IPL 2024: ಕ್ಯಾಪ್ಟನ್ ಪಾಂಡ್ಯಗೆ ಅಗ್ನಿಪರೀಕ್ಷೆ..!

Edited By:

Updated on: Apr 01, 2024 | 7:22 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ ಹಾರ್ದಿಕ್ ಪಾಂಡ್ಯ ಪಡೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಸೋಲನುಭವಿಸಿತ್ತು.

1 / 6
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್​-17ರ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ತಂಡವು ಇದೀಗ ಮೂರನೇ ಪಂದ್ಯಕ್ಕಾಗಿ ಸಜ್ಜಾಗಿ ನಿಂತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ (ಏ.1) ನಡೆಯಲಿರುವ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್​-17ರ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ತಂಡವು ಇದೀಗ ಮೂರನೇ ಪಂದ್ಯಕ್ಕಾಗಿ ಸಜ್ಜಾಗಿ ನಿಂತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ (ಏ.1) ನಡೆಯಲಿರುವ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

2 / 6

ಆದರೆ ಈ ಪಂದ್ಯವು ಹಾರ್ದಿಕ್ ಪಾಂಡ್ಯ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಡುವ ಸಾಧ್ಯತೆಯಿದೆ. ಏಕೆಂದರೆ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಇದೇ ಮೊದಲ ಬಾರಿಗೆ ವಾಂಖೆಡೆ ಸ್ಟೇಡಿಯಂನಲ್ಲಿ ಕಣಕ್ಕಿಳಿಯುತ್ತಿದೆ. ಇದಕ್ಕೂ ಮುನ್ನ ಮುಂಬೈ ಅಹಮದಾಬಾದ್ ಮತ್ತು ಹೈದರಾಬಾದ್​ನಲ್ಲಿ ಪಂದ್ಯಗಳನ್ನಾಡಿತ್ತು.

3 / 6

ಈ ಎರಡು ಪಂದ್ಯಗಳ ವೇಳೆ ರೋಹಿತ್ ಶರ್ಮಾ ಅವರ ಅಭಿಮಾನಿಗಳಿಂದ ಹಾರ್ದಿಕ್ ಪಾಂಡ್ಯ ನಿಂದನೆ ಅನುಭವಿಸಿದ್ದರು. ಅದರಲ್ಲೂ ಪಾಂಡ್ಯ ಅವರ ತವರು ಅಹಮದಾಬಾದ್​ನಲ್ಲೂ ಮೂದಲಿಸಲಾಗಿತ್ತು. ಇದೀಗ ಮುಂಬೈ ಕಾ ರಾಜ ಖ್ಯಾತಿಯ ರೋಹಿತ್ ಶರ್ಮಾ ಅವರ ತವರು ಮೈದಾನ ವಾಂಖೆಡೆಯಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ಸಜ್ಜಾಗಿದೆ.

4 / 6

ಹೇಳಿ ಕೇಳಿ ವಾಂಖೆಡೆ ಮೈದಾನ ರೋಹಿತ್ ಶರ್ಮಾರ ಅಡ್ಡ. ಇತ್ತ ಹಿಟ್​ಮ್ಯಾನ್ ಅಭಿಮಾನಿಗಳು ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಒಪ್ಪಿಕೊಳ್ಳಲು ಸುತಾರಾಂ ಸಿದ್ಧರಿಲ್ಲ. ಹೀಗಾಗಿಯೇ ಮುಂಬೈ ಇಂಡಿಯನ್ಸ್ ತಂಡದ ಹೊಸ ನಾಯಕನನ್ನು ಮೊದಲೆರಡು ಪಂದ್ಯಗಳಲ್ಲಿ ಮೂದಲಿಸಿದ್ದಾರೆ. ಇದೀಗ ವಾಂಖೆಡೆಯಲ್ಲಿ ಕಣಕ್ಕಿಳಿಯಲಿರುವ ಪಾಂಡ್ಯ ಮತ್ತೆ ಅವಮಾನಕ್ಕೊಳಗಾಗುವ ಸಾಧ್ಯತೆಯಿದೆ.

5 / 6

ಈಗಾಗಲೇ ರೋಹಿತ್ ಶರ್ಮಾ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಪಂದ್ಯದ ಟಿಕೆಟ್​ಗಳನ್ನು ಬುಕ್ ಮಾಡಿಕೊಂಡಿದ್ದು, ಅದರಂತೆ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಹಿಟ್​ಮ್ಯಾನ್ ಘೋಷಣೆಗಳು ಮುಗಿಲೆತ್ತರಕ್ಕೆ ಮೊಳಗುವುದು ಗ್ಯಾರಂಟಿ ಎನ್ನಬಹುದು.

6 / 6

ಇದರ ನಡುವೆ ಕೇಳಿ ಬರಲಿರುವ ಮೂದಲಿಕೆಯನ್ನು ಹಾರ್ದಿಕ್ ಪಾಂಡ್ಯ ಸಹಿಸಿಕೊಳ್ಳಲೇಬೇಕು. ಈ ಕಠಿಣ ಪರಿಸ್ಥಿತಿಯನ್ನು ಕ್ಯಾಪ್ಟನ್ ಪಾಂಡ್ಯ ಹೇಗೆ ಎದುರಿಸಲಿದ್ದಾರೆ ಎಂಬುದು ಇಂದು ಗೊತ್ತಾಗಲಿದೆ.

Loading...
Unable to load recommendations.
Follow Us