AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2008 ರಿಂದ ಐಪಿಎಲ್​ನಲ್ಲಿದ್ದರೂ RCB ಆಟಗಾರ ಆಡಿದ್ದು ಕೇವಲ 7 ಪಂದ್ಯ..!

IPL 2024 RCB: ಈ ಬಾರಿ ಐಪಿಎಲ್ ಮಿನಿ ಆಕ್ಷನ್​ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿತ್ತು. ಅಷ್ಟೇ ಅಲ್ಲದೆ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಿತ್ತು. ಈ ಆಟಗಾರರಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕಿಲ್ಲ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Dec 26, 2023 | 2:57 PM

ಈ ಬಾರಿಯ ಐಪಿಎಲ್ ಹರಾಜಿನ ಮೂಲಕ RCB ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಸ್ವಪ್ನಿಲ್ ಸಿಂಗ್ ಕೂಡ ಒಬ್ಬರು. ಉತ್ತರ ಪ್ರದೇಶ ಮೂಲದ 32 ವರ್ಷದ ಸ್ವಪ್ನಿಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 20 ಲಕ್ಷ ರೂ.ಗೆ ಖರೀದಿಸಿದೆ.

ಈ ಬಾರಿಯ ಐಪಿಎಲ್ ಹರಾಜಿನ ಮೂಲಕ RCB ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಸ್ವಪ್ನಿಲ್ ಸಿಂಗ್ ಕೂಡ ಒಬ್ಬರು. ಉತ್ತರ ಪ್ರದೇಶ ಮೂಲದ 32 ವರ್ಷದ ಸ್ವಪ್ನಿಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 20 ಲಕ್ಷ ರೂ.ಗೆ ಖರೀದಿಸಿದೆ.

1 / 7
ವಿಶೇಷ ಎಂದರೆ ಸ್ವಪ್ನಿಲ್ ಸಿಂಗ್ ಐಪಿಎಲ್​ಗೆ ಎಂಟ್ರಿ ಕೊಟ್ಟು 16 ವರ್ಷಗಳೇ ಕಳೆದಿವೆ. ಆದರೆ ಆಡಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದು ಕೂಡ ಮೂರು ತಂಡಗಳನ್ನು ಪ್ರತಿನಿಧಿಸಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ವಿಶೇಷ ಎಂದರೆ ಸ್ವಪ್ನಿಲ್ ಸಿಂಗ್ ಐಪಿಎಲ್​ಗೆ ಎಂಟ್ರಿ ಕೊಟ್ಟು 16 ವರ್ಷಗಳೇ ಕಳೆದಿವೆ. ಆದರೆ ಆಡಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದು ಕೂಡ ಮೂರು ತಂಡಗಳನ್ನು ಪ್ರತಿನಿಧಿಸಿ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 7
ಅಂದರೆ 2008 ರ ಚೊಚ್ಚಲ ಐಪಿಎಲ್​ನಲ್ಲಿ ಸ್ವಪ್ನಿಲ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ 4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದಾದ ಬಳಿಕ 2016 ರಲ್ಲಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು 10 ಲಕ್ಷ ರೂ. ಗೆ ಸ್ವಪ್ನಿಲ್ ಅವರನ್ನು ಆಯ್ಕೆ ಮಾಡಿಕೊಂಡಿತ್ತು.

ಅಂದರೆ 2008 ರ ಚೊಚ್ಚಲ ಐಪಿಎಲ್​ನಲ್ಲಿ ಸ್ವಪ್ನಿಲ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ 4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದಾದ ಬಳಿಕ 2016 ರಲ್ಲಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು 10 ಲಕ್ಷ ರೂ. ಗೆ ಸ್ವಪ್ನಿಲ್ ಅವರನ್ನು ಆಯ್ಕೆ ಮಾಡಿಕೊಂಡಿತ್ತು.

3 / 7
ಇನ್ನು 2023 ರ ಹರಾಜಿನಲ್ಲಿ ಸ್ವಪ್ನಿಲ್ ಸಿಂಗ್ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಿದ್ದರು. ಹೀಗೆ ಮೂರು ತಂಡಗಳಲ್ಲಿ ಕಾಣಿಸಿಕೊಂಡಿದ್ದ ಬೌಲಿಂಗ್ ಆಲ್​ರೌಂಡರ್ ಆಡಿರುವ ಒಟ್ಟು ಪಂದ್ಯಗಳ ಸಂಖ್ಯೆ 7.

ಇನ್ನು 2023 ರ ಹರಾಜಿನಲ್ಲಿ ಸ್ವಪ್ನಿಲ್ ಸಿಂಗ್ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಿದ್ದರು. ಹೀಗೆ ಮೂರು ತಂಡಗಳಲ್ಲಿ ಕಾಣಿಸಿಕೊಂಡಿದ್ದ ಬೌಲಿಂಗ್ ಆಲ್​ರೌಂಡರ್ ಆಡಿರುವ ಒಟ್ಟು ಪಂದ್ಯಗಳ ಸಂಖ್ಯೆ 7.

4 / 7
ಈ ಏಳು ಪಂದ್ಯಗಳಿಂದ ಸ್ವಪ್ನಿಲ್ ಸಿಂಗ್ ಕಲೆಹಾಕಿರುವುದು ಕೇವಲ 14 ರನ್ ಮಾತ್ರ. ಹಾಗೆಯೇ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 75 ಪಂದ್ಯಗಳಿಂದ ಪಡೆದಿರುವುದು 63 ವಿಕೆಟ್​ಗಳು ಮಾತ್ರ. ಇದೇ ವೇಳೆ ಬ್ಯಾಟಿಂಗ್​​ನಲ್ಲಿ ಕಲೆಹಾಕಿದ್ದು 849 ರನ್​ಗಳು.

ಈ ಏಳು ಪಂದ್ಯಗಳಿಂದ ಸ್ವಪ್ನಿಲ್ ಸಿಂಗ್ ಕಲೆಹಾಕಿರುವುದು ಕೇವಲ 14 ರನ್ ಮಾತ್ರ. ಹಾಗೆಯೇ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 75 ಪಂದ್ಯಗಳಿಂದ ಪಡೆದಿರುವುದು 63 ವಿಕೆಟ್​ಗಳು ಮಾತ್ರ. ಇದೇ ವೇಳೆ ಬ್ಯಾಟಿಂಗ್​​ನಲ್ಲಿ ಕಲೆಹಾಕಿದ್ದು 849 ರನ್​ಗಳು.

5 / 7
ಇದಾಗ್ಯೂ ಈ ಬಾರಿ ಆರ್​ಸಿಬಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕದೇ 32 ವರ್ಷದ ಆಟಗಾರನಿಗೆ ಅವಕಾಶ ನೀಡಿರುವುದು ಅಚ್ಚರಿಯೇ ಸರಿ. ಈ ಅಚ್ಚರಿಯ ಆಯ್ಕೆ RCB ತಂಡದ ಪಾಲಿಗೆ ಹೇಗೆ ವರವಾಗಲಿದೆ ಎಂಬುದನ್ನು ಕಾದುನೋಡಬೇಕಷ್ಟೇ.

ಇದಾಗ್ಯೂ ಈ ಬಾರಿ ಆರ್​ಸಿಬಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕದೇ 32 ವರ್ಷದ ಆಟಗಾರನಿಗೆ ಅವಕಾಶ ನೀಡಿರುವುದು ಅಚ್ಚರಿಯೇ ಸರಿ. ಈ ಅಚ್ಚರಿಯ ಆಯ್ಕೆ RCB ತಂಡದ ಪಾಲಿಗೆ ಹೇಗೆ ವರವಾಗಲಿದೆ ಎಂಬುದನ್ನು ಕಾದುನೋಡಬೇಕಷ್ಟೇ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow us
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ