AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಂಗಲ್, ಸಿಂಗಲ್, ಸಿಂಗಲ್: ಕೊಹ್ಲಿ ಸ್ವಲ್ಪ ಧೈರ್ಯ ಮಾಡಿ ಹೊಡಿ: ಸುನಿಲ್ ಗವಾಸ್ಕರ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 206 ರನ್​ಗಳ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 171 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ 35 ರನ್​ಗಳ ಜಯ ಸಾಧಿಸಿದೆ.

TV9 Web
| Edited By: |

Updated on: Apr 27, 2024 | 10:22 AM

Share
ಐಪಿಎಲ್​ನ (IPL 2024) 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ವಿರಾಟ್ ಕೊಹ್ಲಿ (Virat Kohli) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 43 ಎಸೆತಗಳನ್ನು ಎದುರಿಸಿದ ಕೊಹ್ಲಿ 51 ರನ್ ಬಾರಿಸಿದ್ದರು. ಈ ನಿಧಾನಗತಿಯ ಹಾಫ್ ಸೆಂಚುರಿಯಿಂದಾಗಿ ಕೊಹ್ಲಿ ಭಾರೀ ಟೀಕೆಗೆ ಗುರಿಯಾಗಿದ್ದರು.

ಐಪಿಎಲ್​ನ (IPL 2024) 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ವಿರಾಟ್ ಕೊಹ್ಲಿ (Virat Kohli) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 43 ಎಸೆತಗಳನ್ನು ಎದುರಿಸಿದ ಕೊಹ್ಲಿ 51 ರನ್ ಬಾರಿಸಿದ್ದರು. ಈ ನಿಧಾನಗತಿಯ ಹಾಫ್ ಸೆಂಚುರಿಯಿಂದಾಗಿ ಕೊಹ್ಲಿ ಭಾರೀ ಟೀಕೆಗೆ ಗುರಿಯಾಗಿದ್ದರು.

1 / 5
ಇದೀಗ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ನಲ್ಲಿ ಬರೀ ಸಿಂಗಲ್​ಗಳೇ ಕಾಣಿಸಿದ್ದವು. ಸಿಂಗಲ್, ಸಿಂಗಲ್, ಸಿಂಗಲ್... ಹೀಗೆ ಒಂದೊಂದು ರನ್​ ಕಲೆಹಾಕುತ್ತಾ ಇನಿಂಗ್ಸ್ ಕಟ್ಟಬೇಕಾದ ಅವಶ್ಯಕತೆ ಇರಲಿಲ್ಲ. ಇದಾಗ್ಯೂ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಅಚ್ಚರಿ ಮೂಡಿಸಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಇದೀಗ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ನಲ್ಲಿ ಬರೀ ಸಿಂಗಲ್​ಗಳೇ ಕಾಣಿಸಿದ್ದವು. ಸಿಂಗಲ್, ಸಿಂಗಲ್, ಸಿಂಗಲ್... ಹೀಗೆ ಒಂದೊಂದು ರನ್​ ಕಲೆಹಾಕುತ್ತಾ ಇನಿಂಗ್ಸ್ ಕಟ್ಟಬೇಕಾದ ಅವಶ್ಯಕತೆ ಇರಲಿಲ್ಲ. ಇದಾಗ್ಯೂ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಅಚ್ಚರಿ ಮೂಡಿಸಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

2 / 5
ಮಹಿಪಾಲ್ ಲೋಮ್ರರ್, ದಿನೇಶ್ ಕಾರ್ತಿಕ್ ಅವರಂತಹ ಬಿಗ್ ಹಿಟ್ಟರ್​ಗಳು ಬ್ಯಾಟಿಂಗ್​ಗೆ​ ಬರಬೇಕಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಬಹುದಿತ್ತು. ಕೊಹ್ಲಿ ಸ್ವಲ್ಪ ರಿಸ್ಕ್​ ತೆಗೆದುಕೊಂಡು ಧೈರ್ಯದಿಂದ ಆಡಬೇಕು ಎಂದು ಸುನಿಲ್ ಗವಾಸ್ಕರ್ ಕಿವಿಮಾತು ಹೇಳಿದ್ದಾರೆ.

ಮಹಿಪಾಲ್ ಲೋಮ್ರರ್, ದಿನೇಶ್ ಕಾರ್ತಿಕ್ ಅವರಂತಹ ಬಿಗ್ ಹಿಟ್ಟರ್​ಗಳು ಬ್ಯಾಟಿಂಗ್​ಗೆ​ ಬರಬೇಕಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಬಹುದಿತ್ತು. ಕೊಹ್ಲಿ ಸ್ವಲ್ಪ ರಿಸ್ಕ್​ ತೆಗೆದುಕೊಂಡು ಧೈರ್ಯದಿಂದ ಆಡಬೇಕು ಎಂದು ಸುನಿಲ್ ಗವಾಸ್ಕರ್ ಕಿವಿಮಾತು ಹೇಳಿದ್ದಾರೆ.

3 / 5
ನೀವೇ ನೋಡಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು 37 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೇ ವೇಳೆ ರಜತ್ ಪಾಟಿದಾರ್ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಬ್ಯಾಟರ್​ಗಳು ರಿಸ್ಕ್​ ತೆಗೆದುಕೊಳ್ಳದ ಹೊರತು ಆಕ್ರಮಕಾರಿ ಆಟ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ. ಈ ಮೂಲಕ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ನೀವೇ ನೋಡಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು 37 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೇ ವೇಳೆ ರಜತ್ ಪಾಟಿದಾರ್ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಬ್ಯಾಟರ್​ಗಳು ರಿಸ್ಕ್​ ತೆಗೆದುಕೊಳ್ಳದ ಹೊರತು ಆಕ್ರಮಕಾರಿ ಆಟ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ. ಈ ಮೂಲಕ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮೊದಲ 18 ಎಸೆತಗಳಲ್ಲಿ 32 ರನ್ ಬಾರಿಸಿ ಅಬ್ಬರಿಸಿದ್ದರು. ಆದರೆ ಪವರ್​ಪ್ಲೇ ಮುಕ್ತಾಯವಾಗುತ್ತಿದ್ದಂತೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮುಂದಿನ 25 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 19 ರನ್​ಗಳು ಮಾತ್ರ. ಹೀಗಾಗಿಯೇ ಆರ್​ಸಿಬಿ ಬೃಹತ್ ಮೊತ್ತ ಪೇರಿಸಬೇಕಿದ್ದರೆ ಕೊಹ್ಲಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಬೇಕೆಂದು ಸುನಿಲ್ ಗವಾಸ್ಕರ್ ಒತ್ತಿ ಹೇಳಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮೊದಲ 18 ಎಸೆತಗಳಲ್ಲಿ 32 ರನ್ ಬಾರಿಸಿ ಅಬ್ಬರಿಸಿದ್ದರು. ಆದರೆ ಪವರ್​ಪ್ಲೇ ಮುಕ್ತಾಯವಾಗುತ್ತಿದ್ದಂತೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮುಂದಿನ 25 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 19 ರನ್​ಗಳು ಮಾತ್ರ. ಹೀಗಾಗಿಯೇ ಆರ್​ಸಿಬಿ ಬೃಹತ್ ಮೊತ್ತ ಪೇರಿಸಬೇಕಿದ್ದರೆ ಕೊಹ್ಲಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಬೇಕೆಂದು ಸುನಿಲ್ ಗವಾಸ್ಕರ್ ಒತ್ತಿ ಹೇಳಿದ್ದಾರೆ.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ