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಸೇರಿ ಒಟ್ಟು 549 ರನ್ ಕಲೆಹಾಕಿರುವ ಕಾರಣ ಈ ಪಂದ್ಯದಲ್ಲೂ ರನ್ ಮಳೆಯನ್ನು ನಿರೀಕ್ಷಿಸಬಹುದು. ಅದರಲ್ಲೂ ಆರ್​ಸಿಬಿ ವಿರುದ್ಧ ಎಸ್​ಆರ್​ಹೆಚ್ ಕಳೆದ ಮ್ಯಾಚ್​ನಲ್ಲಿ ಬರೋಬ್ಬರಿ 22 ಸಿಕ್ಸ್​ಗಳನ್ನು ಸಿಡಿಸಿದ್ದರು ಎಂಬುದು ವಿಶೇಷ. ಅಲ್ಲದೆ ಈ ಪಂದ್ಯದಲ್ಲಿ ಒಟ್ಟು 81 ಬೌಂಡರಿಗಳು ಮೂಡಿಬಂದಿದ್ದವು.

ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಸೇರಿ ಒಟ್ಟು 549 ರನ್ ಕಲೆಹಾಕಿರುವ ಕಾರಣ ಈ ಪಂದ್ಯದಲ್ಲೂ ರನ್ ಮಳೆಯನ್ನು ನಿರೀಕ್ಷಿಸಬಹುದು. ಅದರಲ್ಲೂ ಆರ್​ಸಿಬಿ ವಿರುದ್ಧ ಎಸ್​ಆರ್​ಹೆಚ್ ಕಳೆದ ಮ್ಯಾಚ್​ನಲ್ಲಿ ಬರೋಬ್ಬರಿ 22 ಸಿಕ್ಸ್​ಗಳನ್ನು ಸಿಡಿಸಿದ್ದರು ಎಂಬುದು ವಿಶೇಷ. ಅಲ್ಲದೆ ಈ ಪಂದ್ಯದಲ್ಲಿ ಒಟ್ಟು 81 ಬೌಂಡರಿಗಳು ಮೂಡಿಬಂದಿದ್ದವು.

3 / 5
ಇದೀಗ ಬ್ಯಾಟರ್​ಗಳ ಸ್ವರ್ಗ ಎನಿಸಿಕೊಂಡಿರುವ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯದಲ್ಲೂ ಸಿಕ್ಸ್​-ಫೋರ್​ಗಳ ಸುರಿಮಳೆಯನ್ನು ನಿರೀಕ್ಷಿಸಬಹುದು.

ಇದೀಗ ಬ್ಯಾಟರ್​ಗಳ ಸ್ವರ್ಗ ಎನಿಸಿಕೊಂಡಿರುವ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯದಲ್ಲೂ ಸಿಕ್ಸ್​-ಫೋರ್​ಗಳ ಸುರಿಮಳೆಯನ್ನು ನಿರೀಕ್ಷಿಸಬಹುದು.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇದುವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಎಸ್​ಆರ್​ಹೆಚ್ ತಂಡವು 13 ಬಾರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ಗೆದ್ದಿರುವುದು ಕೇವಲ 10 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಮೇಲ್ನೋಟಕ್ಕೆ ಎಸ್​ಆರ್​ಹೆಚ್ ತಂಡ ಬಲಿಷ್ಠವಾಗಿ ಕಂಡು ಬಂದರೂ, ಕಳೆದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಪೈಪೋಟಿ ನೀಡಿತ್ತು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇದುವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಎಸ್​ಆರ್​ಹೆಚ್ ತಂಡವು 13 ಬಾರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ಗೆದ್ದಿರುವುದು ಕೇವಲ 10 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಮೇಲ್ನೋಟಕ್ಕೆ ಎಸ್​ಆರ್​ಹೆಚ್ ತಂಡ ಬಲಿಷ್ಠವಾಗಿ ಕಂಡು ಬಂದರೂ, ಕಳೆದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಪೈಪೋಟಿ ನೀಡಿತ್ತು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್