AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2008 ರಿಂದ ಐಪಿಎಲ್​ನಲ್ಲಿದ್ದರೂ RCB ಆಟಗಾರ ಆಡಿದ್ದು ಕೇವಲ 7 ಪಂದ್ಯ..!

IPL 2024 RCB: ಈ ಬಾರಿ ಐಪಿಎಲ್ ಮಿನಿ ಆಕ್ಷನ್​ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿತ್ತು. ಅಷ್ಟೇ ಅಲ್ಲದೆ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಿತ್ತು. ಈ ಆಟಗಾರರಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕಿಲ್ಲ ಎಂಬುದು ವಿಶೇಷ.

TV9 Web
| Edited By: |

Updated on: Dec 26, 2023 | 2:57 PM

Share
ಈ ಬಾರಿಯ ಐಪಿಎಲ್ ಹರಾಜಿನ ಮೂಲಕ RCB ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಸ್ವಪ್ನಿಲ್ ಸಿಂಗ್ ಕೂಡ ಒಬ್ಬರು. ಉತ್ತರ ಪ್ರದೇಶ ಮೂಲದ 32 ವರ್ಷದ ಸ್ವಪ್ನಿಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 20 ಲಕ್ಷ ರೂ.ಗೆ ಖರೀದಿಸಿದೆ.

ಈ ಬಾರಿಯ ಐಪಿಎಲ್ ಹರಾಜಿನ ಮೂಲಕ RCB ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಸ್ವಪ್ನಿಲ್ ಸಿಂಗ್ ಕೂಡ ಒಬ್ಬರು. ಉತ್ತರ ಪ್ರದೇಶ ಮೂಲದ 32 ವರ್ಷದ ಸ್ವಪ್ನಿಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 20 ಲಕ್ಷ ರೂ.ಗೆ ಖರೀದಿಸಿದೆ.

1 / 7
ವಿಶೇಷ ಎಂದರೆ ಸ್ವಪ್ನಿಲ್ ಸಿಂಗ್ ಐಪಿಎಲ್​ಗೆ ಎಂಟ್ರಿ ಕೊಟ್ಟು 16 ವರ್ಷಗಳೇ ಕಳೆದಿವೆ. ಆದರೆ ಆಡಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದು ಕೂಡ ಮೂರು ತಂಡಗಳನ್ನು ಪ್ರತಿನಿಧಿಸಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ವಿಶೇಷ ಎಂದರೆ ಸ್ವಪ್ನಿಲ್ ಸಿಂಗ್ ಐಪಿಎಲ್​ಗೆ ಎಂಟ್ರಿ ಕೊಟ್ಟು 16 ವರ್ಷಗಳೇ ಕಳೆದಿವೆ. ಆದರೆ ಆಡಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದು ಕೂಡ ಮೂರು ತಂಡಗಳನ್ನು ಪ್ರತಿನಿಧಿಸಿ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 7
ಅಂದರೆ 2008 ರ ಚೊಚ್ಚಲ ಐಪಿಎಲ್​ನಲ್ಲಿ ಸ್ವಪ್ನಿಲ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ 4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದಾದ ಬಳಿಕ 2016 ರಲ್ಲಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು 10 ಲಕ್ಷ ರೂ. ಗೆ ಸ್ವಪ್ನಿಲ್ ಅವರನ್ನು ಆಯ್ಕೆ ಮಾಡಿಕೊಂಡಿತ್ತು.

ಅಂದರೆ 2008 ರ ಚೊಚ್ಚಲ ಐಪಿಎಲ್​ನಲ್ಲಿ ಸ್ವಪ್ನಿಲ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ 4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದಾದ ಬಳಿಕ 2016 ರಲ್ಲಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು 10 ಲಕ್ಷ ರೂ. ಗೆ ಸ್ವಪ್ನಿಲ್ ಅವರನ್ನು ಆಯ್ಕೆ ಮಾಡಿಕೊಂಡಿತ್ತು.

3 / 7
ಇನ್ನು 2023 ರ ಹರಾಜಿನಲ್ಲಿ ಸ್ವಪ್ನಿಲ್ ಸಿಂಗ್ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಿದ್ದರು. ಹೀಗೆ ಮೂರು ತಂಡಗಳಲ್ಲಿ ಕಾಣಿಸಿಕೊಂಡಿದ್ದ ಬೌಲಿಂಗ್ ಆಲ್​ರೌಂಡರ್ ಆಡಿರುವ ಒಟ್ಟು ಪಂದ್ಯಗಳ ಸಂಖ್ಯೆ 7.

ಇನ್ನು 2023 ರ ಹರಾಜಿನಲ್ಲಿ ಸ್ವಪ್ನಿಲ್ ಸಿಂಗ್ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಿದ್ದರು. ಹೀಗೆ ಮೂರು ತಂಡಗಳಲ್ಲಿ ಕಾಣಿಸಿಕೊಂಡಿದ್ದ ಬೌಲಿಂಗ್ ಆಲ್​ರೌಂಡರ್ ಆಡಿರುವ ಒಟ್ಟು ಪಂದ್ಯಗಳ ಸಂಖ್ಯೆ 7.

4 / 7
ಈ ಏಳು ಪಂದ್ಯಗಳಿಂದ ಸ್ವಪ್ನಿಲ್ ಸಿಂಗ್ ಕಲೆಹಾಕಿರುವುದು ಕೇವಲ 14 ರನ್ ಮಾತ್ರ. ಹಾಗೆಯೇ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 75 ಪಂದ್ಯಗಳಿಂದ ಪಡೆದಿರುವುದು 63 ವಿಕೆಟ್​ಗಳು ಮಾತ್ರ. ಇದೇ ವೇಳೆ ಬ್ಯಾಟಿಂಗ್​​ನಲ್ಲಿ ಕಲೆಹಾಕಿದ್ದು 849 ರನ್​ಗಳು.

ಈ ಏಳು ಪಂದ್ಯಗಳಿಂದ ಸ್ವಪ್ನಿಲ್ ಸಿಂಗ್ ಕಲೆಹಾಕಿರುವುದು ಕೇವಲ 14 ರನ್ ಮಾತ್ರ. ಹಾಗೆಯೇ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 75 ಪಂದ್ಯಗಳಿಂದ ಪಡೆದಿರುವುದು 63 ವಿಕೆಟ್​ಗಳು ಮಾತ್ರ. ಇದೇ ವೇಳೆ ಬ್ಯಾಟಿಂಗ್​​ನಲ್ಲಿ ಕಲೆಹಾಕಿದ್ದು 849 ರನ್​ಗಳು.

5 / 7
ಇದಾಗ್ಯೂ ಈ ಬಾರಿ ಆರ್​ಸಿಬಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕದೇ 32 ವರ್ಷದ ಆಟಗಾರನಿಗೆ ಅವಕಾಶ ನೀಡಿರುವುದು ಅಚ್ಚರಿಯೇ ಸರಿ. ಈ ಅಚ್ಚರಿಯ ಆಯ್ಕೆ RCB ತಂಡದ ಪಾಲಿಗೆ ಹೇಗೆ ವರವಾಗಲಿದೆ ಎಂಬುದನ್ನು ಕಾದುನೋಡಬೇಕಷ್ಟೇ.

ಇದಾಗ್ಯೂ ಈ ಬಾರಿ ಆರ್​ಸಿಬಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕದೇ 32 ವರ್ಷದ ಆಟಗಾರನಿಗೆ ಅವಕಾಶ ನೀಡಿರುವುದು ಅಚ್ಚರಿಯೇ ಸರಿ. ಈ ಅಚ್ಚರಿಯ ಆಯ್ಕೆ RCB ತಂಡದ ಪಾಲಿಗೆ ಹೇಗೆ ವರವಾಗಲಿದೆ ಎಂಬುದನ್ನು ಕಾದುನೋಡಬೇಕಷ್ಟೇ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’