AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೂರ್ಯಕುಮಾರ್ ಸಿಕ್ಸರ್ ದಾಖಲೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 43ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 257 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 247 ರನ್​ಗಳಿಸಿ 10 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

TV9 Web
| Edited By: |

Updated on: Apr 28, 2024 | 12:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 43ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) 2 ಭರ್ಜರಿ ಸಿಕ್ಸ್ ಸಿಡಿಸಿ ಮಿಂಚಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯ 13 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ 26 ರನ್ ಬಾರಿಸಿ ಔಟಾಗಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 43ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) 2 ಭರ್ಜರಿ ಸಿಕ್ಸ್ ಸಿಡಿಸಿ ಮಿಂಚಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯ 13 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ 26 ರನ್ ಬಾರಿಸಿ ಔಟಾಗಿದ್ದರು.

1 / 5
ಈ ಎರಡು ಸಿಕ್ಸ್​ಗಳೊಂದಿಗೆ ಮುಂಬೈ ಇಂಡಿಯನ್ಸ್ ಪರ 100 ಸಿಕ್ಸ್​ಗಳನ್ನು ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಸೂರ್ಯಕುಮಾರ್ ಯಾದವ್ ಸೇರ್ಪಡೆಯಾದರು. ಅಲ್ಲದೆ ಈ ಸಾಧನೆ ಮಾಡಿದ ಮುಂಬೈ ತಂಡದ 5ನೇ ಬ್ಯಾಟರ್ ಎನಿಸಿಕೊಂಡರು.

ಈ ಎರಡು ಸಿಕ್ಸ್​ಗಳೊಂದಿಗೆ ಮುಂಬೈ ಇಂಡಿಯನ್ಸ್ ಪರ 100 ಸಿಕ್ಸ್​ಗಳನ್ನು ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಸೂರ್ಯಕುಮಾರ್ ಯಾದವ್ ಸೇರ್ಪಡೆಯಾದರು. ಅಲ್ಲದೆ ಈ ಸಾಧನೆ ಮಾಡಿದ ಮುಂಬೈ ತಂಡದ 5ನೇ ಬ್ಯಾಟರ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ರೋಹಿತ್ ಶರ್ಮಾ (224), ಕೀರನ್ ಪೊಲಾರ್ಡ್ (223), ಇಶಾನ್ ಕಿಶನ್ (103), ಮತ್ತು ಹಾರ್ದಿಕ್ ಪಾಂಡ್ಯ (105) ಮಾತ್ರ ಮುಂಬೈ ಇಂಡಿಯನ್ಸ್​ ಪರ ನೂರಕ್ಕಿಂತ ಅಧಿಕ ಸಿಕ್ಸ್ ಬಾರಿಸಿದ್ದಾರೆ. ಇದೀಗ ಈ ಪಟ್ಟಿಗೆ ಐದನೇ ಬ್ಯಾಟ್ಸ್​ಮನ್​ ಆಗಿ ಸೂರ್ಯಕುಮಾರ್ ಯಾದವ್ ಎಂಟ್ರಿ ಕೊಟ್ಟಿದ್ದಾರೆ.

ಇದಕ್ಕೂ ಮುನ್ನ ರೋಹಿತ್ ಶರ್ಮಾ (224), ಕೀರನ್ ಪೊಲಾರ್ಡ್ (223), ಇಶಾನ್ ಕಿಶನ್ (103), ಮತ್ತು ಹಾರ್ದಿಕ್ ಪಾಂಡ್ಯ (105) ಮಾತ್ರ ಮುಂಬೈ ಇಂಡಿಯನ್ಸ್​ ಪರ ನೂರಕ್ಕಿಂತ ಅಧಿಕ ಸಿಕ್ಸ್ ಬಾರಿಸಿದ್ದಾರೆ. ಇದೀಗ ಈ ಪಟ್ಟಿಗೆ ಐದನೇ ಬ್ಯಾಟ್ಸ್​ಮನ್​ ಆಗಿ ಸೂರ್ಯಕುಮಾರ್ ಯಾದವ್ ಎಂಟ್ರಿ ಕೊಟ್ಟಿದ್ದಾರೆ.

3 / 5
2018 ರಿಂದ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ಸೂರ್ಯಕುಮಾರ್ ಯಾದವ್, ಈವರೆಗೆ 2,807 ರನ್‌ ಕಲೆಹಾಕಿದ್ದಾರೆ. ಅಲ್ಲದೆ ಕಳೆದ ಸೀಸನ್​ನಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 605 ರನ್ ಬಾರಿಸಿದ್ದರು.

2018 ರಿಂದ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ಸೂರ್ಯಕುಮಾರ್ ಯಾದವ್, ಈವರೆಗೆ 2,807 ರನ್‌ ಕಲೆಹಾಕಿದ್ದಾರೆ. ಅಲ್ಲದೆ ಕಳೆದ ಸೀಸನ್​ನಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 605 ರನ್ ಬಾರಿಸಿದ್ದರು.

4 / 5
ವಿಶೇಷ ಎಂದರೆ ಸಚಿನ್ ತೆಂಡೂಲ್ಕರ್ ಬಳಿಕ ಮುಂಬೈ ಇಂಡಿಯನ್ಸ್​ ಪರ ಐಪಿಎಲ್ ಸೀಸನ್​ವೊಂದರಲ್ಲಿ 600 ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಸೂರ್ಯಕುಮಾರ್ ಹೆಸರಿನಲ್ಲಿದೆ. ಸಚಿನ್ 2010 ರಲ್ಲಿ 618 ರನ್​ ಬಾರಿಸಿ ಈ ಸಾಧನೆ ಮಾಡಿದರೆ, ಸೂರ್ಯಕುಮಾರ್ ಯಾದವ್ ಐಪಿಎಲ್ 2023 ರಲ್ಲಿ 605 ರನ್​ ಸಿಡಿಸಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ 6 ಇನಿಂಗ್ಸ್ ಆಡಿರುವ ಸೂರ್ಯ ಇದುವರೆಗೆ 166 ರನ್ ಕಲೆಹಾಕಿದ್ದಾರೆ.

ವಿಶೇಷ ಎಂದರೆ ಸಚಿನ್ ತೆಂಡೂಲ್ಕರ್ ಬಳಿಕ ಮುಂಬೈ ಇಂಡಿಯನ್ಸ್​ ಪರ ಐಪಿಎಲ್ ಸೀಸನ್​ವೊಂದರಲ್ಲಿ 600 ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಸೂರ್ಯಕುಮಾರ್ ಹೆಸರಿನಲ್ಲಿದೆ. ಸಚಿನ್ 2010 ರಲ್ಲಿ 618 ರನ್​ ಬಾರಿಸಿ ಈ ಸಾಧನೆ ಮಾಡಿದರೆ, ಸೂರ್ಯಕುಮಾರ್ ಯಾದವ್ ಐಪಿಎಲ್ 2023 ರಲ್ಲಿ 605 ರನ್​ ಸಿಡಿಸಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ 6 ಇನಿಂಗ್ಸ್ ಆಡಿರುವ ಸೂರ್ಯ ಇದುವರೆಗೆ 166 ರನ್ ಕಲೆಹಾಕಿದ್ದಾರೆ.

5 / 5
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ