AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಂಗಲ್, ಸಿಂಗಲ್, ಸಿಂಗಲ್: ಕೊಹ್ಲಿ ಸ್ವಲ್ಪ ಧೈರ್ಯ ಮಾಡಿ ಹೊಡಿ: ಸುನಿಲ್ ಗವಾಸ್ಕರ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 206 ರನ್​ಗಳ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 171 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ 35 ರನ್​ಗಳ ಜಯ ಸಾಧಿಸಿದೆ.

TV9 Web
| Edited By: |

Updated on: Apr 27, 2024 | 10:22 AM

Share
ಐಪಿಎಲ್​ನ (IPL 2024) 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ವಿರಾಟ್ ಕೊಹ್ಲಿ (Virat Kohli) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 43 ಎಸೆತಗಳನ್ನು ಎದುರಿಸಿದ ಕೊಹ್ಲಿ 51 ರನ್ ಬಾರಿಸಿದ್ದರು. ಈ ನಿಧಾನಗತಿಯ ಹಾಫ್ ಸೆಂಚುರಿಯಿಂದಾಗಿ ಕೊಹ್ಲಿ ಭಾರೀ ಟೀಕೆಗೆ ಗುರಿಯಾಗಿದ್ದರು.

ಐಪಿಎಲ್​ನ (IPL 2024) 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ವಿರಾಟ್ ಕೊಹ್ಲಿ (Virat Kohli) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 43 ಎಸೆತಗಳನ್ನು ಎದುರಿಸಿದ ಕೊಹ್ಲಿ 51 ರನ್ ಬಾರಿಸಿದ್ದರು. ಈ ನಿಧಾನಗತಿಯ ಹಾಫ್ ಸೆಂಚುರಿಯಿಂದಾಗಿ ಕೊಹ್ಲಿ ಭಾರೀ ಟೀಕೆಗೆ ಗುರಿಯಾಗಿದ್ದರು.

1 / 5
ಇದೀಗ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ನಲ್ಲಿ ಬರೀ ಸಿಂಗಲ್​ಗಳೇ ಕಾಣಿಸಿದ್ದವು. ಸಿಂಗಲ್, ಸಿಂಗಲ್, ಸಿಂಗಲ್... ಹೀಗೆ ಒಂದೊಂದು ರನ್​ ಕಲೆಹಾಕುತ್ತಾ ಇನಿಂಗ್ಸ್ ಕಟ್ಟಬೇಕಾದ ಅವಶ್ಯಕತೆ ಇರಲಿಲ್ಲ. ಇದಾಗ್ಯೂ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಅಚ್ಚರಿ ಮೂಡಿಸಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಇದೀಗ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ನಲ್ಲಿ ಬರೀ ಸಿಂಗಲ್​ಗಳೇ ಕಾಣಿಸಿದ್ದವು. ಸಿಂಗಲ್, ಸಿಂಗಲ್, ಸಿಂಗಲ್... ಹೀಗೆ ಒಂದೊಂದು ರನ್​ ಕಲೆಹಾಕುತ್ತಾ ಇನಿಂಗ್ಸ್ ಕಟ್ಟಬೇಕಾದ ಅವಶ್ಯಕತೆ ಇರಲಿಲ್ಲ. ಇದಾಗ್ಯೂ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಅಚ್ಚರಿ ಮೂಡಿಸಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

2 / 5
ಮಹಿಪಾಲ್ ಲೋಮ್ರರ್, ದಿನೇಶ್ ಕಾರ್ತಿಕ್ ಅವರಂತಹ ಬಿಗ್ ಹಿಟ್ಟರ್​ಗಳು ಬ್ಯಾಟಿಂಗ್​ಗೆ​ ಬರಬೇಕಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಬಹುದಿತ್ತು. ಕೊಹ್ಲಿ ಸ್ವಲ್ಪ ರಿಸ್ಕ್​ ತೆಗೆದುಕೊಂಡು ಧೈರ್ಯದಿಂದ ಆಡಬೇಕು ಎಂದು ಸುನಿಲ್ ಗವಾಸ್ಕರ್ ಕಿವಿಮಾತು ಹೇಳಿದ್ದಾರೆ.

ಮಹಿಪಾಲ್ ಲೋಮ್ರರ್, ದಿನೇಶ್ ಕಾರ್ತಿಕ್ ಅವರಂತಹ ಬಿಗ್ ಹಿಟ್ಟರ್​ಗಳು ಬ್ಯಾಟಿಂಗ್​ಗೆ​ ಬರಬೇಕಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಬಹುದಿತ್ತು. ಕೊಹ್ಲಿ ಸ್ವಲ್ಪ ರಿಸ್ಕ್​ ತೆಗೆದುಕೊಂಡು ಧೈರ್ಯದಿಂದ ಆಡಬೇಕು ಎಂದು ಸುನಿಲ್ ಗವಾಸ್ಕರ್ ಕಿವಿಮಾತು ಹೇಳಿದ್ದಾರೆ.

3 / 5
ನೀವೇ ನೋಡಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು 37 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೇ ವೇಳೆ ರಜತ್ ಪಾಟಿದಾರ್ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಬ್ಯಾಟರ್​ಗಳು ರಿಸ್ಕ್​ ತೆಗೆದುಕೊಳ್ಳದ ಹೊರತು ಆಕ್ರಮಕಾರಿ ಆಟ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ. ಈ ಮೂಲಕ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ನೀವೇ ನೋಡಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು 37 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೇ ವೇಳೆ ರಜತ್ ಪಾಟಿದಾರ್ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಬ್ಯಾಟರ್​ಗಳು ರಿಸ್ಕ್​ ತೆಗೆದುಕೊಳ್ಳದ ಹೊರತು ಆಕ್ರಮಕಾರಿ ಆಟ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ. ಈ ಮೂಲಕ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮೊದಲ 18 ಎಸೆತಗಳಲ್ಲಿ 32 ರನ್ ಬಾರಿಸಿ ಅಬ್ಬರಿಸಿದ್ದರು. ಆದರೆ ಪವರ್​ಪ್ಲೇ ಮುಕ್ತಾಯವಾಗುತ್ತಿದ್ದಂತೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮುಂದಿನ 25 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 19 ರನ್​ಗಳು ಮಾತ್ರ. ಹೀಗಾಗಿಯೇ ಆರ್​ಸಿಬಿ ಬೃಹತ್ ಮೊತ್ತ ಪೇರಿಸಬೇಕಿದ್ದರೆ ಕೊಹ್ಲಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಬೇಕೆಂದು ಸುನಿಲ್ ಗವಾಸ್ಕರ್ ಒತ್ತಿ ಹೇಳಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮೊದಲ 18 ಎಸೆತಗಳಲ್ಲಿ 32 ರನ್ ಬಾರಿಸಿ ಅಬ್ಬರಿಸಿದ್ದರು. ಆದರೆ ಪವರ್​ಪ್ಲೇ ಮುಕ್ತಾಯವಾಗುತ್ತಿದ್ದಂತೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮುಂದಿನ 25 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 19 ರನ್​ಗಳು ಮಾತ್ರ. ಹೀಗಾಗಿಯೇ ಆರ್​ಸಿಬಿ ಬೃಹತ್ ಮೊತ್ತ ಪೇರಿಸಬೇಕಿದ್ದರೆ ಕೊಹ್ಲಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಬೇಕೆಂದು ಸುನಿಲ್ ಗವಾಸ್ಕರ್ ಒತ್ತಿ ಹೇಳಿದ್ದಾರೆ.

5 / 5
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ